Sagara: ಸಿಗರೇಟ್ ಕಳ್ಳತನ ಪ್ರಕರಣ; ಅಂತರಾಜ್ಯ ಕಳ್ಳನ ಬಂಧನ


Team Udayavani, Mar 15, 2024, 8:39 AM IST

2-sagara

ಸಾಗರ: ನಗರದ ಯುನೈಟೆಡ್ ಟ್ರೇಡಿಂಗ್ ಕಂಪನಿಯಲ್ಲಿ 2023ರ ಮೇ ತಿಂಗಳಲ್ಲಿ ನಡೆದಿದ್ದ 17 ಲಕ್ಷ ಮೊತ್ತದ ಸಿಗರೇಟ್ ತುಂಬಿದ್ದ ಬಾಕ್ಸ್ ಕಳವು ಪ್ರಕರಣದಲ್ಲಿ ಓರ್ವ ಅಂತರಾಜ್ಯ ಕಳ್ಳನನ್ನು ಬಂಧಿಸಿರುವ ಪೇಟೆ ಪೋಲಿಸರು 6 ಲಕ್ಷ ರೂ. ವಶ ಪಡಿಸಿಕೊಂಡು, ಉಳಿದ ಮೂವರಿಗೆ ಹುಡುಕಾಟ ನಡೆಸಿದ್ದಾರೆ.

ಪಿಎಸ್‌ಐಗಳಾದ ಮಹೇಶ ಕುಮಾರ್, ಸಂತೋಷ್ ಬಾಗೋಜಿ ಮತ್ತು ಲಕ್ಷ್ಮಣ ಮೊದಲಾದವರಿದ್ದ ತನಿಖಾ ತಂಡ ರಾಜಸ್ಥಾನದ ಜಾಲೂರು ಜಿಲ್ಲೆಯ ಮಾಂಡವಾಲ ಗ್ರಾಮದ ನಿವಾಸಿ ಜೀತೇಂದ್ರ ಕುಮಾರ್ (27)ನನ್ನು ದಸ್ತಗಿರಿ ಮಾಡಿ, ಸಿಗರೇಟ್ ಮಾರಾಟ ಮಾಡಿ ಹಂಚಿಕೊಂಡಿದ್ದ 6 ಲಕ್ಷ ರೂ.ವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಹಿನ್ನೆಲೆ: ಕಳೆದ ವರ್ಷ ಮೇ 14ರಂದು ಸೊರಬ ರಸ್ತೆಯಲ್ಲಿರುವ ಅನುರಾಧಾ ಕಾಗೋಡುರವರಿಗೆ ಸೇರಿದ ಯುನೈಟೆಡ್ ಟ್ರೇಡಿಂಗ್ ಕಂಪೆನಿ ಕಟ್ಟಡದ ಹಿಂದಿನ ಬಾಗಿಲು ಒಡೆದು ಅಲ್ಲಿದ್ದ 17 ಲಕ್ಷ ಮೌಲ್ಯದ ಸಿಗರೇಟ್ ತುಂಬಿದ್ದ ಬಾಕ್ಸ್‌ಗಳನ್ನು ಕಳ್ಳತನ ಮಾಡಲಾಗಿತ್ತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಪ್ರಾರಂಭಿಸಿದ್ದ ಪೊಲೀಸರಿಗೆ ವಾಹನದ ನಂಬರ್ ದೊರೆತಿತ್ತು. ಇದರ ಜಾಡು ಹಿಡಿದು, ಮಾಲೀಕರನ್ನು ಪ್ರಶ್ನಿಸಿದಾಗ ಹುಬ್ಬಳ್ಳಿಯಲ್ಲಿ ಬಾಡಿಗೆಗೆ ಬಂದಿದ್ದ ರಾಜಸ್ಥಾನ ಮೂಲದ ಮೂವರು ಯುವಕರು ಕಾರನ್ನು ಪಡೆದು, ಮಾಲೀಕನನ್ನು ಹೋಟೆಲ್‌ನಲ್ಲಿ ಬಿಟ್ಟು ಸಾಗರಕ್ಕೆ ಬಂದು, ಕಳ್ಳತನ ಮಾಡಿ ಪರಾರಿಯಾಗಿದ್ದು ತಿಳಿದು ಬಂದಿದೆ.

ಕದ್ದಿದ್ದ ಸಿಗರೇಟನ್ನು ಮಾರಾಟ ಮಾಡಿ ಬಂದ ಹಣವನ್ನು ಎಲ್ಲರೂ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನ ಮೂಲದ ನಾಲ್ವರ ತಂಡ ರಾಜ್ಯದ ಬಿಜಾಪುರ, ಸಿಂಧಗಿ, ಸವದತ್ತಿ ಮೊದಲಾದೆಡೆಯೂ ಇದೇ ರೀತಿ ಹೋಲ್‌ಸೆಲ್ ಸಿಗರೇಟ್ ಮಾರಾಟ ಮಾಡುವವರನ್ನು ದೋಚಿರುವುದು ಇದೇ ವೇಳೆ ಪತ್ತೆಯಾಗಿದೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.