Sagara ; ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿಗಳ ಬಂಧನಕ್ಕೆ ಹಿಂಜಾವೇ ಆಗ್ರಹ
ಸಾಗರ ಬಂದ್ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ...
Team Udayavani, Aug 24, 2023, 6:36 PM IST
ಸಾಗರ: ಪಟ್ಟಣದ ಜೆಪಿ ನಗರದ ಅಪ್ರಾಪ್ತ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ತತ್ ಕ್ಷಣ ಬಂಧಿಸುವಂತೆ ಒತ್ತಾಯಿಸಿ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಪೇಟೆ ಠಾಣೆ ಮೂಲಕ ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪಟ್ಟಣದ ಜೆಪಿ ನಗರದ ಅಪ್ರಾಪ್ತ ಹುಡುಗಿಯನ್ನು ಆ. 19 ರಂದು ಇಬ್ಬರು ಕಾಮುಕರು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಾಲಕಿಯನ್ನು ಮನೆಗೆ ಬಿಟ್ಟು ಹೋಗುವಾಗ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಈ ಘಟನೆಯನ್ನು ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದರು.
ಘಟನೆ ನಡೆದು ನಾಲೈದು ದಿನ ಕಳೆದರೂ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸರಿಗೆ ಆರೋಪಿಗಳ ಬಗ್ಗೆ ಅಗತ್ಯ ಮಾಹಿತಿಯನ್ನು ಸಹ ನೀಡಲಾಗಿದೆ. ಆದರೂ ಪೊಲೀಸರು ಮೀನಾಮೇಷ ಎಣಿಸುತ್ತಿರುವುದು ಏಕೆ ಎನ್ನುವುದು ಅರ್ಥವಾಗುತ್ತಿಲ್ಲ. ಮುಂದಿನ ಎರಡು ದಿನಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸದೆ ಹೋದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸಾಗರ ಬಂದ್ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವೇದಿಕೆ ಪ್ರಮುಖರಾದ ಕೋಮಲ್ ರಾಘವೇಂದ್ರ, ಆಟೋ ಗಣೇಶ್, ಸಂತೋಷ್, ಕೆ.ವಿ.ಪ್ರವೀಣ, ವಿನಯ ಶೇಟ್, ರಾಘವೇಂದ್ರ ಕಾಮತ್, ಆದಿತ್ಯ, ನಂದೀಶ್ ಸೂರಗುಪ್ಪೆ, ಪರಶುರಾಮ್, ಪವನ್ ಮಾಸೂರು, ದೀಪಕ್ ಭಂಡಾರಿ, ಶ್ರೀಧರ್ ಸಾಗರ, ಕಿರಣ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.