ಕಿಮ್ಮನೆ ನಮ್ಮ ಜೊತೆಯಲ್ಲಿ ಕೂರಬೇಕಾಗಿತ್ತು… ಈಗ ಆ ಸ್ಥಾನ ನಾನು ತುಂಬಿ ಕೊಡುತ್ತೇನೆ
Team Udayavani, Jun 27, 2023, 8:23 PM IST
ತೀರ್ಥಹಳ್ಳಿ : ಇಂದು ಸೊರಬ, ಆನವಟ್ಟಿ ಹಾಗೂ ತಾಳಗುಪ್ಪದಲ್ಲಿ ಸಚಿವರ ಸ್ಥಳೀಯ ಕಚೇರಿ ಓಪನ್ ಮಾಡಿದ್ದೆನೆ. ಇದರಿಂದ ಜನರ ಅಹವಾಲು ಸ್ವೀಕರಿಸಲು ಅನುಕೂಲ ಆಗುತ್ತೇ. ಈಗ ಎಲ್ಲಾ ತಾಲೂಕಿನ ಅಧಿಕಾರಿಗಳ ಜೊತೆ ಒಂದು ಹಂತದ ಸಭೆ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ ಗಳಿವೆ.ಕುಡಿಯುವ ನೀರು ಪೂರೈಕೆ ಆಗಬೇಕು. ಮಳೆಯ ಕೊರತೆಯಿಂದ ಡ್ಯಾಂ ನಲ್ಲಿ ನೀರಿಲ್ಲ.
ನನ್ನ ಕ್ಷೇತ್ರದಲ್ಲಿ ಟ್ಯಾಂಕರ್ ಮೂಲಕ ನೀರು ಕೊಡ್ತಾ ಇದ್ದೇವೆ. ಈ ಸಮಸ್ಯೆಯ ಜೊತೆಗೆ ಶಾಶ್ವತ ಪರಿಹಾರಕ್ಕೂ ಯೋಚನೆ ಮಾಡ್ತಾ ಇದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಮಂಗಳವಾರ ತೀರ್ಥಹಳ್ಳಿಗೆ ಆಗಮಿಸಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ ನನಗೆ ಸಿಕ್ಕಿರುವ ಶಿಕ್ಷಣ ಇಲಾಖೆ ದೊಡ್ಡದು, ಸಾಕಷ್ಟು ಸಮಸ್ಯೆಗಳು ಕೂಡ ಇವೆ. ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ. ಎಲ್ಲವನ್ನು ಬಗೆಹರಿಸುತ್ತವೆ. ಇಲಾಖೆಗೆ ಸಂಬಂಧಿಸಿದ ಅನುದಾನಕ್ಕೆ ಬಜೆಟ್ ಅಲ್ಲಿ ಸೇರಿಸಲು ಪ್ರಯತ್ನ ಮಾಡುತ್ತಿದ್ದೇನೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಪ್ರಕರಣ ಕೋರ್ಟ್ ನಲ್ಲಿದೆ. ಎಲ್ಲಾ ಸಮಸ್ಯೆಗಳ ಇತ್ಯರ್ಥಕ್ಕೆ ಒಂದು ಕಮಿಟಿ ಮಾಡಿ, ಕ್ರಮ ಕೈಗೊಳ್ಳುತ್ತೇವೆ ಎಂದರು.
ಲೋಕಸಭಾ ಚುನಾವಣೆ ವಿಷಯದ ಬಗ್ಗೆ ಮಾತನಾಡಿ ಗೀತಾ ಶಿವರಾಜ್ ಕುಮಾರ್ ಪಕ್ಷಕ್ಕೆ ಸೇರಿದ್ದಾರೆ. ಚುನಾವಣೆ ಸ್ಫರ್ಧೆ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡ್ತಾರೆ. ಅದನ್ನೆಲ್ಲಾ ನಾನು ಮಾತಾಡಲ್ಲ. ತಪ್ಪಾಗುತ್ತೇ ಎಂದರು.
ಅದಕ್ಕೂ ಮೊದಲು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸನ್ಮಾನ ಸ್ವೀಕರಿಸಿ ಚುನಾವಣೆ ಸಂದರ್ಭದಲ್ಲಿ ನೀವು ತುಂಬಾ ಸಹಕಾರ ನೀಡಿದ್ದೀರಿ. ನಾನು ಕಿಮ್ಮನೆ ರತ್ನಾಕರ್ ಅವರು ನಮ್ಮ ಜೊತೆಯಲ್ಲಿ ಕೂರಬೇಕಾಗಿತ್ತು. ನಿಮ್ಮೆಲ್ಲರ ಶ್ರಮದ ಹೊರತಾಗಿಯೂ ನಾವು ಇಲ್ಲಿ ಕಳೆದುಕೊಂಡೆವು. ನೀವು ಇಲ್ಲಿ ಕಳೆದುಕೊಂಡರೂ ಮಧು ಬಂಗಾರಪ್ಪ ಆ ಸ್ಥಾನ ತುಂಬಿ ಕೊಡ್ತಾನೆ. ಇಲ್ಲಿ ನಾವೇನು ಕಳೆದುಕೊಂಡಿಲ್ಲ. ಪಕ್ಷಕ್ಕೆ ಅಧಿಕಾರ ಬಂದಿದೆ. ಅದನ್ನು ನಿಮ್ಮ ಮಡಿಲಿಗೆ ಹಾಕೋದು ನಮ್ಮ ಜವಾಬ್ದಾರಿ ಎಂದರು.
ಕೆಪಿಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಹೇಳಿದ್ದಾರೆ. ಪಕ್ಷದ ಕಛೇರಿಗೆ ಎಲ್ಲರೂ ಭೇಟಿ ನೀಡಲು ಸೂಚಿಸಿದ್ದಾರೆ. ನನ್ನ ಇಲಾಖೆಯ ಜವಾಬ್ದಾರಿ ಕೂಡ ನನ್ನ ಮೇಲಿದೆ.
ಆದರೂ, ಪಕ್ಷದ ಮುಖಂಡರು, ಕಾರ್ಯಕರ್ತರು ಕರೆದಾಗ ಖಂಡಿತಾ ಬರುತ್ತೇನೆ. ಜನರು ವಿಶ್ವಾಸದಿಂದ ಮತ ನೀಡಿ ಅಧಿಕಾರ ನೀಡಿದ್ದಾರೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಕಾಂಗ್ರೆಸ್ ಪಕ್ಷ ಬಡವರ ಕೆಲಸ ಮಾಡುತ್ತಲೇ ಇದೆ. ಮುಂಬರುವ ತಾ.ಪಂ. ಜಿ.ಪಂ. ಲೋಕಸಭೆ ಚುನಾವಣೆಯಲ್ಲೂ ನಿಮ್ಮ ಜೊತೆ ಇರ್ತೇವೆ. ಈಗಾಗಲೇ ಸರ್ಕಾರದ ಗ್ಯಾರಂಟಿ ಗಳನ್ನು ಹಂತ ಹಂತವಾಗಿ ಕೋಡ್ತಾ ಇದ್ದೇವೆ. ಬಿಜೆಪಿಯವರು ಅದನ್ನು ಹೇಗೆ ವಿಶ್ಲೇಷಣೆ ಮಾಡ್ತಾರೋ ಅದನ್ನ ಅವರಿಗೆ ಬಿಡೋಣ. ಇನ್ನೂ ಐದು ವರ್ಷ ಎಲ್ಲರ ಹೊಟ್ಟೆ ತುಂಬಿಸಿದ್ರು. ಬಿಜೆಪಿಯವರ ಹೊಟ್ಟೆ ತುಂಬೋದೆ ಇಲ್ಲ.
ಅವರು ಉದ್ಧಾರ ಆಗಲ್ಲ. ಅದರ ಬಗ್ಗೆ ನಾವು ಚರ್ಚೆ ಮಾಡೋದು ಬೇಡ. ಈ ಭಾಗದಲ್ಲಿ ನಾವು ಸೋತಿರಬಹುದು. ಆದರೆ, ಜನರ ಸೇವೆ ಮಾಡೋ ಅವಕಾಶ ಇದೆ. ಅಧಿಕಾರ ಇದೆ. ಗ್ಯಾರಂಟಿ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ತಹಶೀಲ್ದಾರ್ ಅಮೃತ್ ಅತ್ರೇಶ್ ಡಿವೈಎಸ್ಪಿ ಶಾಂತವೀರ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ನಡೆಸಲಿ: ಆರಗ ಜ್ಞಾನೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.