15 ದಿನದೊಳಗೆ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕೋಟ ಶ್ರೀನಿವಾಸ ಪೂಜಾರಿ


Team Udayavani, Jan 11, 2020, 4:01 PM IST

kota

ಶಿವಮೊಗ್ಗ: ಮುಂದಿನ 15 ದಿನದೊಳಗೆ ರಾಜ್ಯ ಧಾರ್ಮಿಕ ಪರಿಷತ್ ರಚನೆ ಮಾಡಲಾಗುತ್ತದೆ. ರಾಜ್ಯದ 30 ಜಿಲ್ಲೆಯಲ್ಲೂ ಜಿಲ್ಲಾ ಧಾರ್ಮಿಕ ಪರಿಷತ್ ಇರಲಿದೆ ಎಂದು ರಾಜ್ಯ ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನಿಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜಿಲ್ಲಾ ಧಾರ್ಮಿಕ ಪರಿಷತ್ ಮೂಲಕ ದೇವಾಲಯಗಳಿಗೆ ಆಡಳಿತಾತ್ಮಕ ವ್ಯವಸ್ಥಾಪನಾ ಸಮಿತಿ ರಚಿಸಲಾಗುವುದು. ರಾಜ್ಯದಲ್ಲಿ ಹಲವೆಡೆ ದೇವಾಲಯಗಳ ಜಾಗ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಲು ಸರ್ವೇ ಪ್ರಕ್ರಿಯೆ ಸಹ ಪ್ರಾರಂಭ ಮಾಡಲಾಗುತ್ತಿದೆ ಎಂದರು.

ಮೀನುಗಾರಿಕಾ ಇಲಾಖೆಯಲ್ಲಿ 28 ಸಾವಿರ ಫಲಾನುಭವಿಗಳಿಗೆ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ. ಸಾಂಕೇತಿಕವಾಗಿ 3 ಮೀನುಗಾರರಿಗೆ ಪ್ರಧಾನಿಗಳು ಕ್ರೆಡಿಟ್ ಕಾರ್ಡ್ ವಿತರಿಸಿದ್ದಾರೆ. ರೈತರು ಹೇಗೆ ಕ್ರೆಡಿಟ್ ಕಾರ್ಡ್ ಬಳಸಿ ವ್ಯವಹಾರ ಮಾಡುತ್ತಾರೆ ಅದೇ ರೀತಿ ಮೀನುಗಾರರಿಗೆ ಮಾಡಬಹುದು. ಎಂದರು.

23 ಸಾವಿರ ಮಹಿಳೆಯರು ಸ್ವಸಹಾಯ ಹಾಗೂ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಮಾಡಿದ 50 ಸಾವಿರ ರೂ ಸಾಲ ಮನ್ನ ಮಾಡಲಾಗಿದೆ. ಒಟ್ಟು 60 ಕೋಟಿ  ರೂ ಮೀನುಗಾರಿಕೆ ಮಹಿಳೆಯರ ಸಾಲಮನ್ನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಗಳೂರು ಗಲಭೆಗೆ ಸಂಬಂಧಿಸಿದ ಸಿಡಿ ಬಿಡುಗಡೆ ವಿಚಾರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಸಂಪೂರ್ಣ ಸಿಡಿ ಯಾಕೇ ಬಿಡುಗಡೆ ಮಾಡಿಲ್ಲ ಎಂದು ಆತಂಕವಾಗುತ್ತಿದೆ. ಅವರು ಸಿಎಂ ಅಗಿದ್ದಾಗ ನಾನು ವಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೇನೆ. ಸಮಾಜದ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಆಡಳಿತ ಹಾಗೂ ವಿಪಕ್ಷದ ಜವಾಬ್ದಾರಿ ಎಂದು ಅವರೇ ಹೇಳಿದ್ದರು ಎಂದರು.

ಕುಮಾರಸ್ವಾಮಿ ಅವರ ಪ್ರಕಾರ ಮುಗ್ಧರು, ಅಮಾಯಕರಲ್ಲಿ ಕಲ್ಲು ಹೊಡೆದೋರು ಬರುತ್ತಾರಾ? ಶಸ್ತ್ರಾಗಾರದ ಬೀಗ ಒಡೆದು, ಪೊಲೀಸರ ಮೇಲೆ ಕಲ್ಲು ತೂರೋರು ಅಮಾಯಕರೇ? ಮಾಜಿ ಸಿಎಂ ಅಗಿ ಆಡಳಿತ ನಡೆಸಿದವರು ಹೀಗೆ ಹೇಳುವುದು ಸರಿಯಲ್ಲ ಎಂದ ಸಚಿವರು, ಅವರ ಗೊಂದಲ ಬಗೆಹರಿಸಲು ನ್ಯಾಯಾಂಗ ತನಿಖೆ ಮಾಡ ಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.