ಮೆಗ್ಗಾನ್ ಆಸ್ಪತ್ರೆಗೆ ಸೌಲಭ್ಯ ನೀಡಿ: ಶ್ರೀಪಾಲ್
Team Udayavani, Aug 10, 2020, 3:10 PM IST
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಎಲ್ಲರೂ ಕೊರೊನಾ ವಿರುದ್ಧ ಹೋರಾಡುವುದಾಗಿ ತಿಳಿಸುತ್ತಿದ್ದಾರೆ. ಇವರೆಲ್ಲರೂ ತಲಾ ಒಂದೊಂದು ಆಕ್ಸಿಜನ್ ಯಂತ್ರವನ್ನು ದಾನವಾಗಿ ಮೆಗ್ಗಾನ್ ಆಸ್ಪತ್ರೆಗೆ ನೀಡಬೇಕು ಎಂದು ಸ್ವರಾಜ್ ಇಂಡಿಯಾ ಜಿಲ್ಲಾ ವಕ್ತಾರ ಕೆ.ಪಿ. ಶ್ರೀಪಾಲ್ ಪ್ರತಿಯೊಬ್ಬರಿಗೂ ಪತ್ರ ಬರೆದು ಆಗ್ರಹಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ಈಗಾಗಲೇ 2500 ದಾಟಿದೆ. ಗುಣ ಮುಖರಾಗುತ್ತಿದ್ದರೂ ಕೂಡ ಸೋಂಕಿತರ ಸಂಖ್ಯೆ ಮಾತ್ರ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಕೂಡ 50 ದಾಟಿರುವುದು ಆತಂಕ ಹುಟ್ಟಿಸುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 40 ವರ್ಷದ ಒಳಗಿನವರೂ ಸಹ ಉಸಿರಾಟದ ತೊಂದರೆಗೆ ಒಳಗಾಗುತ್ತಿದ್ದಾರೆ. ಈಗ ಅಲ್ಲಿ ಇರುವುದು ಕೇವಲ 7 ವೆಂಟಿಲೇಟರ್ ಮತ್ತು 7 ಆಕ್ಸಿಜನ್ ಯಂತ್ರಗಳು ಮಾತ್ರ. ಆದರೆ ರೋಗಿಗಳ ಸಂಖ್ಯೆ ಮಾತ್ರ ಸಾವಿರಕ್ಕೂ ಹೆಚ್ಚಿದೆ. ಹೀಗಾಗಿ ಆಕ್ಸಿಜನ್ ಕೊರತೆಯಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿರುವುದು ದುರಾದೃಷ್ಟಕರ. ಜಿಲ್ಲೆಯ ಪ್ರತಿನಿ ಧಿಗಳು ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಆಕ್ಸಿಜನ್ ಯಂತ್ರದ ಬೆಲೆ 2.5 ಲಕ್ಷ ಆಗಬಹುದು. ಇಷ್ಟೊಂದು ಹಣದ ಯಂತ್ರ ನೀಡುವ ಶಕ್ತಿ ನಿಮ್ಮಲ್ಲಿ ಖಂಡಿತಾ ಇದೆ ಎಂದು ಭಾವಿಸುತ್ತೇನೆ.
ಒಂದು ಪಕ್ಷ ಇಲ್ಲದಿದ್ದರೆ ನಿಮ್ಮ ಶಾಸಕರು, ಸಂಸದರ ನಿಧಿಯಿಂದ ನೀಡುವ ಮೂಲಕ ಮಾದರಿಯಾಗಿ. ನಿಮ್ಮ ಈ ಕಾರ್ಯದಿಂದ ಇಡೀ ಜಿಲ್ಲೆಯ ಜನರು ನಿಮ್ಮನ್ನು ಸ್ಮರಿಸುತ್ತಾರೆ. ಅಷ್ಟೇ ಅಲ್ಲ ನೀವು ದೇಶಕ್ಕೆ ಮಾದರಿಯಾಗಿ ನಿಲ್ಲುತ್ತೀರಿ. ಸ್ವರಾಜ್ ಇಂಡಿಯಾ ಮನವಿಯನ್ನು ನೀವು ಈಡೇರಿಸುತ್ತೀರೆಂಬ ನಂಬಿಕೆ ನಮಗಿದೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೌಲಭ್ಯಗಳೇ ಇಲ್ಲವಾಗಿದೆ. ಹೀಗಾಗಿ ಕೂಡಲೇ 50 ವೆಂಟಿಲೇಟರ್ ಹಾಗೂ 50 ಆಕ್ಸಿಜನ್ ಸೌಲಭ್ಯ ಒದಗಿಸುವ (ಎಚ್ಎಫ್ಎನ್ಸಿ) ಯಂತ್ರಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.