Rain: ತುಂಗಾ ತೀರದಲ್ಲಿ ದಿಢೀರ್ ಪ್ರವಾಹ ಭೀತಿ; ಬಿದನೂರು ನಗರದಲ್ಲಿ 316 ಮಿಮೀ ದಾಖಲೆ ಮಳೆ
Team Udayavani, Jul 30, 2024, 3:13 PM IST
ಶಿವಮೊಗ್ಗ: ಇನ್ನೇನು ಮಳೆ ಕಡಿಮೆಯಾಯ್ತು ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ವರುಣದೇವ ಶಾಕ್ ಕೊಟ್ಟಿದ್ದಾನೆ. ಮಲೆನಾಡು ಭಾಗದಲ್ಲಿ ದಿಢೀರ್ ಭಾರೀ ಮಳೆಯಿಂದ ತುಂಗಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಸೋಮವಾರ ಬೆಳಗ್ಗೆ 35 ಸಾವಿರ ಕ್ಯೂಸೆಕ್ಸ್ಗೆ ಕುಸಿದಿದ್ದ ತುಂಗಾ ನದಿ ಒಳಹರಿವು ಮಂಗಳವಾರ ಬೆಳಗ್ಗೆಗೆ 50 ಸಾವಿರ ಕ್ಯೂಸೆಕ್ಸ್ಗೆ ಏರಿಕೆಯಾಗಿದೆ. ಮಧ್ಯಾಹ್ನ 2 ಗಂಟೆ ಹೊತ್ತಿಗೆ 77 ಸಾವಿರ ಕ್ಯೂಸೆಕ್ಸ್ಗೆ ದಾಟಿದ್ದು ಸಂಜೆ ಹೊತ್ತಿಗೆ 90 ರಿಂದ 1 ಲಕ್ಷ ಕ್ಯೂಸೆಕ್ಸ್ವರೆಗೂ ಏರಿಕೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿಯ ರಾಮಮಂಟಪ ಇದೇ ಮೊದಲ ಬಾರಿಗೆ ಮುಳುಗಿದ್ದು ಪ್ರವಾಹದ ಮನ್ಸೂಚನೆ ತೋರಿಸಿದೆ. ರಾತ್ರಿವರೆಗೂ ಮಳೆ ಇಲ್ಲ ಎಂದು ಸುಮ್ಮನಾಗಿದ್ದ ನೀರಾವರಿ ಇಲಾಖೆ ಅಧಿಕಾರಿಗಳು ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.
ಬಿದನೂರು ನಗರದಲ್ಲಿ 316 ಮಿಮೀ ಮಳೆ:
ಮಂಗಳವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 316 ಮಿ.ಮೀ. ಮಳೆ ದಾಖಲಾಗಿದೆ. ಇದರಿಂದ ನಗರ ವ್ಯಾಪ್ತಿಯಲ್ಲಿ ಪ್ರವಾಹ ಎದುರಾಗಿತ್ತು. ಕೆಲ ಶಾಲೆಗಳಿಗೆ ರಹೆ ಸಹ ನೀಡಲಾಗಿತ್ತು.
ಮಾಸ್ತಿಕಟ್ಟೆ 240 ಮಿಮೀ, ಚಕ್ರಾನಗರ 220 ಮಿಮೀ, ಯಡೂರು 217 ಮಿಮೀ, ಹುಲಿಕಲ್ 210 ಮಿಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.