ಪ್ರಧಾನಿ ಮೋದಿ ಸಾಧನೆ ಮಾದರಿ


Team Udayavani, Jun 2, 2020, 1:38 PM IST

ಪ್ರಧಾನಿ ಮೋದಿ ಸಾಧನೆ ಮಾದರಿ

ಶಿವಮೊಗ್ಗ: ಪ್ರಧಾನಿ ಮೋದಿ ಅವರು ವಜ್ರಕ್ಕಿಂತ ಕಠೊರ, ಹೂವಿನಷ್ಟೇ ಮಧುರ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಬಣ್ಣಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮೋದಿಯನ್ನು ಪ್ರೀತಿಸುತ್ತಿದೆ. ಯುವಕರ ಆರಾಧಕರಾಗಿರುವ ಅವರು ಸಾಧನೆಯ ಹರಿಕಾರರಾಗಿದ್ದಾರೆ. ಜಗತ್ತಿನ ರಾಷ್ಟ್ರಗಳು ಭಾರತದತ್ತ ನೋಡುತ್ತಿದ್ದು, ಮೋದಿ ಅವರ ಕಾರಣಕ್ಕಾಗಿಯೇ ಗೆಳೆತನವನ್ನು ಬಯಸಲು ತುದಿಗಾಲಲ್ಲಿ ನಿಂತಿವೆ ಎಂದರು. ಮೋದಿ ಹೂವಿನಷ್ಟೇ ಹಗುರವಾಗಿದ್ದರೂ ಕೂಡ ಮಿತ್ರನಿಗೆ ಮಿತ್ರ- ಶತ್ರುವಿಗೆ ಶತ್ರು ಆಗಿದ್ದಾರೆ. ಭಾರತವನ್ನು ಕೆಣಕುವ ಶತ್ರು ರಾಷ್ಟ್ರಗಳಿಗೆ ಸಿಂಹ ಸ್ವಪ್ನವಾಗಿದ್ದಾರೆ. ಅವರು ದೇಶದ ರಕ್ಷಕರು. ಅವರು ಒಂದು ವರ್ಷದಲ್ಲಿ ಮಾಡಿರುವ ಸಾಧನೆ, ಅಭಿವೃದ್ಧಿ ಅಪಾರವಾದುದು. ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತ ಕೋವಿಡ್‌ ಸಂದರ್ಭದಲ್ಲಿ 20 ಲಕ್ಷ ಕೋಟಿ ಬಿಡುಗಡೆ ಮಾಡಿದ ಕೊಡುಗೈ ದಾನಿ. ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆಯಲಿಲ್ಲ.

ಅವರ ವೈಯಕ್ತಿಕ ಬದುಕು ಕೂಡ ಮಾದರಿಯಾದುದು. ಪ್ರಧಾನಿ ತಾಯಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂದರೆ ಅವರು ಎಷ್ಟು ಸರಳವೆಂಬುದು ಅರ್ಥವಾಗುತ್ತದೆ ಎಂದರು. ರಾಜ್ಯಕ್ಕೆ ಅವರು ಅನೇಕ ರೀತಿಯಲ್ಲಿ ನೆರವು ನೀಡಿದ್ದಾರೆ. ಅತಿವೃಷ್ಟಿ ಸಂದರ್ಭದಲ್ಲಿ ಸುಮಾರು 17,249 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ನರೇಗಾ ಸೇರಿದಂತೆ ಇತರೆ ಯೋಜನೆಗಳಿಗಾಗಿ 10 ಸಾವಿರ ಕೋಟಿ. ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ, ರೈಲ್ವೆ ಯೋಜನೆಗೆ ಕೋಟ್ಯಂತರ ರೂ. ಹಣ ಬಿಡುಗಡೆ ಜನೆಗೆ ಕೇಂದ್ರದ ಜೊತೆಗೆ ರಾಜ್ಯ ಸರ್ಕಾರಗಳು ಕೈ ಜೋಡಿಸಿವೆ. ಒಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ
ಸರ್ಕಾರಗಳು ಕೋವಿಡ್‌19 ನಂತಹ ಸಂದರ್ಭದಲ್ಲಿ ಕೂಡ ಸಮರ್ಥ ಆಡಳಿತ ನೀಡಿದೆ ಎಂದರು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ಡಿಸಿಸಿ ಬ್ಯಾಂಕ್‌ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸೋಮವಾರ ಶಿವಮೊಗ್ಗದಲ್ಲಿ
ಇರುವ ಮೂವರು ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ರೈತರಿಗೆ ಸಾಲ ಕೊಡುವುದು ಬಿಟ್ಟು ಜಿಲ್ಲೆಯ ಹೊರಗಡೆ ಇರುವ ಖಾಸಗಿ ಸರ್ಕಾರಿ ಕಾರ್ಖಾನೆಗಳಿಗೆ 85 ಕೋಟಿ ಸಾಲ ನೀಡಿದ್ದಾರೆ. ಆದರೆ, ಜಿಲ್ಲೆಯ ರೈತರಿಗೆ ಸಾಲ ಕೊಡುತ್ತಿಲ್ಲ. ಸುಮಾರು 62 ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕೂಡ ಕೋವಿಡ್ ಎದುರಿಸುವಲ್ಲಿ ಯಶಸ್ವಿಯಾಗಿದೆ. ಸುಮಾರು 2222 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳು ಆಡಳಿತ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕೂಡ ಇದರ ಜೊತೆಗೆ ಸಾಗಿದೆ. ನರೇಗಾ ಯೋಜನೆ ತನಿಖೆ ಆಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್‌, ಅಶೋಕ್‌ ನಾಯಕ್‌, ಭಾನುಪ್ರಕಾಶ್‌, ಮೇಘರಾಜ್‌, ಗಿರೀಶ್‌ ಪಟೇಲ್‌, ಆರ್‌.ಕೆ. ಸಿದ್ದರಾಮಯ್ಯ, ಡಿ.ಎಸ್‌. ಅರುಣ್‌, ದತ್ತಾತ್ರಿ, ಶಿವರಾಜ್‌, ಮಧುಸೂಧನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.