Arecanut ಕೊಳೆರೋಗಕ್ಕೆ ಪರಿಹಾರ; ಶೀಘ್ರದಲ್ಲೇ ಸಿಎಂ ಬಳಿ ನಿಯೋಗ; ಬೇಳೂರು ಭರವಸೆ


Team Udayavani, Sep 4, 2024, 5:29 PM IST

Arecanut ಕೊಳೆರೋಗಕ್ಕೆ ಪರಿಹಾರ; ಶೀಘ್ರದಲ್ಲೇ ಸಿಎಂ ಬಳಿ ನಿಯೋಗ; ಬೇಳೂರು ಭರವಸೆ

ಸಾಗರ: ಕೊಳೆರೋಗದಿಂದ ಬೆಳೆಹಾನಿಗೊಳಗಾಗಿರುವ ಸಾಗರ, ಸೊರಬ, ಹೊಸನಗರ ತಾಲೂಕಿನ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಆಪ್ಸ್‌ಕೋಸ್, ಮ್ಯಾಮ್ಕೋಸ್, ತೋಟಗಾರ‍್ಸ್ ಮೊದಲಾದ ಸಹಕಾರಿ ಸಂಸ್ಥೆಗಳ ವತಿಯಿಂದ ಶಾಸಕರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಸಂಸ್ಥೆಯಲ್ಲಿ 50ಸಾವಿರಕ್ಕೂ ಹೆಚ್ಚು ಷೇರುದಾರ ಸದಸ್ಯರಿದ್ದು ಬೆಳೆ ಹಾನಿಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಪರೀತ ಮಳೆಯಿಂದಾಗಿ ಶೇ. 60ಕ್ಕೂ ಹೆಚ್ಚು ಅಡಿಕೆ ಬೆಳೆ ಹಾನಿಯಾಗಿದೆ. ಕೂಡಲೇ ಮುಖ್ಯಮಂತ್ರಿಗಳ ಗಮನ ಸೆಳೆದು ಬೆಳೆಗಾರರಿಗೆ ಕನಿಷ್ಠ 50 ಸಾವಿರ ರೂ. ಪರಿಹಾರ ಧನ ಕೊಡಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ವರ್ಷ ಸುರಿದ ಅತಿವೃಷ್ಟಿಯ ಪರಿಣಾಮವಾಗಿ ಎಲ್ಲ ಅಡಿಕೆ ಬೆಳೆಗಾರರ ತೋಟಗಳಲ್ಲೂ ಕೊಳೆರೋಗ ವ್ಯಾಪಿಸಿದ್ದು ಒಂದು ಎಕರೆಗೆ ಔಷಧ ಸಿಂಪಡಣೆಗೆ ಒಂದು ಬಾರಿಗೆ ಕನಿಷ್ಠ 25 ಸಾವಿರ ರೂ. ಬೇಕಾಗಿದೆ. ಈ ರೀತಿ ಈಗಾಗಲೇ ನಾಲ್ಕು ಬಾರಿ ಔಷಧ ಸಿಂಪಡಿಸಲಾಗಿದೆ. ಆದರೆ ಕೊಳೆ ರೋಗ ನಿಯಂತ್ರಣಕ್ಕೆ ಬರದೆ ಶೇ. 60ಕ್ಕೂ ಹೆಚ್ಚು ಅಡಿಕೆ ನಷ್ಟವಾಗಿದೆ ಎಂದು ವಿವರಿಸಲಾಗಿದೆ.

ಈ ಸಂದರ್ಭದಲ್ಲಿ ಆಪ್ಸ್‌ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಗೌಡ, ತೋಟಗಾರ‍್ಸ್ ಅಧ್ಯಕ್ಷ ದೇವಪ್ಪ ಕೆ.ಸಿ., ಟಿಎಪಿಎಂಸಿಎಸ್ ಅಧ್ಯಕ್ಷ ಲೋಕನಾಥ್ ಬಿಳಿಸಿರಿ, ಆಪ್ಸ್‌ಕೋಸ್ ಉಪಾಧ್ಯಕ್ಷ ಕೆ.ಎಸ್.ಸುಬ್ರಾವ್, ತೋಟಗಾರ‍್ಸ್ ಉಪಾಧ್ಯಕ್ಷ ಹು.ಭಾ.ಅಶೋಕ್, ಮ್ಯಾಮ್ಕೋಸ್ ನಿರ್ದೇಶಕ ದಿನೇಶ್ ಬರದವಳ್ಳಿ, ಆಪ್ಸ್‌ಕೋಸ್ ನಿರ್ದೇಶಕರಾದ ಈಳಿ ಸುರೇಶ್, ರಮೇಶ್ ಎಂ.ಬಿ., ಕುಂದಗೋಡು ಭಾಸ್ಕರ, ಸತ್ಯನಾರಾಯಣ ಕೆಳದಿ, ಎಂ.ಎಸ್.ನಾಗರಾಜ್, ಸಂಪತ್ ಭೀಮನಕೋಣೆ, ಕೃಷ್ಣಮೂರ್ತಿ ಗಡಿಕಟ್ಟೆ, ಶ್ರೀಕಂಠಗೌಡ, ಬಸವರಾಜ್ ಇನ್ನಿತರರು ಹಾಜರಿದ್ದರು.

ಪರಿಹಾರ ಕೊಡಿಸಲು ಪ್ರಯತ್ನ: ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಅಡಿಕೆ ಬೆಳೆಗಾರರಿಗೆ ಪರಿಹಾರ ಕೊಡಿಸಲು ಈಗಾಗಲೇ ಸರ್ಕಾರದ ಜೊತೆ ಮಾತುಕತೆ ನಡೆಸಲಾಗಿದೆ. ಗಣಪತಿ ಹಬ್ಬದ ನಂತರ ಮುಖ್ಯಮಂತ್ರಿಗಳ ಸಮಯವನ್ನು ಪಡೆಯುತ್ತೇನೆ. ಸಾಗರದ ಎಲ್ಲ ಸಹಕಾರಿಗಳು ನಿಯೋಗ ಬಂದು ಸಿಎಂರನ್ನು ಭೇಟಿ ಮಾಡೋಣ. ದೊಡ್ಡ ಪ್ರಮಾಣದಲ್ಲಿ ಕೊಳೆರೋಗದಿಂದ ಅಡಿಕೆ ನಷ್ಟವಾಗಿದ್ದನ್ನು ನಾನೂ ಕೂಡ ಕಣ್ಣಾರೆ ಕಂಡಿದ್ದೇನೆ. ಈ ಬಾರಿಯೂ 2013ರಂತೆಯೇ ವಿಶೇಷ ಪರಿಹಾರ ಕೊಡಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್

Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್

Udupi ಶಾಸಕರ ವಿರುದ್ಧ ಕೇಸ್‌ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ

Udupi ಶಾಸಕರ ವಿರುದ್ಧ ಕೇಸ್‌ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

1-hosanagara

Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

CBI

Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್‌ 17ರ ವರೆಗೆ ಸಿಬಿಐ ವಶಕ್ಕೆ

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

voter

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.