ಹಿಂದೂ ಸಮಾಜಕ್ಕೆ ಚೈತನ್ಯ ತುಂಬಿದ ಹರ್ಷ: ಹಾಲಶ್ರೀ ಸ್ವಾಮೀಜಿ


Team Udayavani, Mar 19, 2022, 4:36 PM IST

hindu

ಶಿವಮೊಗ್ಗ: ಹರ್ಷನ ಸಾವು ಇಡೀ ಹಿಂದೂ ಸಮಾಜಕ್ಕೆ ನಷ್ಟವಾಗಿದೆ. ಆದರೆ, ಹಿಂದೂ ಧರ್ಮದ ಜಾಗೃತಿ ಬೀಜ ಬಿತ್ತುವುದರ ಮೂಲಕ ಹಿಂದೂ ಸಮಾಜದ ಎಲ್ಲರಲ್ಲೂ ಚೈತನ್ಯ ತುಂಬಿದ್ದಾನೆ ಎಂದು ಹಿರೇಹಡಗಲಿ ಹಾಲಸ್ವಾಮಿ ಸಂಸ್ಥಾನ ಅಭಿನವ ಹಾಲಶ್ರೀ ಸ್ವಾಮೀಜಿ ಹೇಳಿದರು.

ನಗರದ ರವೀಂದ್ರನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಹರ್ಷ ಅವರ ಮಾಸಿಕ ಸಮಾರಾಧನೆ ಅಂಗವಾಗಿ ಹರ್ಷನ ಸದ್ಗತಿಗಾಗಿ ಅರ್ಚಕ ವೃಂದ ಹಮ್ಮಿಕೊಂಡಿದ್ದ ವಿಶೇಷ ಹೋಮದ ಬಳಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹರ್ಷನ ಕೀರ್ತಿ ಇಡೀ ದೇಶದಲ್ಲೇ ಹಬ್ಬಿದೆ. ಸೇಡಂ ತಾಲೂಕಿನಲ್ಲಿ ಕಂಡು ಕೇಳರಿಯದಷ್ಟು ಜನ ಅವನ ಪರವಾಗಿ ಸೇರಿದ್ದರು. 800 ಕಿ.ಮೀ. ದೂರದಲ್ಲಿ ಈ ರೀತಿಯ ಹಿಂದುತ್ವ ಜಾಗೃತಿ ಉಂಟಾಗಿದೆ ಎಂದರೆ ಹರ್ಷ ತಾನೊಬ್ಬ ಚೈತನ್ಯ ಸ್ವರೂಪಿಯಾಗಿ ಬೀಜ ಬಿತ್ತಿ ಹೋಗಿದ್ದಾನೆ. ಪುತ್ರ ಶೋಕ ನಿರಂತರ ಎಂಬ ಮಾತಿದೆ. ಇದು ಹರ್ಷನ ತಂದೆ- ತಾಯಿಗೆ ಮಾತ್ರ ಅನ್ವಯಿಸದೇ ಹಿಂದೂ ಸಮಾಜಕ್ಕೆ ಅನ್ವಯಿಸುವಂತಿದೆ ಎಂದರು.

ಸಿದ್ಧಲಿಂಗ ಸ್ವಾಮಿಗಳು ಕೋಮುದ್ವೇಷದ ಹೇಳಿಕೆ ನೀಡಿದ್ದಾರೆ ಎಂದು ಬಂಧಿಸಿದಾಗ ಸ್ವಾಮೀಜಿಗಳ ಪರವಾಗಿ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದ ಎಂದು ಸ್ವಾಮೀಜಿಗಳು ಹೇಳುತ್ತಿದ್ದರು. ಅಷ್ಟೇ ಅಲ್ಲದೇ, ಫೇಸ್‌ ಬುಕ್‌ನಲ್ಲಿ ಹಲವು ಸ್ವಾಮೀಜಿಗಳಿಗೆ ಹರ್ಷ ನೀವು ಜಾತಿ ಜಾತಿ ಎಂದು ಜಾತಿಯ ಹಿಂದೆ ಹೋದರೆ ಹಿಂದೂ ಸಮಾಜ ಬಲಪಡಿಸುವವರು ಯಾರು ಎಂದು ಪ್ರಶ್ನಿಸಿದ್ದ. ಈ ರೀತಿ ಹಿಂದೂ ಸಮಾಜದ ಧ್ವನಿಯಾಗಿ ಹೋರಾಟಗಾರನಾಗಿ ಹರ್ಷ ಎಲ್ಲರ ಗಮನ ಸೆಳೆದಿದ್ದ. ಇದಕ್ಕೆ ಸಾಕ್ಷಿ ಎಂಬಂತೆ ಉತ್ತರ ಪ್ರದೇಶದ ಕಾಶಿಯಲ್ಲಿ ಸಮಾರಂಭವೊಂದರಲ್ಲಿ ವಿಭಾ ಎನ್ನುವ ಹುಡುಗಿ ತನ್ನ ತೋಳಿಗೆ ಹಿಂದೂ ಹರ್ಷ ಎಂದು ಹಚ್ಚೆ ಹಾಕಿಸಿಕೊಂಡಿದ್ದಳು. ಈ ಬಗ್ಗೆ ಪ್ರಶ್ನಿಸಿದಾಗ ಹರ್ಷನನ್ನು ಹಿಂದೂ ಸಮಾಜ ಮರೆಯಬಾರದು ಎಂದು ಈ ರೀತಿ ಹಚ್ಚೆ ಹಾಕಿಸಿಕೊಂಡಿದ್ದಾಗಿ ತಿಳಿಸಿದ್ದಳು. ಇಷ್ಟರ ಮಟ್ಟಿಗೆ ಹರ್ಷ ಜನರಲ್ಲಿ ಜಾಗೃತಿ ಮೂಡಿಸಿದ್ದಾನೆ. ಹರ್ಷನ ತಾಯಿ ಶ್ರೇಷ್ಠಮಗನನ್ನು ಸಮಾಜಕ್ಕೆ ಕೊಟ್ಟಿದ್ದಾರೆ ಎಂದರು. ಈ ಸಂದರ್ಭದಲ್ಲಿ ಹರ್ಷ ಅವರ ಪೋಷಕರು, ಸೋದರಿ, ಮತ್ತು ಅ.ಪ. ರಾಮಭಟ್‌, ವಿನಯ್‌, ಅಭಿಷೇಕ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.