Shimoga; ನಿರಂತರ ವಿದ್ಯುತ್ ನೀಡಲು ಅಧಿಕಾರಿಗಳಿಗೆ ಸೂಚನೆ: ಮಧು ಬಂಗಾರಪ್ಪ
Team Udayavani, Oct 27, 2023, 5:33 PM IST
ಶಿವಮೊಗ್ಗ: ದಿನಗಳಲ್ಲಿ ನೀರಿನ ಹಾಹಾಕಾರ ಉಂಟಾಗಬಹುದು. 351 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ನಡೆಯುತ್ತಿದೆ. ರಾಜ್ಯದಲ್ಲಿ ಬರಗಾಲದ ಛಾಯೆಯಿದೆ. ನಿರಂತರ ವಿದ್ಯುತ್ ನೀಡುವಂತೆ ಅಧಿಕಾರಿಗಳಿಗೆ ಹೇಳಿದ್ದೇವೆ. ಐದು ಗಂಟೆ ನಿರಂತರ ವಿದ್ಯುತ್ ನೀಡಿದರೆ ರೈತರಿಗೆ ಸಮಸ್ಯೆಯಾಗದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮುಗಿಯುತ್ತಿದೆ. ಮುಂದಿನ ಸ್ಮಾರ್ಟ್ ಸಿಟಿ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ತನಿಖೆ ನಡೆಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತಾಡಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.
9 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಗಿದಿದೆ. 4 ಸಾವಿರ ಹೈದರಾಬಾದ್ ಕರ್ನಾಟಕಕ್ಕೆ ತೆಗೆದುಕೊಳ್ಳಬೇಕು. ಇದು ನ್ಯಾಯಾಲಯದಲ್ಲಿದೆ. ಆದಷ್ಟು ಬೇಗ ಇತ್ಯರ್ಥವಾಗಲಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಎಜುಕೇಷನ್ ಕೊಡಲು ಯೋಜನೆ ಸಿದ್ದಪಡಿಸುತ್ತಿದ್ದೇವೆ. ಶಿಕ್ಷಕರಿಗೆ ತರಬೇತಿ ನೀಡಲು ಖಾಸಗಿ ಸಂಸ್ಥೆ ಜೊತೆ ಮಾತಾಡಿದ್ದೇವೆ. ಮಕ್ಕಳಿಗೆ ಪೌಷ್ಠಿಕಾಂಶ ನೀಡಲು ಸಿದ್ದತೆ ನಡೆಯುತ್ತಿದೆ. 23 ನೇ ತಾರೀಕಿನಂದು ಅದನ್ನು ಘೋಷಣೆ ಮಾಡುತ್ತೇನೆ. ನೋಟ್ ಬುಕ್ ಭಾರ ಕಡಿಮೆ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದರು.
ಕರ್ನಾಟಕವನ್ನು ಬಸವಣ್ಣನ ನಾಡು ಎಂಬ ಹೆಸರು ಬದಲಿಸುವ ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ, ಎಂ.ಬಿ ಪಾಟೀಲ್ ಅವರು ವೈಯಕ್ತಿಕ ಅಭಿಪ್ರಾಯ ಕೊಟ್ಟಿದ್ದಾರೆ. ಬಸವಣ್ಣನವರು ಬಹಳ ದೊಡ್ಡ ಸಮಾಜ ಸುಧಾರಕರು. ನಾನು ಆ ಬಗ್ಗೆ ಜಾಸ್ತಿ ಚರ್ಚೆ ಮಾಡಲು ಹೋಗುವುದಿಲ್ಲ. ತೀರ್ಮಾನವನ್ನು ಸರ್ಕಾರ ಮಾಡುತ್ತದೆ. ಬಸವಣ್ಣನವರ ಬಗ್ಗೆ ಬಹಳ ಅಪಾರ ಗೌರವ ಇದೆ. ಅವರ ಹಾಕಿ ಕೊಟ್ಟ ಮಾರ್ಗದರ್ಶನವನ್ನು ನಾನು ಸಿದ್ದರಾಮಯ್ಯ ನವರು ಅನುಸರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ
Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್
By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು; ಬೇಳೂರು
Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ
Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.