![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 20, 2023, 5:36 PM IST
ಶಿವಮೊಗ್ಗ: ನಮ್ಮಂತವರು ಕೆಲವೊಮ್ಮೆ ಮಾತನಾಡುವಾಗ ಹುಷಾರಾಗಿ ಇರಬೇಕಾಗುತ್ತದೆ. ಅದನ್ನು ಯಾವ ರೀತಿಯಲ್ಲಿ ಹೇಳಿದ್ದರೆಂದು ಅವರೇ ಉತ್ತರ ಕೊಡಬೇಕಾಗುತ್ತದೆ. ನಾನು ಹೇಳುವುದಕ್ಕೆ ಹೋಗಲ್ಲ. ಆದರೆ ಹುಷಾರಾಗಿರಬೇಕಾಗುತ್ತದೆ. ಜಮೀರ್ ಅವರು ಸಮಜಾಯಿಶಿ ನೀಡುವುದು ಒಳ್ಳೆಯದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಜಾತ್ಯತೀತವಾಗಿ, ಧರ್ಮಾತೀತವಾಗಿ ಒಳ್ಳೆಯ ಉದ್ದೇಶಕ್ಕೆ ಕೆಲಸ ಮಾಡುತ್ತಿದೆ. ಒಳ್ಳೆಯ ಮನೋಭಾವನೆ ಇಟ್ಟುಕೊಂಡು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಅದನ್ನು ಮಾತ್ರ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದರು.
ಇಂತಹ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಜಮೀರ್ ಯಾವುದೋ ಉದ್ದೇಶದಿಂದ ಹೇಳಿಲ್ಲ. ಜಾತ್ಯಾತೀತವಾಗಿ ಮಾಡಿದ್ದೇವೆ ಎನ್ನೋದನ್ನು ಹೇಳಲು ಹೋಗಿ ಹೀಗೆ ಹೇಳಿದ್ದಾರೆ. ಧರ್ಮದ ಹೆಸರಲ್ಲಿ ಹೇಳಿರುವುದಕ್ಕೆ ಹುಷಾರಾಗಿ ಹೇಳಬೇಕು. ಆ ರೀತಿ ಅವರ ಮನಸ್ಸಲ್ಲಿನಿಲ್ಲ. ಹೇಳಿಕೆಯು ಬಂದಾಯ್ತು ಮಾಧ್ಯಮದವರು ತೋರಿಸಿಯಾಯ್ತು. ಅದನ್ನು ಬೇರೆ ಬೇರೆ ರೀತಿಯಲ್ಲಿ ವಿಶ್ಲೇಷಣೆ ಆಗಿರುವುದರಿಂದ ಅದಕ್ಕೆ ನಾವು ಉತ್ತರ ಕೊಡಬೇಕಾಗುತ್ತದೆ. ಜವಾಬ್ದಾರಿಯಿಂದ ಇರಬೇಕಾಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದರು.
ಕರ್ನಾಟಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಭೇಟಿ ನೀಡುತ್ತಿರುವ ವಿಚಾರಕ್ಕೆ ಮಾತನಾಡಿ, ಅವರ ಕೆಲಸ ಅವರು ಮಾಡುತ್ತಾರೆ. ಒಂದು ವಿಶ್ವಾಸ ಇಟ್ಟುಕೊಳ್ಳಿ ಯಾರು ಏನೇ ಮಾಡಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಭಿವೃದ್ಧಿ ಕೆಲಸದಿಂದ ಬಾಗ್ಯಗಳನ್ನು ಕೊಟ್ಟು ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಗೆಲ್ಲುತ್ತೇವೆ. ತೆಲಂಗಾಣದಲ್ಲೂ ಗೆಲ್ಲುತ್ತೇವೆ. ನಾನು ತೆಲಂಗಾಣಕ್ಕೆ ಹೋಗಿ ಬಂದಿದ್ದೇನೆ. ತೆಲಂಗಾಣದಲ್ಲಿ ಎರಡುವರೆ ದಿನ ಇದ್ದೆ. ಅಲ್ಲೂ ಕೂಡ ಒಳ್ಳೆಯ ವಾತಾವರಣವಿದೆ. ಅಲ್ಲೂ ಕೂಡ ಒಳ್ಳೆಯ ಕಾರ್ಯಕ್ರಮಗಳನ್ನು ಬಡವರ ಪರ ಕೊಟ್ಟಿದ್ದಾರೆ. ಹಾಗಾಗಿ ಅಲ್ಲಿಯು ನಾವು ಗೆಲ್ಲುತ್ತೇವೆ. ಪಂಚರಾಜ್ಯದಲ್ಲೂ ಉತ್ತಮ ವಾತಾವರಣವಿದೆ. ಒಟ್ಟಾರೆ ಬಿಜೆಪಿ ವಿರುದ್ಧವಾಗಿ ಅಲೆಯಿದೆ. ಕಾಂಗ್ರೆಸ್ ಪರವಾಗಿ ಜನರಲ್ಲಿ ವಿಶ್ವಾಸವಿದೆ. ವಿಶ್ವಾಸವಿದ್ದಾಗ ಸ್ವಾಭಾವಿಕವಾಗಿ ಮತಗಳು ಪಡೆದುಕೊಳ್ಳಲು ಸುಲಭವಾಗುತ್ತದೆ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.