Sagara; ಮನೆಯೊಳಗೆ ನುಗ್ಗಿ ದಾಳಿ ನಡೆಸಿದ ಹುಲಿ: ಓರ್ವನಿಗೆ ಗಾಯ
ಮನೆಯೊಳಗೂ ವಾಸಿಸಲು ಭಯಪಡುವ ಸ್ಥಿತಿ
Team Udayavani, Jun 29, 2023, 5:24 PM IST
ಸಾಗರ: ತಾಲೂಕಿನ ಶರಾವತಿ ಹಿನ್ನೀರು ಪ್ರದೇಶವಾದ ಎಸ್ಎಸ್ ಬೋಗ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಾಠಿ ಗ್ರಾಮದ ಕಂಚಿಕೇರಿ ನಿವಾಸಿ ಗಣೇಶ್ ಅವರ ಮೇಲೆ ಬುಧವಾರ ತಡರಾತ್ರಿ ಹುಲಿ ದಾಳಿ ಮಾಡಿದೆ.
ಮರಾಠಿ ಗ್ರಾಮದ ಕಂಚಿಕೆರೆ ವಾಸಿ ಗಣೇಶ್ ಅವರು ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಹುಲಿ ಮನೆಯೊಳಗೆ ನುಗ್ಗಿ ಗಣೇಶ್ ಅವರ ಮೈಕೈಗೆ ಪರಚಿ, ಕಚ್ಚಿ ಗಾಯಗೊಳಿಸಿದೆ. ಗಾಯಗೊಂಡಿದ್ದ ಗಣೇಶ್ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮರಾಠಿ ಗ್ರಾಮದಲ್ಲಿ ಹುಲಿ ಕಾಟ ಜಾಸ್ತಿಯಾಗಿದ್ದು ಆಗಾಗ ಜನವಸತಿ ಪ್ರದೇಶಕ್ಕೆ ನುಗ್ಗುವ ಹುಲಿಗಳು ಐದಾರು ನಾಯಿಯನ್ನು ತಿಂದು ಹಾಕಿದ್ದು, ಜಾನುವಾರುಗಳ ಮೇಲೆ ಸಹ ದಾಳಿ ನಡೆಸಿದೆ. ಈ ಬಗ್ಗೆ ಗ್ರಾಮಸ್ಥರು ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಹುಲಿ ಕಾಟದಿಂದ ಗ್ರಾಮಸ್ಥರು ಮನೆಯೊಳಗೆ ವಾಸಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದ್ದು, ಶಾಸಕರು ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.