ಸಾಗರ : ಆಡುಗಳಲೆಯಲ್ಲಿ ಹಳ್ಳ ಒಡೆದು ಜಮೀನಿಗೆ ನುಗ್ಗಿದ ನೀರು, ಅಪಾರ ಹಾನಿ
Team Udayavani, Jul 10, 2022, 5:07 PM IST
ಸಾಗರ: ತಾಲೂಕಿನ ಸಂಕಣ್ಣ ಶ್ಯಾನಭಾಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಡುಗಳಲೆಯಲ್ಲಿ ಅಂಬಾರಗುಡ್ಡದ ಕುಸಿತದಿಂದ ಆಡುಗಳಲೆ ಹಳ್ಳದ ದಂಡೆ ಒಡೆದಿದ್ದು ನೀರು ನುಗ್ಗಿದ ಹಿನ್ನೆಲೆಯಲ್ಲಿ ನೂರಾರು ಎಕರೆ ಭತ್ತದ ಗದ್ದೆ ಹಾಗೂ ಅಡಕೆ ತೋಟಗಳಿಗೆ ಹಾನಿಯಾಗಿದೆ.
ಐದು ದಿನಗಳ ಹಿಂದೆ ದಂಡೆಯಲ್ಲಿ ಬಿರುಕು ಉಂಟಾಗಿ ನೀರಿನ ಪ್ರವಾಹ ತೋಟಗಳ ಕಡೆ ನುಗ್ಗಿರುವುದರಿಂದ ಸಂಪೂರ್ಣ ಬೆಳೆ ನಾಶವಾಗಿ ಮಣ್ಣು ತೋಟ ಹಾಗೂ ಗದ್ದೆಗಳನ್ನು ಆವರಿಸಿದೆ.
ಐದು ದಿನಗಳ ಹಿಂದೆಯೇ ಹಾನಿ ಆಗಲು ಆರಂಭವಾಗಿದ್ದರೂ ರೆವಿನ್ಯೂ ಇನ್ಸ್ಪೆಕ್ಟರ್ ಹೊರತಾಗಿ ಕಂದಾಯ ಇಲಾಖೆಯ ಯಾವ ಅಧಿಕಾರಿಗಳೂ ಸ್ಥಳಕ್ಕೆ ಬಂದಿಲ್ಲ. ತಹಶೀಲ್ದಾರ್ ಮಟ್ಟದ
ಅಧಿಕಾರಿಗಳ ಆಗಮನವನ್ನು ನಾವು ನಿರೀಕ್ಷಿಸಿದ್ದೆವು. ಹಳ್ಳಕ್ಕೆ ತಡೆಗೋಡೆಯನ್ನು ನಿರ್ಮಿಸಿಕೊಡುವಲ್ಲಿ ಸಹಾಯ ಮಾಡಿದ್ದರೆ ನಮ್ಮ ನೂರಾರು ಎಕರೆ ಜಮೀನು, ಬೆಳೆಯನ್ನು ಉಳಿಸಿಕೊಳ್ಳಬಹುದಾಗಿತ್ತು ಎಂದು ಅಲ್ಲಿನ ಗ್ರಾಮ ಪಂಚಾಯ್ತಿ ಸದಸ್ಯರಾದ ವಿಜಯ ಆಡುಗಳಲೆ ತಿಳಿಸಿದರು.
ತುಮರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು ಮಾತನಾಡಿ, ಅಂಬಾರಗುಡ್ಡದ ಮೂಲದಿಂದ ಮಳೂರು ಹಳ್ಳದ ನೀರಿನ ಪಾತಳಿಯಲ್ಲಿ 1200 ಮೀಟರ್ನ ಸುಸಜ್ಜಿತವಾದ ಕಾಲುವೆ ನಿರ್ಮಿಸಿದರೆ ಪ್ರತಿ ವರ್ಷ ಉಂಟಾಗುವ ನೆರೆ ಹಾವಳಿಯನ್ನು ತಪ್ಪಿಸಬಹುದು. ಈ ಬಾರಿ ಇಲ್ಲಿನ ಸುಧಾಮಣಿ ಹಾಗೂ ಚೂಡಾರತ್ನ ಸೇರಿದ ಮೂರು ಎಕರೆ ಹೊಸ ತೋಟ ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಈ ಸಂಬಂಧ ಜಿಲ್ಲಾಡಳಿತ ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಗೋವಾ: ಚರ್ಚೆಗೆ ಕಾರಣವಾದ 10 ಕಾಂಗ್ರೆಸ್ ಶಾಸಕರು ಬಿಜೆಪಿಯಲ್ಲಿ ವಿಲೀನ ಸುದ್ದಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.