ಸರ್ಕಾರದ ವೈಫಲ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ಬೈಸಿಕಲ್ ಜಾಥಾ
Team Udayavani, Jul 11, 2020, 12:43 PM IST
ಹೊಸನಗರ: ಕೋವಿಡ್ ಔಷಧ, ಉಪಕರಣ ಖರೀದಿಯಲ್ಲಿ ಅವ್ಯವಹಾರ, ರೋಗ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಆಗ್ರಹಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಸಿಕಲ್ ಜಾಥಾ ನಡೆಸಿದ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಜನರು ಕೊರೊನಾದಂತಹ ಭೀಕರ ರೋಗದಿಂದ ಬಳಲುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿಯೂ ಸರ್ಕಾರ ಕೋವಿಡ್ ಔಷಧ ಹೆಸರಿನಲ್ಲಿ ಜನರಹಣವನ್ನು ಲೂಟಿ ಮಾಡುತ್ತಿದೆ. ಕೋವಿಡ್ ಔಷಧ, ಬೆಡ್, ಪಿಪಿಇ ಕಿಟ್ ಖರೀದಿಯಲ್ಲಿ ಕೋಟ್ಯಂತರ ಹಣವನ್ನು ಲೂಟಿ ಮಾಡಲಾಗಿದೆ ಎಂದು ದೂರಿದರು.
ದೇಶವು ಕೋವಿಡ್ ಸಂಕಷ್ಟದಲ್ಲಿದ್ದರೂ ಸಹ ಶಾಸಕ ಆರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪ ಶಂಕುಸ್ಥಾಪನೆ, ಉದ್ಘಾಟನೆ ಎಂಬ ನೆಪದಲ್ಲಿ ಲಾಕ್ ಡೌನ್, ಸೀಲ್ ಡೌನ್ ಮೀರಿ ನೀತಿ ನಿಯಮ ಗಾಳಿಗೆ ತೂರಿ ರೋಗ ಹೆಚ್ಚಲು ಕಾರಣ ಆಗಿದ್ದಾರೆ ಎಂದರು. ಎಂಪಿಎಂ ಕಾರ್ಖಾನೆ ಮುಳಗಡೆ ಮಾಡಲು ಮುಖ್ಯ ಕಾರಣರಾದ ಶಾಸಕ ಆರಗ ಜ್ಞಾನೇಂದ್ರ ಅವರ ಮೇಲಿನ ರೂ.300 ಕೋಟಿ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ಪ್ರಮುಖ ಬೀದಿಯಲ್ಲಿ ಮಾಜಿ ಸಚಿವರ ನೇತೃತ್ವದಲ್ಲಿ ನಡೆದ ಬೈಸಿಕಲ್ ಜಾಥಾದಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ, ಬಿ.ಜಿ. ನಾಗರಾಜ್, ಸದಾಶಿವ ಶ್ರೇಷ್ಠಿ, ಚಂದ್ರಮೌಳಿ, ಕುನ್ನೂರು ಮಂಜಪ್ಪ, ಏರಗಿ ಉಮೇಶ, ಪ್ರಭಾಕರ್, ಬ್ರಹ್ಮೇಶ್ವರ ಸುಧಿಧೀರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.