Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು
Team Udayavani, Oct 4, 2024, 3:59 PM IST
ಸಾಗರ: ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ. 1 ರಂದು ಲೋಕೇಶ್ ಎಂಬವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ಡಾ. ನಾಗೇಂದ್ರಪ್ಪ ವಿನಾ ಕಾರಣ ಲೋಕೇಶ್ ಅವರ ಪತ್ನಿಯ ಕೆನ್ನೆಗೆ ರಭಸವಾಗಿ ಹೊಡೆದಿದ್ದಾರೆ. ಇದರಿಂದ ಮಹಿಳೆಗೆ ಕಿವಿ ನೋವಾಗಿದ್ದು ಮಾನಸಿಕವಾಗಿ ಹೆದರಿದ್ದಾರೆ ಎನ್ನಲಾಗಿದೆ.
ಘಟನೆಯ ಬಳಿಕ ಹೊಡೆದಿರುವ ಕಾರಣ ತಿಳಿಯಲು ಲೋಕೇಶ್, ಡಾ. ನಾಗೇಂದ್ರಪ್ಪ ಅವರನ್ನು ಭೇಟಿಯಾಗಲು ಆಸ್ಪತ್ರೆಯಲ್ಲಿ ಹುಡುಕಿದಾಗ ಅವರು ನಾಪತ್ತೆಯಾಗಿದ್ದರು. ಫೋನ್ ಕರೆ ಮಾಡಿ ವಿಚಾರಿಸಿದಾಗ ನೀವು ಏನು ಬೇಕಾದರೂ ಮಾಡಿಕೊಳ್ಳಿ. ನನಗೂ ಕಾನೂನು ಗೊತ್ತಿದೆ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.
ಡಾ. ನಾಗೇಂದ್ರಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಲೋಕೇಶ್ ನೀಡಿದ ದೂರಿನ ಹಿನ್ನೆಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.