![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 16, 2019, 11:41 AM IST
ಶಿವಮೊಗ್ಗ: ಶಾಸಕರಿಂದ ಪ್ರಜಾಪ್ರಭುತ್ವ ಕಗ್ಗೊಲೆ ಖಂಡಿಸಿ ರೈತ ಸಂಘ ಉಗಿಯುವ ಚಳವಳಿ ನಡೆಸಿತು.
ಶಿವಮೊಗ್ಗ: ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೋಮವಾರ ‘ಛೀ.. ಥೂ’ ವಿಶಿಷ್ಟ ಪ್ರತಿಭಟನೆ ನಡೆಯಿತು.
ಮೂರೂ ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಶಿವಪ್ಪ ನಾಯಕ ವೃತ್ತದಲ್ಲಿ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರತಿಕೃತಿ ಇಟ್ಟು ಎಲೆ, ಅಡಿಕೆ ತಿಂದು ಛೀ.. ಥೂ ಎಂದು ಅದಕ್ಕೆ ಉಗಿಯುವ ಮೂಲಕ ಪ್ರತಿಭಟಿಸಿದರು. ನಾಗರಿಕರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ನಾಶ ಮಾಡಲು ಹೊರಟಿರುವ, ರಾಜೀನಾಮೆ ನೀಡಿರುವ ಶಾಸಕರಿಗೆ ಛೀಮಾರಿ ಹಾಕಿದರು.
ಕೆಲವು ಶಾಸಕರು ಹಣಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಮತ್ತೆ ಕೆಲ ಪಕ್ಷದ ಮುಖಂಡರು ಅಧಿಕಾರಕ್ಕಾಗಿ ರಾಜೀನಾಮೆ ನೀಡುವಂತೆ ಪ್ರೇರೇಪಣೆ ನೀಡಿದ್ದಾರೆ. ಶಾಸಕರೆಂದರೆ ಮಾರಾಟದ ವಸ್ತುವಾಗಿ ಬಿಟ್ಟಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಇವರು ರೆಸಾರ್ಟ್ಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಾ ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ. ಇವು ಕೂಡ ಅನೈತಿಕ ಚಟುವಟಿಕೆ ಎಂದು ಕಿಡಿಕಾರಿದರು.
ರಾಜ್ಯದ ಮೂರು ಪಕ್ಷಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆಯುತ್ತಿವೆ. ಇಂತಹ ರಾಜಕಾರಣಿಗಳಿಗೆ ಮತದಾರರೇ ಮುಂದೊಂದು ದಿನ ಬುದ್ಧಿ ಕಲಿಸುತ್ತಾರೆ. ಇದೆಲ್ಲ ಸರಿಯಾಗಬೇಕಾದರೆ ಪಕ್ಷಾಂತರ ನಿಷೇಧ ಮಸೂದೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು ಮತ್ತು ಸ್ವಾರ್ಥಕ್ಕಾಗಿ, ಹಣಕ್ಕಾಗಿ ಪಕ್ಷಾಂತರ ಮಾಡಿದ ಶಾಸಕರು ಮತ್ತೆಂದೂ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕಾನೂನು ಜಾರಿಯಾಗಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು. ದಾವಣಗೆರೆ, ಚಿತ್ರದುರ್ಗ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಪ್ರಮುಖರಾದ ಕೆ.ರಾಘವೇಂದ್ರ, ಟಿ.ಎಂ.ಚಂದ್ರಪ್ಪ, ಹಿಟ್ಟೂರು ರಾಜು, ಬಿ.ಎಂ.ಚಿಕ್ಕಸ್ವಾಮಿ, ಎಸ್.ಶಿವಮೂರ್ತಿ, ಅರೆಬಿಳಚಿ ಶಿವಣ್ಣ, ರಾಮಚಂದ್ರಪ್ಪ, ಇ.ಬಿ. ಜಗದೀಶ್ ಸೇರಿದಂತೆ ಇತರರು ಇದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.