Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ


Team Udayavani, Jul 27, 2024, 4:29 PM IST

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ಇರುವ ಅಕೇಶಿಯ ಮರ ಕಡಿಯಲು ಯಾರ ಅರ್ಜಿಯ ಅವಶ್ಯಕತೆ ಇಲ್ಲ, ಅದನ್ನು ಕೂಡಲೇ ಕಡಿದು ತೆರವುಗೊಳಿಸಬೇಕು ಇಲ್ಲದಿದ್ದರೆ ನಾನೇ ಕಿತ್ತು ಹಾಕುವ ಆಂದೋಲನ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶನಿವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅತಿವೃಷ್ಟಿಯಿಂದ ಆದ ಹಾನಿಗಳ ಕುರಿತಾಗಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿ ರಸ್ತೆ ಬದಿಯಲ್ಲಿ ಅಕೇಶಿಯ ಗಿಡಗಳನ್ನು ನೆಟ್ಟರೆ ನಾನೇ ಕಿತ್ತು ಹಾಕುತ್ತೇನೆ, ಶುಕ್ರವಾರ ತಡ ರಾತ್ರಿ ರಾಮಪ್ಪ ಎಂಬ ಯುವಕ ಹಾದಿಗಲ್ಲು ಬಳಿ ಹಾಗೆ ದೇಮ್ಲಾಪುರ ಬಳಿ ಎರಡು ತಿಂಗಳ ಹಿಂದೆ ಒಬ್ಬರು ಅಕೇಶಿಯ ಮರ ಬಿದ್ದು ಮೃತಪಟ್ಟಿದ್ದಾರೆ. ಮರ ಬೇಡ ಎನ್ನುವ ವಿಚಾರವನ್ನು ಎರಡು ಮೂರು ವರ್ಷದಿಂದ ಹೇಳುತ್ತಾ ಬರುತ್ತಿದ್ದೇನೆ ನೀವು ಯಾರು ಗಮನ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಮಪ್ಪ ಎಂಬ ಯುವಕನ ಪ್ರಕರಣದಲ್ಲಿ ಈಗಾಗಲೇ ಡಿವೈಎಸ್’ಪಿ ಗೆ ಹೇಳಿದ್ದೇನೆ, ಆರ್’ಎಫ್’ಓ ಮೇಲೆ ಮರ್ಡರ್ ಕೇಸ್ ರಿಜಿಸ್ಟರ್ ಮಾಡಲು, ಖಾಸಗಿಯವರು ಮರ ಕಡಿಯಲು ಸ್ವಲ್ಪ ದುಡ್ಡು ಕೊಟ್ಟು ಅವರೇ ಫೈಲ್ ತೆಗೆದುಕೊಂಡು ಹೋಗಿ ನಿಮಗೆ ಕಷ್ಟ ಕೊಡುವುದಿಲ್ಲ, ಹಾಗಾಗಿ ಅಲ್ಲಿನ ಕ್ಲರ್ಕ್ ನಿಂದ ಹಿಡಿದು ಪ್ರತಿಯೊಬ್ಬರು ಫೈಲ್ ಮೂವ್ ಆಗಬೇಕು ಎಂದರೆ ಏನಾದರು ಬರಬೇಕು, ನಿಮ್ಮ ಮನೆಯಲ್ಲೇ ಯಾರಾದರೂ ಸತ್ತರೆ ನೋವಾಗಬಹುದು ಬೇರೆಯವರ ಮನೆಯವರು ಸತ್ತರೆ ನಿಮಗೇನು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಯಾವುದೇ ಇಲಾಖೆ ಆಗಿರಲಿ, ರಸ್ತೆ ಬದಿ ಇರುವ ಅಕೇಶಿಯ ಮರವನ್ನು ಹತ್ತು ದಿನದ ಒಳಗೆ ಕಡಿದು ತೆಗೆಯಬೇಕು, ಬೇರೆ ಕಡೆ ಮರವನ್ನು ಸಾಗಾಟ ಮಾಡದಿದ್ದರೂ ಪರವಾಗಿಲ್ಲ ಆದರೆ ಕಡಿಯಬೇಕು ಇದು ಕಡ್ಡಾಯವಾಗಿ ಆಗಬೇಕು, ಇದನ್ನು ನಿರ್ಣಯ ಮಾಡಿ ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣ ಅದಿಕಾರಿಗಳಾದ ಶೈಲಾ ಅವರಿಗೆ ತಾಕೀತು ಮಾಡಿದರು.

ಇದನ್ನೂ ಓದಿ: Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

ಟಾಪ್ ನ್ಯೂಸ್

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.