Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

ಹಲವು ಜೀವ ಉಳಿಸಿದ ಮರ... ತಪ್ಪಿದ ಭಾರೀ ದುರಂತ

Team Udayavani, Jul 1, 2024, 7:11 PM IST

1-csaddasd

ಹೊಸನಗರ: ಸರಕಾರಿ ಬಸ್ ಮತ್ತು ಬ್ಯಾಂಕಿಗೆ ಹಣ ಸಾಗಿಸುತ್ತಿದ್ದ ಸಿಎಂಎಸ್ ವಾಹನದ ನಡುವೆ ಅಪಘಾತ ಸಂಭವಿಸಿ ಬಸ್ಸು ಕಮರಿಗೆ ಬಿದ್ದ ಘಟನೆ ರಾಣೇಬೆನ್ನೂರು ಬೈಂದೂರು ಹೆದ್ದಾರಿಯ ಗಾಜನೂರು ಕ್ರಾಸ್ ಬಳಿ ಸೋಮವಾರ ನಡೆದಿದೆ.

ಬೆಂಗಳೂರು ನಿಂದ ಭಟ್ಕಳ ಕಡೆ ಸಾಗುತ್ತಿದ್ದ ಬಸ್ಸು, ನಿಟ್ಟೂರು ಬ್ಯಾಂಕಿಗೆ ಹಣ ಹಾಕಿ ಬರುತ್ತಿದ್ದ ಬ್ಯಾಂಕ್ ಸಿಎಂಎಸ್ ವಾಹನದ ನಡುವೆ ಬಪ್ಪನಮನೆ ಸಮಗೋಡು ನಡುವಿನ ಗಾಜನೂರು ಕ್ರಾಸ್ ನಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಉರುಳಿದೆ. ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು.

ಮರದ ಆಸರೆ
ಕೆಳಕ್ಕೆ ಉರುಳುತ್ತಿದ್ದಂತೆ ಮಾವಿನಮರ ತಡೆದಿದೆ. ಸ್ವಲ್ಪ ಹೆಚ್ವು ಕಡಿಮೆಯಾಗಿದ್ದಾರೆ ಸುಮಾರು 50 ಅಡಿ ಕೆಳಗೆ ಉರುಳಿ ಹೊಳೆ ಪಾಲಾಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ.

ಬಸ್ಸಿನ ಚಾಲಕ ದಯಾನಂದ ಕನ್ನೋಳಿ, ಕಂಡಕ್ಟರ್ ಕಲ್ಲೇಶ್ ಗೆ ಸಣ್ಣಪುಟ್ಟ ಪೆಟ್ಟಾಗಿದೆ.  ಬ್ಯಾಂಕ್ ಸಿಎಂಎಸ್ ವಾಹನದ ಮುಂಭಾಗ ಜಖಂಗೊಂಡಿದೆ. ವಾಹನದಲ್ಲಿ ಚಾಲಕ ಮಂಜುನಾಥ್, ಗನ್ ಮ್ಯಾನ್ ತಿಪ್ಪೇಶಿ, ಕಸ್ಟೋಡಿಯನ್ ನಾಗಪ್ರಸನ್ನ, ಶಿವಕುಮಾರ್ ಇದ್ದು, ಚಾಲಕನ ತಲೆಗೆ ಸ್ವಲ್ಪ ಪೆಟ್ಟಾಗಿದೆ.

ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಎಎಸ್ಐ ಮಂಜುನಾಥ್ ಬಸ್ ಕೆಳಗೆ ಬಿದ್ದಿರುವುದು ಕಂಡು ಬಂದಿದ್ದು ಕೂಡಲೇ ಠಾಣೆ ಮಾಹಿತಿ ತಿಳಿಸಿದ್ದಾರೆ. ಸ್ಥಳೀಯರ ಸಹಕಾರದಿಂದ ಮಗುಚಿ ಬಿದ್ದ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರಗೆ ಕರೆತರಲಾಯಿತು.

ನಗರ ಪಿಎಸ್ಐ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡರು. ಪೊಲೀಸ್ ಇಲಾಖೆಯ ವೆಂಕಟೇಶ್, ಶಾಂತಪ್ಪ, ಸುಜಯ್ ಸೇರಿದಂತೆ ಹಲವರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.