ಕುಡಿದು ಗಲಾಟೆ… ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕಡಿದು ಕೊಂದು ಪರಾರಿಯಾದ ಮದ್ಯವ್ಯಸನಿ ಪತಿ
Team Udayavani, Jan 21, 2024, 1:49 PM IST
ಸಾಗರ: ಮದ್ಯವ್ಯಸನಿಯೊಬ್ಬ ಪತ್ನಿಯ ಕತ್ತು ಕಡಿದು ಹತ್ಯೆ ಮಾಡಿರುವ ಘಟನೆ ತಾಲೂಕಿನ ತುಮರಿ ಕುದರೂರು ಗ್ರಾಮದ ಆವಿಗೆ ಕುಣಬಿ ಕೇರಿಯಲ್ಲಿ ನಡೆದಿದೆ.
ನೀಲಾವತಿ (29) ಕೊಲೆಗೀಡಾದ ನತದೃಷ್ಟೆ. ಪತಿ ಲೋಕೇಶ್ ವಿರುದ್ಧ ಕಾರ್ಗಲ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ವಿಪರೀತ ಕುಡಿದು ಬಂದು ಗಲಾಟೆ ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ ಪತ್ನಿಯ ಕೈ ಮತ್ತು ಕುತ್ತಿಗೆಯನ್ನು ಆರೋಪಿ ಕತ್ತರಿಸಿದ್ದಾನೆ. ವಿಷಯ ತಿಳಿದ ಗ್ರಾಮಸ್ಥರು, ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ಕಾಡಿನೊಳಗೆ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ನೀಲಾವತಿ ಅವರನ್ನು ಗ್ರಾಮಸ್ಥರು ಸಾಗರ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
14 ವರ್ಷಗಳ ಹಿಂದೆ ಇವರ ವಿವಾಹವಾಗಿತ್ತು. ಮೂವರು ಪುತ್ರಿಯರು ಇದ್ದಾರೆ. ಕಾರ್ಗಲ್ ಸಬ್ ಇನ್ಸ್ಪೆಕ್ಟರ್ ಹೊಳೇಬಸಪ್ಪ ಹೋಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪತ್ತೆಗಾಗಿ ಸಿಬ್ಬಂದಿ ದಿನೇಶ್ ಮತ್ತು ಪುರುಷೋತ್ತಮ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಾಗರ ಗ್ರಾಮಾಂತರ ವೃತ್ತ ನಿರೀಕ್ಷಕ ಮಹಾಬಲೇಶ ನಾಯ್ಕ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಕಿಷ್ಕಿಂಧಾ ಪಂಪಾ ಸರೋವರದಿಂದ ಅಯೋಧ್ಯೆಯ ಶ್ರೀರಾಮನಿಗೆ ಬಾರಿ ಹಣ್ಣು ಕಳಿಸಿದ ಮಾಜಿ MLC
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.