Hosanagara: ನೂಲಿಗ್ಗೇರಿ ಶಾಲಾ ಕಟ್ಟಡದ ದುಸ್ಥಿತಿ… ಶಿಕ್ಷಕರ ಕೊಠಡಿಯಲ್ಲೇ ಮಕ್ಕಳಿಗೆ ಪಾಠ
Team Udayavani, Jul 22, 2024, 1:26 PM IST
ಹೊಸನಗರ: ಮೂರು ಕೊಠಡಿಗಳಿರುವ ಹಳೇ ಕಟ್ಟಡ ಬೀಳುವ ಸ್ಥಿತಿಯಲ್ಲಿರುವ ಕಾರಣ ಮಕ್ಕಳನ್ನು ಶಿಕ್ಷಕರ ಕೊಠಡಿಯ ಮಧ್ಯದಲ್ಲಿ ಕುಳ್ಳಿರಿಸಿ ಪಾಠ ಮಾಡುತ್ತಿರುವ ಘಟನೆ ತಾಲೂಕಿನ ನೂಲಿಗ್ಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಈ ಶಾಲೆಯಲ್ಲಿ 100 ರಷ್ಟು ವಿದ್ಯಾರ್ಥಿಗಳಿದ್ದು 1 ರಿಂದ 7ನೇ ತರಗತಿವರೆಗೆ ನಡೆಯುತ್ತವೆ. ಒಟ್ಟಿಗೆ 6 ಕೊಠಡಿಗಳು ಮಾತ್ರ ಇದ್ದು ತರಗತಿಗೆ ಬಳಸಿಕೊಳ್ಳಲಾಗಿತ್ತು. ಆದರೆ 3 ಕೊಠಡಿಯ ಕಟ್ಟಡ ಶಿಥಿಲಗೊಂಡಿದ್ದು ಗೋಡೆ ಬೀಳುವ ಸ್ಥಿತಿಯಲ್ಲಿದೆ. ಕೊಠಡಿಯೊಳಗೆ ನೀರು ಬರುತ್ತಿದೆ, ಹಂಚಿನ ಮೇಲ್ಛಾವಣಿ ಕೂಡ ದುಸ್ಥಿತಿಯಲ್ಲಿದ್ದು ನೀರು ಸೋರುತ್ತಿದೆ. ಅಪಾಯಕ್ಕೆ ಆಹ್ವಾನಿಸಿದಂತಿರುವ ಈ ಕಟ್ಟಡ ಪೂರ್ತಿ ಶಿಥಿಲಗೊಂಡಿದ್ದು ದುರಸ್ಥಿ ಮಾಡಲು ಕೂಡ ಸಾಧ್ಯವಿಲ್ಲವಾಗಿದೆ.
ಇದೀಗ ಕೇವಲ ಮೂರು ಕೊಠಡಿ ಮಾತ್ರ ತರಗತಿಗೆ ಲಭ್ಯವಿದ್ದು, 6 ಮತ್ತು 7ನೇ ತರಗತಿಯನ್ನು ಶಿಕ್ಷಕರ ಕೊಠಡಿಯಲ್ಲಿ ನಡೆಸುವಂತಾಗಿದೆ. ಸುತ್ತಲೂ ಶಿಕ್ಷಕರು ಕುಳಿತುಕೊಳ್ಳುವ ಕುರ್ಚಿ, ಮೇಜುಗಳು, ಮದ್ಯದಲ್ಲಿ ಉಳಿದ ಕಿರಿದಾದ ಜಾಗದಲ್ಲಿ ಮಕ್ಕಳಿಗೆ ಪಾಠನಡೆಸಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.
ಮಕ್ಕಳ ಸುರಕ್ಷತೆ ಮತ್ತು ಸುಗಮ ವ್ಯಾಸಂಗದ ಬಗ್ಗೆ ತುರ್ತುಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.