ತಂತ್ರಜ್ಞಾನ ಬಳಕೆಗೆ ಮಿತಿ ಅಗತ್ಯ : ಅರುಣ ರಾಮನ್‌


Team Udayavani, Mar 21, 2021, 8:09 PM IST

ವನಚವಬನಬಬ

ಸಾಗರ: ವಿನ್ಯಾಸಕ್ಕೂ ಮತ್ತು ತಂತ್ರಜ್ಞಾನಕ್ಕೂ ನಿಕಟ ಸಂಬಂಧವಿದೆ. ಆದರೆ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ವಿನ್ಯಾಸದ ವಿಷಯ ಬಂದಾಗ ತಂತ್ರಜ್ಞಾನಗಳ ಬಳಕೆಗೆ ಮಿತಿ ಹೇರಿಕೊಳ್ಳುವ ಅಗತ್ಯವಿದೆ ಎಂದು ಉದ್ಯಮಿ ಅರುಣ್‌ ರಾಮನ್‌ ಪ್ರತಿಪಾದಿಸಿದರು.

ತಾಲೂಕಿನ ಹೊನ್ನೇಸರ ಗ್ರಾಮದ ಶ್ರಮಜೀವಿ ಆಶ್ರಮದಲ್ಲಿ ಚರಕ ಸಂಸ್ಥೆ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ವಿನ್ಯಾಸದ ಕುರಿತು ಏರ್ಪಡಿಸಿದ್ದ ವಿವಿಧ ಕ್ಷೇತ್ರಗಳ ಪರಿಣತರ ಸಮಾಲೋಚನಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಕೈಮಗ್ಗ ನೇಕಾರಿಕೆ ಉತ್ಪನ್ನಗಳಿಗೆ ವಿನ್ಯಾಸ ರೂಪಿಸುವಾಗ ಯಾವುದು ಸುಸ್ಥಿರ, ಯಾವುದರಿಂದ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗುತ್ತವೆ. ಯಾವುದು ಮಿತವ್ಯಯ ಮಾರ್ಗ.

ಯಾವುದರಿಂದ ಪರಿಸರಕ್ಕೆ ಧಕ್ಕೆ ಉಂಟಾಗುವುದಿಲ್ಲ ಎನ್ನುವ ಅಂಶಗಳನ್ನು ಪರಿಗಣಿಸಿ “ಬಹುಶಿಸ್ತೀಯ’ ಅಧ್ಯಯನ ಮಾರ್ಗ ಅನುಸರಿಸುವುದು ಮುಖ್ಯವಾದ ಸಂಗತಿಯಾಗಿದೆ ಎಂದು ಹೇಳಿದರು. ದೇಸಿ ಚಿಂತಕ ಪ್ರಸನ್ನ ಮಾತನಾಡಿ, ಗ್ರಾಮಗಳ ಕರಕುಶಲಕರ್ಮಿಗಳು ಹಾಗೂ ನಗರ ಪ್ರದೇಶದಲ್ಲಿರುವ ವಿನ್ಯಾಸಕಾರರನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ. ಕರ್ನಾಟಕಕ್ಕೆ ಹೋಲಿಸಿದರೆ ಇತರ ರಾಜ್ಯಗಳಲ್ಲಿ ಈ ಕೆಲಸ ಪರಿಣಾಮಕಾರಿಯಾಗಿ ನಡೆದಿದೆ. ಕರ್ನಾಟಕದಲ್ಲೂ ಈ ಕೆಲಸವನ್ನು ಮಾಡಲು ಚರಕ ಸಂಸ್ಥೆ ಮುಂದಾಗಿದೆ ಎಂದು ತಿಳಿಸಿದರು.

“ಕಲೆ, ಕುಶಲಕರ್ಮ, ವಿನ್ಯಾಸ, ಕುಶಲಕರ್ಮಿ, ಪರಂಪರೆ, ಆಧುನಿಕತೆ, ತಂತ್ರಜ್ಞಾನ, ದೇಸಿ ಜ್ಞಾನ ಇವುಗಳ ನಡುವೆ ಸಾವಯವ ಸಂಬಂಧ ಕಲ್ಪಿಸಿ ಕುಶಲಕರ್ಮಿಗಳು ಕೀಳಲ್ಲ, ವಿನ್ಯಾಸಕಾರರು ಮೇಲಲ್ಲ ಎಂಬ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಈ ಉದ್ದೇಶದ ಈಡೇರಿಕೆಗಾಗಿ ಚರಕ ಸಂಸ್ಥೆ ವಿನ್ಯಾಸ ತರಬೇತಿ ಕೇಂದ್ರವೊಂದನ್ನು ತೆರೆಯಲು ಉದ್ದೇಶಿಸಿದೆ ಎಂದು ತಿಳಿಸಿದರು. ಸಮಾಜಶಾಸ್ತ್ರಜ್ಞ ಚಂದನ್‌ ಗೌಡ ಮಾತನಾಡಿ, ವಿನ್ಯಾಸ ಎಂಬುದರ ಹಿಂದೆ ಭೂತ ಮತ್ತು ಭವಿಷ್ಯ ಎರಡೂ ಅಡಗಿವೆ. ಈ ಪ್ರಕ್ರಿಯೆಯಲ್ಲಿ ಕುಶಲಕರ್ಮಿಗಳು ವಿನ್ಯಾಸಕಾರರು ಮಾತ್ರವಲ್ಲದೆ ಅನುಭವದ ನೆಲೆಗಳಿಗೆ ಸ್ಪಂದಿಸುವ ಸಮಾಜ ಶಾಸ್ತ್ರಜ್ಞರು, ಇತಿಹಾಸಕಾರರು ಕೂಡ ಭಾಗವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ವಿನ್ಯಾಸಕಾರ ಗೋಪಿಕೃಷ್ಣ ಮಾತನಾಡಿ, ವಿನ್ಯಾಸದ ಸಂದರ್ಭದಲ್ಲಿ ಸಾಮಾಜಿಕ ಅಂಶವೇ ಪ್ರಧಾನವಾಗಿರಬೇಕು. ಭಾರತೀಯ ಆಲೋಚನಾ ಧಾರೆಗಳನ್ನು ವಿನ್ಯಾಸದ ಮುಖ್ಯವಾಹಿನಿಗೆ ತರಬೇಕಿದೆ. ಗ್ರಾಮೀಣ ಜಗತ್ತಿನ ಜನಪದೀಯ ಸ್ಪರ್ಶ ವಿನ್ಯಾಸಕ್ಕೆ ದೊರಕಬೇಕು. ಮಾರುಕಟ್ಟೆಯ ಒತ್ತಡದಿಂದ ವಿನ್ಯಾಸಕಾರರು ಮುಕ್ತವಾಗಿರುವುದು ಕೂಡ ಅಷ್ಟೇ ಮುಖ್ಯ ಎಂದರು. ಬಫೆಲೊ ಬ್ಯಾಗ್‌ ಸಂಸ್ಥೆಯ ವಿಶಾಲಾ ಮಾತನಾಡಿ, ವಿನ್ಯಾಸ ಎಂಬುದು ಕೇವಲ ವಸ್ತು ಕೇಂದ್ರಿತವಾಗಬಾರದು. ಬದಲಾಗಿ ಸಂಬಂಧಪಟ್ಟ ಉದ್ಯೋಗದಲ್ಲಿ ತೊಡಗಿರುವವರ ಜೀವನ ಕೇಂದ್ರಿತ ದೃಷ್ಟಿಕೋನವನ್ನು ಅದು ಒಳಗೊಳ್ಳಬೇಕು ಎಂದು ಹೇಳಿದರು.

ಟೈಟಾನ್‌ ಸಂಸ್ಥೆಯ ರಿತಿಕಾ ಗಾಂಧಿ ಮಾತನಾಡಿ , ಕೈಮಗ್ಗ ನೇಕಾರಿಕೆ ಉತ್ಪನ್ನಗಳಿಗೆ ಅಪಾರವಾದ ಧಾರಣಾ ಶಕ್ತಿ ಇದೆ. ವಿನ್ಯಾಸದ ವಿಷಯದಲ್ಲಿ ಬದಲಾವಣೆಯಾದರೆ ಈ ಉತ್ಪನ್ನಗಳ ಮಾರುಕಟ್ಟೆ ಸೇರಿ ಹಲವು ವಿಷಯಗಳಲ್ಲಿ ಕೂಡ ಬದಲಾವಣೆಯಾಗುವುದು ನಿಶ್ಚಿತ ಎಂದರು. ಚರಕ ಸಂಸ್ಥೆ ಅಧ್ಯಕ್ಷೆ ಗೌರಮ್ಮ, ಪದ್ಮಶ್ರೀ, ಮಹಾಲಕ್ಷಿ$¾, ರುದ್ರಪ್ಪ, ಮಧುರಾ, ರಾಷ್ಟ್ರೀಯ ವಿನ್ಯಾಸ ಸಂಸ್ಥೆಯ ಶಶಿಕಲಾ ಇದ್ದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.