ತಂತ್ರಜ್ಞಾನ ಬಳಕೆಗೆ ಮಿತಿ ಅಗತ್ಯ : ಅರುಣ ರಾಮನ್‌


Team Udayavani, Mar 21, 2021, 8:09 PM IST

ವನಚವಬನಬಬ

ಸಾಗರ: ವಿನ್ಯಾಸಕ್ಕೂ ಮತ್ತು ತಂತ್ರಜ್ಞಾನಕ್ಕೂ ನಿಕಟ ಸಂಬಂಧವಿದೆ. ಆದರೆ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ವಿನ್ಯಾಸದ ವಿಷಯ ಬಂದಾಗ ತಂತ್ರಜ್ಞಾನಗಳ ಬಳಕೆಗೆ ಮಿತಿ ಹೇರಿಕೊಳ್ಳುವ ಅಗತ್ಯವಿದೆ ಎಂದು ಉದ್ಯಮಿ ಅರುಣ್‌ ರಾಮನ್‌ ಪ್ರತಿಪಾದಿಸಿದರು.

ತಾಲೂಕಿನ ಹೊನ್ನೇಸರ ಗ್ರಾಮದ ಶ್ರಮಜೀವಿ ಆಶ್ರಮದಲ್ಲಿ ಚರಕ ಸಂಸ್ಥೆ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ವಿನ್ಯಾಸದ ಕುರಿತು ಏರ್ಪಡಿಸಿದ್ದ ವಿವಿಧ ಕ್ಷೇತ್ರಗಳ ಪರಿಣತರ ಸಮಾಲೋಚನಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಕೈಮಗ್ಗ ನೇಕಾರಿಕೆ ಉತ್ಪನ್ನಗಳಿಗೆ ವಿನ್ಯಾಸ ರೂಪಿಸುವಾಗ ಯಾವುದು ಸುಸ್ಥಿರ, ಯಾವುದರಿಂದ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗುತ್ತವೆ. ಯಾವುದು ಮಿತವ್ಯಯ ಮಾರ್ಗ.

ಯಾವುದರಿಂದ ಪರಿಸರಕ್ಕೆ ಧಕ್ಕೆ ಉಂಟಾಗುವುದಿಲ್ಲ ಎನ್ನುವ ಅಂಶಗಳನ್ನು ಪರಿಗಣಿಸಿ “ಬಹುಶಿಸ್ತೀಯ’ ಅಧ್ಯಯನ ಮಾರ್ಗ ಅನುಸರಿಸುವುದು ಮುಖ್ಯವಾದ ಸಂಗತಿಯಾಗಿದೆ ಎಂದು ಹೇಳಿದರು. ದೇಸಿ ಚಿಂತಕ ಪ್ರಸನ್ನ ಮಾತನಾಡಿ, ಗ್ರಾಮಗಳ ಕರಕುಶಲಕರ್ಮಿಗಳು ಹಾಗೂ ನಗರ ಪ್ರದೇಶದಲ್ಲಿರುವ ವಿನ್ಯಾಸಕಾರರನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ. ಕರ್ನಾಟಕಕ್ಕೆ ಹೋಲಿಸಿದರೆ ಇತರ ರಾಜ್ಯಗಳಲ್ಲಿ ಈ ಕೆಲಸ ಪರಿಣಾಮಕಾರಿಯಾಗಿ ನಡೆದಿದೆ. ಕರ್ನಾಟಕದಲ್ಲೂ ಈ ಕೆಲಸವನ್ನು ಮಾಡಲು ಚರಕ ಸಂಸ್ಥೆ ಮುಂದಾಗಿದೆ ಎಂದು ತಿಳಿಸಿದರು.

“ಕಲೆ, ಕುಶಲಕರ್ಮ, ವಿನ್ಯಾಸ, ಕುಶಲಕರ್ಮಿ, ಪರಂಪರೆ, ಆಧುನಿಕತೆ, ತಂತ್ರಜ್ಞಾನ, ದೇಸಿ ಜ್ಞಾನ ಇವುಗಳ ನಡುವೆ ಸಾವಯವ ಸಂಬಂಧ ಕಲ್ಪಿಸಿ ಕುಶಲಕರ್ಮಿಗಳು ಕೀಳಲ್ಲ, ವಿನ್ಯಾಸಕಾರರು ಮೇಲಲ್ಲ ಎಂಬ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಈ ಉದ್ದೇಶದ ಈಡೇರಿಕೆಗಾಗಿ ಚರಕ ಸಂಸ್ಥೆ ವಿನ್ಯಾಸ ತರಬೇತಿ ಕೇಂದ್ರವೊಂದನ್ನು ತೆರೆಯಲು ಉದ್ದೇಶಿಸಿದೆ ಎಂದು ತಿಳಿಸಿದರು. ಸಮಾಜಶಾಸ್ತ್ರಜ್ಞ ಚಂದನ್‌ ಗೌಡ ಮಾತನಾಡಿ, ವಿನ್ಯಾಸ ಎಂಬುದರ ಹಿಂದೆ ಭೂತ ಮತ್ತು ಭವಿಷ್ಯ ಎರಡೂ ಅಡಗಿವೆ. ಈ ಪ್ರಕ್ರಿಯೆಯಲ್ಲಿ ಕುಶಲಕರ್ಮಿಗಳು ವಿನ್ಯಾಸಕಾರರು ಮಾತ್ರವಲ್ಲದೆ ಅನುಭವದ ನೆಲೆಗಳಿಗೆ ಸ್ಪಂದಿಸುವ ಸಮಾಜ ಶಾಸ್ತ್ರಜ್ಞರು, ಇತಿಹಾಸಕಾರರು ಕೂಡ ಭಾಗವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ವಿನ್ಯಾಸಕಾರ ಗೋಪಿಕೃಷ್ಣ ಮಾತನಾಡಿ, ವಿನ್ಯಾಸದ ಸಂದರ್ಭದಲ್ಲಿ ಸಾಮಾಜಿಕ ಅಂಶವೇ ಪ್ರಧಾನವಾಗಿರಬೇಕು. ಭಾರತೀಯ ಆಲೋಚನಾ ಧಾರೆಗಳನ್ನು ವಿನ್ಯಾಸದ ಮುಖ್ಯವಾಹಿನಿಗೆ ತರಬೇಕಿದೆ. ಗ್ರಾಮೀಣ ಜಗತ್ತಿನ ಜನಪದೀಯ ಸ್ಪರ್ಶ ವಿನ್ಯಾಸಕ್ಕೆ ದೊರಕಬೇಕು. ಮಾರುಕಟ್ಟೆಯ ಒತ್ತಡದಿಂದ ವಿನ್ಯಾಸಕಾರರು ಮುಕ್ತವಾಗಿರುವುದು ಕೂಡ ಅಷ್ಟೇ ಮುಖ್ಯ ಎಂದರು. ಬಫೆಲೊ ಬ್ಯಾಗ್‌ ಸಂಸ್ಥೆಯ ವಿಶಾಲಾ ಮಾತನಾಡಿ, ವಿನ್ಯಾಸ ಎಂಬುದು ಕೇವಲ ವಸ್ತು ಕೇಂದ್ರಿತವಾಗಬಾರದು. ಬದಲಾಗಿ ಸಂಬಂಧಪಟ್ಟ ಉದ್ಯೋಗದಲ್ಲಿ ತೊಡಗಿರುವವರ ಜೀವನ ಕೇಂದ್ರಿತ ದೃಷ್ಟಿಕೋನವನ್ನು ಅದು ಒಳಗೊಳ್ಳಬೇಕು ಎಂದು ಹೇಳಿದರು.

ಟೈಟಾನ್‌ ಸಂಸ್ಥೆಯ ರಿತಿಕಾ ಗಾಂಧಿ ಮಾತನಾಡಿ , ಕೈಮಗ್ಗ ನೇಕಾರಿಕೆ ಉತ್ಪನ್ನಗಳಿಗೆ ಅಪಾರವಾದ ಧಾರಣಾ ಶಕ್ತಿ ಇದೆ. ವಿನ್ಯಾಸದ ವಿಷಯದಲ್ಲಿ ಬದಲಾವಣೆಯಾದರೆ ಈ ಉತ್ಪನ್ನಗಳ ಮಾರುಕಟ್ಟೆ ಸೇರಿ ಹಲವು ವಿಷಯಗಳಲ್ಲಿ ಕೂಡ ಬದಲಾವಣೆಯಾಗುವುದು ನಿಶ್ಚಿತ ಎಂದರು. ಚರಕ ಸಂಸ್ಥೆ ಅಧ್ಯಕ್ಷೆ ಗೌರಮ್ಮ, ಪದ್ಮಶ್ರೀ, ಮಹಾಲಕ್ಷಿ$¾, ರುದ್ರಪ್ಪ, ಮಧುರಾ, ರಾಷ್ಟ್ರೀಯ ವಿನ್ಯಾಸ ಸಂಸ್ಥೆಯ ಶಶಿಕಲಾ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.