ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ರೋಗ: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ


Team Udayavani, Oct 23, 2020, 12:47 PM IST

ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ಸೋಂಕು: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ

ಶಿವಮೊಗ್ಗ: ಕೋವಿಡ್-19 ಸೋಂಕಿನಿಂದ ಜನತೆ ಸಂಕಷ್ಟ ಅನುಭವಿಸುತ್ತಿದ್ದರೆ, ಇದೀಗ ಜಾನುವಾರುಗಳಿಗೆ ಹೊಸ ಕಷ್ಟ ಎದುರಾಗಿದೆ. ಕೋವಿಡ್-19 ನಂತೆಯೇ ನೇರ ಸಂಪರ್ಕದಿಂದಲೇ ಹರಡುವ ರೋಗವೊಂದು ರಾಜ್ಯದ ಕೆಲವು ಜಿಲ್ಲೆಗಳ ದನಗಳಿಗೆ ಕಾಣಿಸಿಕೊಂಡಿದ್ದು, ಅವುಗಳನ್ನೂ ಐಸಲೋಶನ್ ಮಾಡಿ ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.

ಚರ್ಮಗಂಟು ರೋಗ (ಲಂಪಿ ಸ್ಕಿನ್ ಡಿಸೀಸ್) ಎಂಬ ರೋಗ ಇದೀಗ ಮಲೆನಾಡಿನ ಜಾನುವಾರುಗಳಲ್ಲಿ ಕಾಣಿಸಿಕೊಂಡಿದೆ. ಪಾಕ್ಸ್ ವಿರಿಡೆ ಎಂಬ ವೈರಸ್ ನಿಂದ ಈ ಚರ್ಮಗಂಟು ರೋಗ ಹರಡುತ್ತಿದೆ.

ಆಫ್ರೀಕಾ, ರಷ್ಯ, ಯುರೋಪ್ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದ ಈ ಕಾಯಿಲೆ, ದೇಶದ ಕೇರಳ ಹಾಗೂ ಒಡಿಸ್ಸಾದಲ್ಲಿ ಕಾಣಿಸಿಕೊಂಡಿತ್ತು. ರಾಜ್ಯದ ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಈ ರೋಗ ಕಾಣಿಸಿಕೊಂಡಿದ್ದು, ಇದೀಗ ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲೂ ಕಾಣಿಸಿಕೊಂಡಿದೆ. ಯಾದಗಿರಿ ಜಿಲ್ಲೆಯಲ್ಲಿ ಸುಮಾರು ಒಂದೂವರೆ ತಿಂಗಳ ಕಾಲ ಈ ರೋಗದ ಕಾಟ ಇದ್ದಿದ್ದು, ಇದೀಗ ಸೂಕ್ತ ಚಿಕಿತ್ಸೆಯ ಕಾರಣದಿಂದ ಸಂಪೂರ್ಣ ಗುಣಮುಖವಾಗಿದೆ.

ಇದನ್ನೂ ಓದಿ:ಕಾಲೇಜು ಆರಂಭಕ್ಕೆ ದಿನ ನಿಗದಿ: ನವೆಂಬರ್ 17ರಿಂದ ಕಾಲೇಜು ಆರಂಭಕ್ಕೆ ಸರ್ಕಾರ ಸಜ್ಜು

ಇದೀಗ ಮಲೆನಾಡಿನ 50 ಕ್ಕೂ ಹೆಚ್ಚು ಹಳ್ಳಿಗಳ ಜಾನುವಾರುಗಳಲ್ಲಿ ಈ ಚರ್ಮಗಂಟು ರೋಗ ಪತ್ತೆಯಾಗಿದೆ. ಜಾನುವಾರುಗಳ ನೇರ ಸಂಪರ್ಕ, ಮೇವು, ನೀರಿನಿಂದಲೂ ಈ ಕಾಯಿಲೆ ಹರುಡುತ್ತದೆ. ಚರ್ಮಗಂಟು ರೋಗ ನಿವಾರಣೆಗೆ ಜಾನುವಾರುಗಳಿಗೆ ಐಸೋಲೇಶನ್ ಮಾಡಿ ಚಿಕಿತ್ಸೆ ನೀಡಲಾಗುತ್ತದೆ.

ರೋಗಗ್ರಸ್ತ ಜಾನುವಾರುಗಳನ್ನು ಗುಂಪಿನಿಂದ ಪ್ರತ್ಯೇಕವಾಗಿರಸಲು ಪಶುಪಾಲನಾ ಇಲಾಖೆ ಜಾಗೃತಿ ಮೂಡಿಸುತ್ತಿದೆ. ಗುಂಪಿನಲ್ಲಿ ಶೇ.‌20 ರಷ್ಟು ಜಾನುವಾರುಗಳಿಗೆ ರೋಗ ತಗುಲುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕೊಟ್ಟಿಗೆಯಲ್ಲಿ ಬೆಳಗ್ಗೆ, ಸಂಜೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಇದಕ್ಕೆ ಲಸಿಕೆ ಕೂಡ ಲಭ್ಯವಿದೆ. ಮೂರು ದಿನದಲ್ಲಿ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಎಂದು ಪಶುಪಾಲನೆ ಇಲಾಖೆ ಜಂಟಿ ನಿರ್ದೇಶಕ ಡಾ.ಸದಾಶಿವ ಮಾಹಿತಿ ನೀಡಿದರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.