ಹಾರ, ಹಣ್ಣು ಬೇಡ; ಸರ್ಕಾರದ ಆದೇಶಕ್ಕೆ ಹಾಲಪ್ಪ ಆಕ್ರೋಶ
Team Udayavani, Aug 22, 2021, 5:23 PM IST
ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಘೋಷಿಸಿದರು.
ಇದನ್ನೂ ಓದಿ : ಬಿಲ್ ಗೇಟ್ಸ್ ಗೆ ಪಾಕಿಸ್ತಾನದ ನಖ್ವಿ 100 ಮಿಲಿಯನ್ ಪಂಗನಾಮ ಹಾಕಿದ್ದು ಹೇಗೆ..?
ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾರೋ ಒಬ್ಬರು ನನಗೆ ಸಮಾರಂಭಗಳಲ್ಲಿ ಹಾರ, ಶಾಲು ಬೇಡ ಎಂದಿದ್ದನ್ನು ಮಾಧ್ಯಮದವರು ಶಹಭಾಷ್ಗಿರಿ ಕೊಟ್ಟು ಪ್ರಕಟಿಸಿದ್ದನ್ನೇ ಆಧಾರವಾಗಿಟ್ಟುಕೊಂಡು ಸರ್ಕಾರ ಹಾರ, ಹಣ್ಣು ಬೇಡ ಎಂದು ಆದೇಶ ಹೊರಡಿಸುತ್ತದೆ. ಇವೆಲ್ಲ ಕೀಳು ಪ್ರಚಾರದ ಸಾಮಗ್ರಿಯಾಗುತ್ತವೆ. ಇಂತಹ ಆದೇಶದಿಂದ ಹೂವು ಬೆಳೆಯುವವ, ಕಟ್ಟುವವ, ಮಾರುವವ… ಹೀಗೆ ಹಲವು ಹಂತದ ಜನರಿಗೆ ಸಂಕಷ್ಟ ಬರಲಿದೆ. ಉಪಯೋಗವಾಗುವ ವಸ್ತುಗಳನ್ನು ಕೊಡುವುದು ಮುಖ್ಯ ಎಂಬುದನ್ನು ಒಪ್ಪಬಹುದು. ಆದರೆ ಅದನ್ನು ನಿರ್ದಿಷ್ಟಪಡಿಸುವ ಕೆಲಸ ಆಗಬಾರದು. ಒಂದು ಹೂವಿನ ಹಾರದ ಹಿಂದೆಯೂ ಹಲವರ ಬದುಕಿದೆ ಎಂಬುದನ್ನು ಮರೆಯಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಹಿಂದೆ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್, ನನಗೆ ಸನ್ಮಾನ ಮಾಡುವುದಿದ್ದರೆ ಉಣ್ಣೆ ಶಾಲು, ಹತ್ತಿ ಶಾಲು ಕೊಡಿ. ರೇಷ್ಮೆ ಶಾಲು, ಹಣ್ಣು, ಹಾರ ಬೇಡ ಎಂದು ಹೇಳುತ್ತಿದ್ದರು. ಅದನ್ನು ಒಟ್ಟು ಮಾಡಿ ಅವರು ಚಳಿಯಿಂದ ನಡುಗುವ ಬಡವರಿಗೆ ವಿತರಿಸುತ್ತಿದ್ದರು. ಈಗ ಸಭೆ ಸಮಾರಂಭಗಳಲ್ಲಿ ಹಾರ, ಶಾಲು, ನೆನಪಿನ ಕಾಣಿಕೆ ಕೊಡಬೇಡಿ. ಅದರ ಬದಲು ಪುಸ್ತಕ ಕೊಡಿ ಎಂದು ಹೇಳುವುದು ಕೂಡ ಪ್ರಶ್ನಾರ್ಹ. ನಾನೂ ಸಹ ಪುಸ್ತಕ ಪ್ರೇಮಿ. ನಮ್ಮ ಮನೆಯಲ್ಲೂ ಕುವೆಂಪು ಅವರಿಂದ ಹಿಡಿದು ಎಲ್ಲ ಲೇಖಕರ ಪುಸ್ತಕ ಗ್ರಂಥ ಭಂಡಾರದಲ್ಲಿದೆ. ಅತಿ ಹೆಚ್ಚು ಓದುವ ಶಾಸಕರಲ್ಲಿ ನಾನು ಪ್ರಮುಖನಾಗಿಯೂ ನಾನು ಎಷ್ಟು ಜನ ಪುಸ್ತಕಗಳನ್ನು ಈ ದಿನ ಓದುತ್ತಾರೆ ಎಂದು ಪ್ರಶ್ನಿಸಬೇಕಾಗುತ್ತದೆ. ನಾನು ಪುಸ್ತಕಗಳ ವಿರೋಧಿಯಲ್ಲ. ಆದರೆ ಉಪಯೋಗವಾಗುವ ವಸ್ತುಗಳನ್ನು ಗೌರವವಾಗಿ ಕೊಡುವುದಕ್ಕೆ ತಡೆ ಒಡ್ಡುವ ಕ್ರಮವೇ ಸರಿಯಲ್ಲ ಎಂದು ಹಾಲಪ್ಪ ಪ್ರತಿಪಾದಿಸಿದರು.
ಇದನ್ನೂ ಓದಿ : ದಲಿತ ವಿರೋಧಿ ಕಾಂಗ್ರೆಸ್ ವಿರುದ್ಧ ಜನಜಾಗೃತಿ: ಬಿಜೆಪಿ ಎಸ್.ಸಿ. ಮೋರ್ಚಾ ಸಭೆಯಲ್ಲಿ ನಿರ್ಣಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.