Sagara: ಜ. 30 ರಂದು ಪಶ್ಚಾತಾಪ್ ದಿವಸ್ ಅಂಗವಾಗಿ ಉಪವಾಸ ಸತ್ಯಾಗ್ರಹ: ಚರಕ ಪ್ರಸನ್ನ


Team Udayavani, Jan 13, 2024, 3:17 PM IST

7-sagara

ಸಾಗರ: ರಾಷ್ಟ್ರೀಯ ಚಳುವಳಿಯ ಭಾಗವಾಗಿರುವ ಬಾಪು ಕೆ ಲೋಗೋ ಸಂಸ್ಥೆಯಿಂದ ಜ. 30 ರಂದು ನವದೆಹಲಿಯ ಹರಿಜನ ಸೇವಕ ಸಂಘದ ಆಶ್ರಯದಲ್ಲಿ ಪಶ್ಚಾತಾಪ್ ದಿವಸ್ ಆಚರಿಸಲಾಗುತ್ತಿದೆ ಎಂದು ದೇಸಿ ಚಿಂತಕ ಪ್ರಸನ್ನ ಹೆಗ್ಗೋಡು ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಪು ಕೆ ಲೋಗ್ ಎನ್ನುವ ರಾಷ್ಟ್ರೀಯ ಚಳುವಳಿಯ ಭಾಗವಾಗಿ ವಿವಿಧ ಗಾಂಧಿವಾದಿ ಸಂಘಟನೆಗಳ ನೇತೃತ್ವದಲ್ಲಿ ನಡೆಯಲಿರುವ ಪಶ್ಚಾತಾಪ್ ದಿವಸ್ ಅಂಗವಾಗಿ ಉಪವಾಸ ಸತ್ಯಾಗ್ರಹ ಸಹ ಹಮ್ಮಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಪ್ರಸ್ತುತ ದೇಶಾದ್ಯಂತ ಗ್ರಾಮ ಕೈಗಾರಿಕೆಗಳು ಹಾಗೂ ಕಾರ್ಮಿಕ ಕೇಂದ್ರಿತ ನಗರ ಕೈಗಾರಿಕೆಗಳು ಸರ್ಕಾರದ ನೀತಿಗಳಿಂದಾಗಿ ಮುಚ್ಚಿ ಹೋಗುತ್ತಿದೆ. ಯಂತ್ರ ಸಂಸ್ಕೃತಿಯೆ ಪ್ರಗತಿ ಎನ್ನುವ ಸಿದ್ಧಾಂತಕ್ಕೆ ಎಲ್ಲರೂ ಬಲಿಯಾಗುತ್ತಿದ್ದಾರೆ. ಕಾಯಕ, ಕಾಯಕ ಸಂಸ್ಕೃತಿ, ಕಾಯಕ ಧರ್ಮವನ್ನು ಮೂಲೆಗುಂಪು ಮಾಡುತ್ತಿರುವುದರಿಂದ ಕೈಮಗ್ಗ ಸೇರಿದಂತೆ ಗ್ರಾಮೀಣ ಕಸುಬುಗಳು ನೇಪಥ್ಯಕ್ಕೆ ಸರಿಯುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕೈಮಗ್ಗಗಳು ನಾಲ್ಕು ಲಕ್ಷ ಇದ್ದದ್ದು ಈಗ ನಾಲ್ಕು ಸಾವಿರಕ್ಕೆ ಇಳಿದಿದೆ. ಬಡವರನ್ನು ನಗರಕ್ಕೆ ಗುಳೆ ಎಬ್ಬಿಸುವ, ಸರ್ವಿಸ್ ಸೆಕ್ಟರ್ ಎಂಬ ಹೆಸರಿನಲ್ಲಿ ಗುಲಾಮಗಿರಿಯನ್ನು ಪೋಷಣೆ ಮಾಡಲಾಗುತ್ತಿದೆ. ಕೈಮಗ್ಗಕ್ಕೆ ಸಂಬಂಧಪಟ್ಟ ಕೆಲವು ಕಾಯ್ದೆಗಳನ್ನು ಮರೆ ಮಾಚಿದೆ. ಇದು ಕೈಮಗ್ಗ ಕ್ಷೇತ್ರದ ವಿನಾಶಕ್ಕೆ ಕಾರಣವಾಗಿದ್ದರೂ ಕೇಂದ್ರ ಸರ್ಕಾರ ಜಾಣಕುರುಡು ಪ್ರದರ್ಶನ ಮಾಡುತ್ತಿದೆ. ಕಾಯಕ ನಾಶದ ರಾಕ್ಷಸ ಪ್ರವೃತ್ತಿ ನಡುವೆಯೇ ರಾಮರಾಜ್ಯದ ಹೆಸರಿನಲ್ಲಿ ಶಿವಶಕ್ತಿ ಹೆಸರಿನಲ್ಲಿ ಅಲ್ಲಾ, ಏಸುವಿನ ಹೆಸರಿನಲ್ಲಿ ವೈಷಮ್ಯ ಮೂಡಿಸುವ ಕೆಲಸಗಳು ನಡೆಯುತ್ತಿದೆ. ಜಲವಿನ ಧರ್ಮವನ್ನು ತಿರಸ್ಕರಿಸಿ ದ್ವೇಷದ ಧರ್ಮವನ್ನು ಅಪ್ಪಿಕೊಳ್ಳುವ ಅನಿವಾರ್ಯತೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಎಲ್ಲ ಅವಾಂತರಗಳನ್ನು ಗಮನದಲ್ಲಿ ಇರಿಸಿಕೊಂಡು ಭಾರತೀಯ ಪ್ರಜೆಗಳಾದ ನಾವು ಬಾಪು ಕೆ ಲೋಗ್ ಎಂಬ ರಾಷ್ಟ್ರೀಯ ಸಂಘಟನೆಯೊಂದರ ಅಡಿಯಲ್ಲಿ ಒಂದಾಗಿದ್ದೇವೆ. ನಾವು ನಡೆಸಿರುವ ಪಾಪಕೃತ್ಯಗಳಿಗೆ ಪಶ್ಚಾತಾಪಪಡುವ ಸಲುವಾಗಿ ಮಹಾತ್ಮಾ ಗಾಂಧಿಜಿಯವರು ಹುತಾತ್ಮರಾದ ದಿನ ಜ. ೩೦ರಂದು ಪಶ್ಚಾತಾಪ ದಿವಸ್ ಆಚರಣೆ ಮಾಡುತ್ತಿದ್ದೇವೆ. ಎಲ್ಲ ಗಾಂಧಿವಾದಿಗಳು, ಪರಿಸರವಾದಿಗಳು, ಬಡವರ ಪರವಾದ ಸಂಘಟನೆಗಳು ಅಂದು ಅವರಿರುವ ಊರಿನಲ್ಲಿಯೇ ಪಶ್ಚಾತಾಪ ದಿನ ಆಚರಿಸಿ ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.