Sagara; ಇತಿಹಾಸ ಸೇರಿದ ಇತಿಹಾಸ ತಜ್ಞ ಗುಂಡಾ ಜೋಯಿಸ್

ಭಾನುವಾರ ಕೊನೆಯುಸಿರೆಳೆದ 94ರ ಹರೆಯದ ಕೆಳದಿ ರಾಜ್ಯ ಇತಿಹಾಸ ಸಂಶೋಧಕ

Team Udayavani, Jun 2, 2024, 8:51 PM IST

1-wqeweqw

ಸಾಗರ: ಕರ್ನಾಟಕದ ಪ್ರಮುಖ, ಹಿರಿಯ ಇತಿಹಾಸ ತಜ್ಞರಾಗಿ ಖ್ಯಾತರಾಗಿದ್ದ ಕೆಳದಿ ಗುಂಡಾ ಜೋಯಿಸ್ ವಯೋಸಹಜವಾಗಿ ತಮ್ಮ 94ರ ಇಳಿವಯಸ್ಸಿನಲ್ಲಿ ಭಾನುವಾರ ಕೊನೆಯುಸಿರೆಳೆದರು. ಶನಿವಾರದವರೆಗೂ ಅವರು ಕ್ರಿಯಾಶೀಲರಾಗಿದ್ದುದು ವಿಶೇಷ. ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳಿಂದ ಪ್ರಸಿದ್ಧರಾಗಿದ್ದಾರೆ. ಹಳೆಯ ಕಾಲದ ಮೋಡಿ ಲಿಪಿಯನ್ನು, ತಾಳೆಗರಿ ಗ್ರಂಥಗಳನ್ನು ಓದಬಲ್ಲ ಕೆಲವೇ ಕೆಲವು ತಜ್ಞರಲ್ಲಿ ಇವರು ಒಬ್ಬರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ತಮ್ಮ ೫೦ನೆಯ ವಯಸ್ಸಿನಲ್ಲಿ ಜೋಯಿಸರು ಮೈಸೂರು ವಿಶ್ವವಿದ್ಯಾನಿಲಯದ ಅಂಚೆ ತೆರಪಿನ ಶಿಕ್ಷಣದ ಮೂಲಕ ಎಂಎ (ಇತಿಹಾಸ) ಪದವಿಯನ್ನು ಪಡೆದವರು. ಗ್ರಾಮಲೆಕ್ಕಿಗರಾಗಿ, ಪೋಸ್ಟ್ ಮಾಸ್ಟರ್ ಆಗಿ, ವಿದ್ಯುತ್ ಇಲಾಖೆ, ಆಕಾಶವಾಣಿ, ವಯಸ್ಕರ ಶಿಕ್ಷಣ ಸಮಿತಿ, ಕನ್ನಡ ಸಂಸ್ಕೃತಿ ಪ್ರಸಾರದ ಉಪನ್ಯಾಸಕರಾಗಿ, ಶಿವಮೊಗ್ಗದ ಸರಕಾರಿ ವಸ್ತು ಸಂಗ್ರಹಾಲಯದ ಸರ್ವೇಕ್ಷಣಾಧಿಕಾರಿಯಾಗಿ, ಗೋವಾ ಪರ್ತಗಾಳಿ ಮಠದಲ್ಲಿ ಸಂಶೋಧನೆ ನಡೆಸಲು ರಾಜ್ಯದಿಂದ ನಿಯುಕ್ತರಾಗಿ, ತಮಿಳುನಾಡಿಗೆ ಸರಕಾರದ ಸಾಂಸ್ಕೃತಿಕ ನಿಯೋಗಿಯಾಗಿ, ರಾಜ್ಯ ಪತ್ರಾಗಾರ ಇಲಾಖೆಯಲ್ಲಿ ಉಪನ್ಯಾಸಕರಾಗಿ, ರಾಜ್ಯದ ಚಾರಿತ್ರಿಕ ಸರ್ವೇಕ್ಷಣ ಸಮಿತಿಯ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಕರಾಗಿ, ಕೆಳದಿ ದೇವಾಲಯದ ಉಚ್ಚಾಧಿಕಾರಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.

1962 ರಿಂದ1975 ರವರೆಗೆ ಮೈಸೂರು ಹಾಗು ಧಾರವಾಡದ ವಿವಿ ಇತಿಹಾಸದ ಪ್ರಾಧ್ಯಾಪಕರಾಗಿ 1980 ರಿಂದ 1985 ರವರೆಗೆ ಕರ್ನಾಟಕ ಇತಿಹಾಸ ದಾಖಲೆ ಸಂಶೋಧನಾ ಸಮಿತಿಯ ಸದಸ್ಯರು ಆಗಿದ್ದರು.

ತಮ್ಮ17 ನೆಯ ವಯಸ್ಸಿನಿಂದಲೇ ಜೋಯಿಸರು ಕೆಳದಿಯ ಇತಿಹಾಸದ ಸಂಶೋಧನೆ ಆರಂಭಿಸಿ 1960 ರಲ್ಲಿ ತಮ್ಮ ಮನೆಯಲ್ಲಿಯೇ ಐತಿಹಾಸಿಕ ವಸ್ತು ಸಂಗ್ರಹಾಲಯ ಪ್ರಾರಂಭಿಸಿ ೧೯೮೯ರ ನಂತರ ಸರಕಾರಕ್ಕೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರ ಮಠದ ಪ್ರಾಚೀನ ಓಲೆಗರಿ ಹಸ್ತಪ್ರತಿ ಸೂಚಿಯನ್ನು ತಯಾರಿಸಿಕೊಟ್ಟಿದ್ದ ಗುಂಡಾ ಜೋಯಿಸರು, ನಿಷ್ಕಳಂಕಿಣಿ ಕೆಳದಿ ವೀರಮ್ಮಾಜಿ, ಕೆಟಲಾಗ್ ಆಫ್ ಏನ್ಷಿಯಂಟ್ ತಿಗಳಾರಿ ಪಾಮ್‌ಲೀಫ್, ಇತಿಹಾಸ ವೈಭವ,ಕೆಳದಿಯ ಸಂಕ್ಷಿಪ್ತ ಇತಿಹಾಸ, ಇಕ್ಕೇರಿ ಅರಸರು, ಬಿದನೂರಿನ ಕೆಳದಿ ನಾಯಕರು, ಕೆಳದಿಯ ವೆಂಕಣ್ಣಯ್ಯ ಕವಿಯ ಕೀರ್ತನೆಗಳು, ಲಿಂಗಣ್ಣ ಕವಿಯ ಕೆಳದಿ ನೃಪವಿಜಯ, ಕೆಳದಿ ಅರಸರು ಮೊದಲಾದ 30 ಕ್ಕೂ ಹೆಚ್ಚು ಇತಿಹಾಸ ಸಂಶೋಧನೆಯ ಕೃತಿಗಳು, 250 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು, ಲೇಖನಗಳನ್ನು ಪ್ರಕಟಿಸಿದ್ದಾರೆ.

1994 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 1995 ರಲ್ಲಿ ಶ್ರೇಷ್ಠ ಸಂಶೋಧಕ ರಾಜ್ಯ ಪ್ರಶಸ್ತಿ, ಸ್ವೀಡನ್ ವಿಶ್ವವಿದ್ಯಾಲಯದಿಂದ ಸ್ಕ್ರಿಪ್ಟ್ ಎಕ್ಸ್‌ಪರ್ಟ್ ಬಿರುದು, 2004 ರ ಹೊನ್ನಾಳಿ ಕರ್ನಾಟಕ ಇತಿಹಾಸ ಅಕಾಡೆಮಿ ವಾರ್ಷಿಕ ಸಮ್ಮೇಳನದ ಅಧ್ಯಕ್ಷ ಸ್ಥಾನ, 2013 ರಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದ ಜೋಯಿಸರು ತಮ್ಮ ಕೊನೆ ದಿನಗಳವರೆಗೂ ಅಂಚೆ ಕಾರ್ಡ್‌ಗಳಲ್ಲಿಯೇ ಸಂವಹನ ನಡೆಸುವ ಮೂಲಕ ವಿಶಿಷ್ಟರಾಗಿದ್ದರು.

ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಪುತ್ರ ಡಾ. ವೆಂಕಟೇಶ್ ಜೋಯ್ಸ್‌ರವರ ಸಾಗರದ ಅಣಲೇಕೊಪ್ಪ ಬಡಾವಣೆ ಮನೆಯಲ್ಲಿ ಇರಿಸಲಾಗಿದೆ. ಮೃತರ ಅಂತ್ಯಕ್ರಿಯೆ ಸೋಮವಾರ 10 ಗಂಟೆಗೆ ಸಾಗರದ ಮಾರಿಕಾಂಬ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.