Sagara: ಬಾಳೆಹಳ್ಳಿಯಲ್ಲೊಂದು ವಿಚಿತ್ರ ಬೆಳವಣಿಗೆ; ಒಂದೇ ಜಾಗ, ಎರಡು ವನಮಹೋತ್ಸವ!
Team Udayavani, Aug 27, 2024, 3:38 PM IST
ಸಾಗರ: ಕೇವಲ 68 ದಿನಗಳ ಹಿಂದೆ ಖುದ್ದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಪಾಲ್ಗೊಂಡು ವನಮಹೋತ್ಸವ ಮಾಡಿದಲ್ಲಿಯೇ ಮತ್ತೊಮ್ಮೆ ಗ್ರಾಮಸ್ಥರು, ಅರಣ್ಯ ಇಲಾಖೆಯವರು ಗಿಡ ನೆಟ್ಟ ವಿಚಿತ್ರ ಘಟನೆ ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಳೆಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಜೂನ್21ರಂದು ಸೊಪ್ಪಿನ ಬೆಟ್ಟ ಸಂರಕ್ಷಣೆ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬೇಳೂರು ಪಾಲ್ಗೊಂಡಿದ್ದರು. ಹಲಸಿನ ಗಿಡ ನೆಟ್ಟು, ಇದರ ಫಲವನ್ನು ನಾವೇ ತಿನ್ನುವ ಕಾಲ ಬರಲಿ ಎಂದು ಆಶಯ ವ್ಯಕ್ತಪಡಿಸಿದ್ದರು. ಈ ನಡುವೆ ಆಗಸ್ಟ್ 22ರಂದು ಕೆಲವು ದುಷ್ಕರ್ಮಿಗಳು ತಮ್ಮ ಒತ್ತುವರಿಯನ್ನು ಕಂದಾಯ ಇಲಾಖೆ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಬಾಳೆಹಳ್ಳಿಯ ಗ್ರಾಮಸ್ಥರ ಕೈವಾಡ ಇದೆ ಎಂದು ಶಂಕಿಸಿ, ಈ ಭಾಗದಲ್ಲಿ ನೆಟ್ಟ ಗಿಡಗಳನ್ನು ಕಿತ್ತು, ಕತ್ತರಿಸಿ, ಟ್ರೀ ಗಾರ್ಡ್ಗಳನ್ನು ನಾಶಗೊಳಿಸಿದ ಘಟನೆ ನಡೆದಿತ್ತು. ಈ ಸಂಬಂಧ ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿತ್ತು.
ಈ ನಡುವೆ ಬಾಳೆಹಳ್ಳಿಯ ಗ್ರಾಮಸ್ಥರನ್ನು ಸಂಪರ್ಕಿಸಿದ ಅರಣ್ಯ ಇಲಾಖೆ, ಮಳೆಗಾಲ ಮುಕ್ತಾಯವಾಗದೇ ಇರುವ ಹಿನ್ನೆಲೆಯಲ್ಲಿ ಇನ್ನೊಮ್ಮೆ ವನಮಹೋತ್ಸವ ಮಾಡುವ ಇಂಗಿತ ವ್ಯಕ್ತಪಡಿಸಿತ್ತು. ಸಕಾರಾತ್ಮಕವಾಗಿ ಗ್ರಾಮಸ್ಥರು ಸ್ಪಂದಿಸಿದ್ದರಿಂದ ಇಜೆ ಮನೆ ಗ್ರಾಪಂ ಅಧ್ಯಕ್ಷೆ ನಾಗವೇಣಿ ಪ್ರವೀಣ ಮತ್ತೊಂದು ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ಗ್ರಾಪಂ ಸದಸ್ಯ ಗಿರೀಶ್ ಎನ್. ಹಕ್ರೆ, ಸಾಮಾಜಿಕ ಕಾರ್ಯಕರ್ತ ಪ್ರವೀಣ ಸೆಟ್ಟಿಸರ, ಗ್ರಾಮಸ್ಥರಾದ ಶ್ರೀಧರಮೂರ್ತಿ, ಮನು, ಬಿ.ಟಿ.ಪ್ರಭಾಕರ, ಗಣಪತಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.