ಅಡಿಕೆ ತೋಟದಲ್ಲಿ ಗಾಂಜಾ ಬೆಳೆ; ಪೊಲೀಸರ ಖಡಕ್ ಕಾರ್ಯಾಚರಣೆ; ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ
Team Udayavani, Jun 12, 2024, 2:51 PM IST
ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ, ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷ ಗಜಾನನ ವಾಮನ ಸುತರ, ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡ ಸ್ಥಳಕ್ಕೆ ದಾಳಿ ನಡೆಸಿತ್ತು.
ಸ್ಥಳಕ್ಕೆ ಹೋಗಿ ದಾಳಿ ನಡೆಸಿದ ತಂಡ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು 2.50 ಲಕ್ಷ ಮೌಲ್ಯದ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತು ಪಡಿಸಿಕೊಂಡು ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರ ಸ್ಥಿತಿ ಗಂಭೀರ!
Thirthahalli: ರಸ್ತೆಗಿಳಿದ ಪೊಲೀಸರು; ಶಾಲಾ ವಾಹನಗಳಿಗೆ ಖಡಕ್ ಎಚ್ಚರಿಕೆ!
Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ
ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ
Hosanagara: ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.