ಕೆರೆಬೇಟೆ ಗಲಾಟೆ ಪ್ರಕರಣ: ರೈತರ ಹಿತ ಕಾಯ್ದ ಗೃಹ ಸಚಿವರಿಗೆ ಅಭಿನಂದನೆ
ಕಾನುಗೋಡು ಕೆರೆಬೇಟೆ ಪ್ರಕರಣ ರದ್ದುಪಡಿಸುವಂತೆ ಮನವಿ
Team Udayavani, Jul 31, 2022, 6:51 PM IST
ಸೊರಬ: ಕಾನುಗೋಡು ಕೆರೆಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕ ರೈತರ ಹಿತ ಕಾಯ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತೀರ್ಥಹಳ್ಳಿಯಲ್ಲಿ ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಕಾನುಗೋಡು ಕೆರೆಬೇಟೆ ಪ್ರಕರಣವನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಯಿತು. ಸ್ಪಂದಿಸಿದ ಗೃಹ ಸಚಿವರು ತಕ್ಷಣವೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕಾರವಾರ ಜಿಲ್ಲಾವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದರು. ಮಹಾಭಲೇಶ್ ತಡಗಳಲೆ ಸೇರಿದಂತೆ ತಾಲೂಕಿನ ಅನೇಕ ರೈತರು ಉಪಸ್ಥಿತರಿದ್ದರು.
ಸಿದ್ದಾಪುರ ತಾಲೂಕಿನ ಕೆರೆಬೇಟೆ ವೇಳೆ ಕೆರೆಯಲ್ಲಿ ಮೀನು ಸಿಗಲಿಲ್ಲ ಎಂಬ ಕಾರಣಕ್ಕೆ ಗಲಾಟೆ ನಡೆದಿತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಸೊರಬ ತಾಲೂಕು ಸೇರಿದಂತೆ ನೆರೆಯ ತಾಲೂಕಿನ ಅಮಾಯಕ ರೈತರನ್ನು ರಾತ್ರೋ ರಾತ್ರಿ ಬಂಧಿಸಲಾಗಿತ್ತು. ಇದನ್ನು ಗೃಹಸಚಿವರ ಗಮನಕ್ಕೆ ಹುಲ್ತಿಕೊಪ್ಪ ಶ್ರೀಧರ್ ನೇತೃತ್ವದಲ್ಲಿ ತರಲಾಗಿತ್ತು. ಅಂದು ಗೃಹ ಸಚಿವರು ಅಮಾಯಕ ರೈತರ ಬಂಧನ ನಿಲ್ಲಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಹಾಗೂ ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಿದ್ದರು. ಈ ಮೂಲಕ ಸಾವಿರಾರು ರೈತರ ಬಂಧನ ತಪ್ಪಿಸಿ, ಹಿತ ಕಾಯ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ
Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.