ಟಿಪ್ಪು ಸುಲ್ತಾನ್ ಜನ್ಮದಿನಾಂಕ ಕುರಿತು ಹೊಸ ಸಂಶೋಧನೆ


Team Udayavani, Jul 17, 2021, 4:09 PM IST

ಟಿಪ್ಪು ಸುಲ್ತಾನ್ ಜನ್ಮದಿನಾಂಕ ಕುರಿತು ಹೊಸ ಸಂಶೋಧನೆ

ಶಿವಮೊಗ್ಗ: ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯೊಂದು ಹೊರಬಂದಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ನಾಣ್ಯ ಸಂಗ್ರಹಕಾರ ಹಾಗೂ ಇತಿಹಾಸಕಾರ ಖಂಡೋಬರಾವ್ ಹೇಳಿದರು.

ಇತಿಹಾಸ ತಜ್ಞ, ಸಂಶೋಧಕಾ ನಿಧಿನ್ ಓಲಿಕೆರ ಅವರು ಈ ಬಗ್ಗೆ ಸಂಶೋಧನೆಯ ಮೂಲಕ ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ ಟಿಪ್ಪು ಜನ್ಮ ದಿನಾಂಕ ನವೆಂಬರ್ 20 1750 ಎಂದು ವಿಶ್ವದ್ಯಂತ ಒಪ್ಪಿಕೊಂಡಿದ್ದಾರೆ. ಆದರೆ ನಿಧಿನ್ ಅವರ ಹೊಸ ಸಂಶೋಧನೆ ಪ್ರಕಾರ ಅದು 1ನೇ ಡಿಸೆಂಬರ್ 1751 ಆಗಿದೆ. ಈ ಬಗ್ಗೆ ಅವರು 3 ವರ್ಷಗಳ ಕಾಲ ಸಂಶೋಧನೆ ನಡೆಸಿ ಇದಕ್ಕಾಗಿ ಲಂಡನ್‌ನಲ್ಲಿ ಇರುವ ಮ್ಯೂಸಿಯಂನಲ್ಲಿ ಟಿಪ್ಪುಗೆ ಸಂಬಂಧಿಸಿದ ಅಧಿಕೃತ ಪತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಧ್ಯಯನ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದರು.

ನಿಧಿನ್ ಅವರು ಲಂಡನ್‌ಗೆ ತೆರಳಿದಾಗ ಅಲ್ಲಿನ ಬ್ರಿಟಿಷ್ ಗ್ರಂಥಾಲಯದಲ್ಲಿ ಟಿಪ್ಪುಗೆ ಸಂಬಂಧಿಸಿದಂತೆ ಪರ್ಶಿಯನ್ ಭಾಷೆಯಲ್ಲಿರುವ ಹಸ್ತ ಪ್ರತಿಯೊಂದು ಕಾಣ ಸಿಗುತ್ತದೆ. ಅದರ ಹೆಸರು “ಫತೇ ಉಲ್ ಮುಜಾಹಿದ್ದೀನ್” ಆಗಿರುತ್ತದೆ. ಇದನ್ನು ಟಿಪ್ಪು ತಾನೇ ಬರೆಸಿದ ಕೈಪಿಡಿಯಾಗಿರುತ್ತದೆ. ಆ ಕೈಪಿಡಿಯಲ್ಲಿ ಜಕ್ರಿಮಾಸದ 14ನೇ ದಿನ 1165 ಇಜ್ರಿ ದಿನದಂದು ಸುರ್ಯೋದಯವಾದ 10 ಗಂಟೆಗಳ ನಂತರ ನನ್ನ ಜನ್ಮದಿನವನ್ನು ಆಚರಿಸಬೇಕು ಮತ್ತು ಮೈಸೂರು ಸಂಸ್ಥಾನದ ಸಮಸ್ತ ಪ್ರಜೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದಿತ್ತು.

ಇದರ ಆಧಾರವನ್ನು ಬೆನ್ನೆತಿಕೊಂಡು ಹೋದ ಓಲಿಕೆರ ಅವರು ಇದನ್ನು ಆಂಗ್ಲ ಕ್ಯಾಲೆಂಡರ್‌ಗೆ ಬದಲಾಯಿಸಿಕೊಂಡು ಈ ಹೊಸ ದಿನಾಂಕವನ್ನು ಕಂಡು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ಅವರಿಗೆ ಇನ್ನೂ ಕೆಲವು ಹಸ್ತ ಪ್ರತಿಗಳು ಸಿಕ್ಕಿವೆ ಇವೆಲ್ಲವನ್ನೂ ಒಟ್ಟುಕೊಂಡು ಅವರು ಟಿಪ್ಪು ಜನ್ಮ ರಹಸ್ಯವನ್ನು ಬೇಧಿಸಿದ್ದಾರೆ ಎಂದರು.

ಇತಿಹಾಸ ತಜ್ಞ ಮತ್ತು ಸಂಶೋಧಕಾ ನಿಧಿನ್ ಓಲಿಕೆರ ಮಾತನಾಡಿ, ಟಿಪ್ಪು ಜನ್ಮ ದಿನಾಂಕವನ್ನು ನಿಖರವಾಗಿ ತಿಳಿಸಲು ನಾನು ಹಲವು ವರ್ಷಗಳ ಕಾಲ ಸಂಶೋಧನೆ ಮಾಡಿದ್ದೇನೆ. ಪ್ರಮುಖವಾಗಿ 3 ದಾಖಲೆಗಳನ್ನು ನೀಡಿದ್ದೇನೆ. ಈ ಬಗ್ಗೆ ಈಗಾಗಲೇ ಮಂಗಳೂರು ಮತ್ತು ಗೋವಾ ವಿವಿಯ ಮಾಜಿ ಕುಲಪತಿಗಳು ಮತ್ತು ಪ್ರಸಿದ್ಧ ಇತಿಹಾಸಕಾರರಾಗಿರುವ ಪ್ರೋ.ಶೇಖ್ ಹಾಲಿ ಅವರು ಅವಲೋಕಿಸಿ ಅನುಮೋಧನೆ ನೀಡಿರುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರಕ್ಕೆ ನನ್ನ ಸಂಪೂರ್ಣ ಅಧ್ಯಾಯನದ ವಿವರಗಳನ್ನು ತಿಳಿಸಿದ್ದೇನೆ. ಮುಂದಿನ ದಿನಗಳಲ್ಲಿ ಟಿಪ್ಪು ಜನ್ಮ ದಿನಾಂಕ 1ನೇ ಡಿಸೆಂಬರ್ 1751 (1-12-1751) ಆಗಬೇಕೆಂದು ಮನವಿ ಮಾಡಿಕೊಳ್ಳುತ್ತಿರುವೆ ಎಂದರು.

ಟಾಪ್ ನ್ಯೂಸ್

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.