ಕಾಂಗ್ರೆಸ್ ಆಯ್ತು,ಈಗ ಪ್ರಾದೇಶಿಕ ಪಕ್ಷಗಳನ್ನು ಮುಕ್ತಗೊಳಿಸಲು ಹೊರಟಿದ್ದಾರೆ: HDK ವಾಗ್ದಾಳಿ


Team Udayavani, Jun 26, 2022, 2:47 PM IST

ಕಾಂಗ್ರೆಸ್ ಆಯ್ತು,ಈಗ ಪ್ರಾದೇಶಿಕ ಪಕ್ಷಗಳನ್ನು ಮುಕ್ತಗೊಳಿಸಲು ಹೊರಟಿದ್ದಾರೆ: HDK ವಾಗ್ದಾಳಿ

ಶಿವಮೊಗ್ಗ: ಮಹಾರಾಷ್ಟ್ರದಲ್ಲಿ ಅಪರೇಶನ್ ನಡೆಯುತ್ತಿರುವ ಬಗ್ಗೆ ಯಾವುದೇ ಸಂಶಯ ಇಲ್ಲ. ರಾಜ್ಯದಲ್ಲಿ ಕೂಡ ಅವತ್ತಿನ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡಿದ್ದರು. ಕೆಲ ಕಾಂಗ್ರೆಸ್ ನಾಯಕರ ಸಹಕಾರದೊಂದಿಗೆ ರಾಜ್ಯದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಪ್ರಹಸನ ಮಾಡಿದ್ದರು. ಅವತ್ತು ಕರ್ನಾಟಕ ಟು ಮುಂಬೈ. ಇವತ್ತು ಮುಂಬೈ ಟು ಸೂರತ್, ಸೂರತ್ ಟು ಗುವಾಹಟಿ ಕರ್ನಾಟಕದಿಂದ ಮುಂಬೈಗೆ ಕರೆದುಕೊಂಡು ಹೋಗಿದ್ದರು. ಇವತ್ತು ಮುಂಬೈನಿಂದ ಗುವಾಹಟಿ ವರೆಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.‌ಡಿ. ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಮಾತಾನಾಡಿದ ಅವರು, ಕರ್ನಾಟಕದಲ್ಲಿ ಶಾಂತಿಪ್ರಿಯರು. ‌ನಾವು ಯಾವುದೇ ಗಲಭೆಗಳಿಗೆ ಆಸ್ಪದ ಕೊಡಲಿಲ್ಲ. ಸರ್ಕಾರ ಮಾಡಲೇಬೇಕು ಎಂಬ ಏಳೆಂಟು ತಿಂಗಳ ಶ್ರಮದಿಂದ ಯಶಸ್ಸು ಕಂಡಿದ್ದರು. ಇಲ್ಲಿ ಸಹ ಸರ್ಕಾರ ಬೀಳಿಸಲು ಒಂದೂವರೆ ವರ್ಷದಿಂದ ಪ್ರಯತ್ನ ಮಾಡಿದ್ದರು. ಈಗ ಯಶಸ್ಸು ಕಂಡಿದ್ದಾರೆ. ಎಲ್ಲಿಗೆ ಹೋಗುತ್ತೇ ನೋಡೋಣ. ಕರ್ನಾಟಕದ ಪರಿಸ್ಥಿತಿ ಬೇರೆ, ಮುಂಬೈನ ಪರಿಸ್ಥಿತಿ ಬೇರೆ ಎಂದರು.

ಶಿವಸೇನೆಯವರು ನಿನ್ನೆಯಿಂದಲೇ ಬಂಡಾಯ ಹೋಗಿರುವ ಶಾಸಕರ ಕಛೇರಿ ಧ್ವಂಸ, ಗಲಭೆ ಆರಂಭವಾಗಿದೆ. ದೇಶದಲ್ಲಿ ಒಂದು ಕಡೆ ಬಿಜೆಪಿ ನಾಯಕರು ಉಪದೇಶ ಮಾಡುತ್ತಾರೆ. ಚುನಾಯಿತ ಸರ್ಕಾರ ಅಸ್ಥಿರಗೊಳಿಸಿ, ಅಧಿಕಾರ ಹಿಡಿಯುವ ತೀರ್ಮಾನ ಮಾಡಿದ್ದಾರೆ. ಇದು 2008 ರಾಜ್ಯದಲ್ಲಿ ಪ್ರಾರಂಭ ಆಯಿತು. 2014 ರ ನಂತರ ಜಾಸ್ತಿಯಾಗಿದ್ದು, ದೇಶವ್ಯಾಪಿ ಇದನ್ನು ವಿಸ್ತರಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ತ್ರಿಪುರಾ ಉಪಚುನಾವಣೆ; ಸಿಎಂ ಮಾಣಿಕ್ ಸಹಾಗೆ ಗೆಲುವು : ಬಿಜೆಪಿಗೆ 4 ರಲ್ಲಿ 3

ಗೋವಾದಲ್ಲಿ ಕೂಡ ಹೈಜಾಕ್ ಮಾಡಿ ಸರ್ಕಾರ ಮಾಡಿದರು. ರಾಜಸ್ಥಾನದಲ್ಲಿ ಪ್ರಯತ್ನ ಮಾಡಿದ್ರು. ಅದು ಯಾಕೋ ಸದ್ಯಕ್ಕೆ ಮುಂದೆ ಹೋಗಿದೆ.  ಪಶ್ಚಿಮ ಬಂಗಾಳದಲ್ಲಿ ಪ್ರಯತ್ನ ಮಾಡಿದ್ರು. ಆದರೆ, ಹೋರಾಟ ಮಾಡಿ ಮಮತಾ ಬ್ಯಾನರ್ಜಿ ಉಳಿಸಿಕೊಂಡರು. ಮುಂದೆ ರಾಜಸ್ಥಾನ ಅಥವಾ ಜಾರ್ಖಂಡ್ ಇರಬಹುದು. ಬಿಜೆಪಿಗೆ ವಿರೋಧ ಪಕ್ಷಗಳೇ ಇರಬಾರದು. ಅವುಗಳನ್ನು ಧಮನ ಮಾಡಬೇಕು ಎಂಬುದೇ ಅವರ ಸಿದ್ಧಾಂತ. ಬಿಜೆಪಿಯೇತರ ಸರ್ಕಾರ ದೇಶದಲ್ಲಿ ಇರಬಾರದು. ಕಾಂಗ್ರೆಸ್ ಮುಕ್ತ ಆಯಿತು. ಇದೀಗ ಪ್ರಾದೇಶಿಕ ಪಕ್ಷಗಳನ್ನು ಮುಕ್ತಗೊಳಿಸಲು ಹೊರಟಿದ್ದಾರೆ ಎಂದು ಟೀಕಿಸಿದರು.

ಮಹಾರಾಷ್ಟ್ರದ ಆಪರೇಷನ್ ಕಮಲಕ್ಕೆ ರಾಜ್ಯದ ಬಿಜೆಪಿ ನಾಯಕರ ಪಾತ್ರ ಇದೆ ಎಂದು ಅನಿಸಲ್ಲ. ಅಷ್ಟು ದೊಡ್ಡ ಮುಖಂಡರು ನಮ್ಮ ರಾಜ್ಯದಲ್ಲಿ ಇದ್ದಾರೆ ಅನಿಸಲ್ಲ. ಅಲ್ಲಿ ಹೋಗಿ 40 ಜನ ಶಿವಸೇನೆ ಎಂಎಲ್ಎ ಗಳನ್ನು ಮನವೊಲಿಸಿ ಕರೆದುಕೊಂಡು ಹೋಗ್ತಾರಾ..? ಹೈಕಮಾಂಡ್ ನಲ್ಲೇ ಎಕ್ಸ್‌ಪರ್ಟ್ ಇದ್ದಾರೆ. ಅಮಿತ್ ಷಾ ಗಿಂತ ದೊಡ್ಡ ಮುಖಂಡರು ಆಪರೇಷನ್ ಮಾಡಲು ಬೇಡ ಎಂದರು.

ಸ್ಪಷ್ಟ ಬಹುಮತ ಇದ್ದರೂ ಸರ್ಕಾರ ಉಳಿಯುತ್ತಾ -ಇಲ್ವಾ ಎಂಬ ಅನುಮಾನ ಪ್ರಾರಂಭವಾಗಿದೆ. ಅದರ ಬದಲು ಚುನಾವಣೆನೇ ನಡೆಸೋದು ಬೇಡ. ನೀವ್ಯಾರು ಚುನಾವಣೆಗೆ ನಿಲ್ಲಬೇಡಿ. ನಮ್ಮದು ಈ ರೀತಿ ಇದೆ. ಅಜೆಂಡಾ ಹೀಗಿದೆ. ಮನೆ ಏಕೆ ಹಾಳು ಮಾಡಿಕೊಳ್ಳುತ್ತಿರಿ ಎಂದು ರೆಸಲ್ಯೂಶನ್ ಮಾಡಿಬಿಡಿ. ದೇಶದಲ್ಲಿ ನೋ ಎಲೆಕ್ಷನ್ ಎಂದು ತೀರ್ಮಾನ ಮಾಡಿಬಿಡಿ, ಮುಗಿದು ಹೋಗುತ್ತದೆ ನಾವೆಲ್ಲ ಸುಮ್ಮನೆ ದುಡ್ಡು ಕಳೆದುಕೊಂಡು, ಆರೋಗ್ಯ ಕೆಡಿಸಿಕೊಂಡು ಯಾಕೆ ಚುನಾವಣೆ ಬೇಕು. ಹಲವು ರಾಜಕೀಯ ಪಕ್ಷಗಳು ಬೀದಿ ಪಾಲಾಗೋದು ತಪ್ಪುತ್ತದೆ ನಿಷೇಧ ಮಾಡಿ. ಬಿಜೆಪಿಯಲ್ಲಿದ್ದರೇ ಮಾತ್ರ ಉಳಿಗಾಲ. ಇನ್ನುಳಿದವರಿಗೆ ಉಳಿಗಾಲ ಇಲ್ಲ ಹೀಗೆ ಲೋಕಸಭೆಯಲ್ಲಿ ಒಂದು ಬಿಲ್ ಪಾಸ್ ಮಾಡಿಬಿಡಿ. ಸುಲಭವಾಗುತ್ತದೆ. ಬೇರೆಯವರು ನೆಮ್ಮದಿಯಿಂದ ಬದುಕಬಹುದು ಎಂದ ಮಾಜಿ ಸಿಎಂ ಕುಮಾರಸ್ವಾಮಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.