ಜಾತ್ಯತೀತ ಪದಕ್ಕೆ ಅರ್ಥವೇ ಇಲ್ಲ: ಶಾಸಕ ಚನ್ನಬಸಪ್ಪ
Team Udayavani, Apr 21, 2024, 12:18 AM IST
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇಬೇಕು ಎಂಬಂತೆ ಘಟನೆಗಳು ನಡೆಯುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ಯತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್ ಜೆಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರಕಾರ ಶಕ್ತಿ ತುಂಬುತ್ತಿದೆ. ನಮ್ಮ ಹೆಣ್ಣುಮಕ್ಕಳು ಕಾಲೇಜಿಗೆ ಹೋಗುವುದು ಕಷ್ಟವಾಗುತ್ತಿದೆ. ಎಷ್ಟೋ ಕಡೆ ಪೋಷಕರು ತಮ್ಮ ಮಕ್ಕಳನ್ನು ಕಾಲೇಜಿಗೆ ಕಳಿಸುವುದಿಲ್ಲ ಎನ್ನುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಕೆಫೆಗಳೂ ಸುರಕ್ಷಿತವಾಗಿಲ್ಲ. ಕಾಫಿ ಕುಡಿಯುವುದು ಕಷ್ಟವಾಗುತ್ತಿದೆ ಮತ್ತು ಶಿವಮೊಗ್ಗದಂತಹ ಪಟ್ಟಣದಲ್ಲೂ ಬಾಂಬ್ ತಯಾರಿಕೆ ನಡೆಯುತ್ತಿದೆ ಎಂದರೆ ಪರಿಸ್ಥಿತಿ ಎಲ್ಲಿಯವರೆಗೆ ಬಂದಿದೆ ಎಂದು ತಿಳಿದುಕೊಳ್ಳಬಹುದು.
ಬಾಂಬ್ ತಯಾರಕರು ಕೂಡ ತೀರ್ಥಹಳ್ಳಿಯವರೇ ಆಗಿದ್ದಾರೆ. ಕರ್ನಾಟಕ ಭಯೋತ್ಪಾದಕರನ್ನು ಸಾಕುವ ತಾಣವಾಗಿದೆ ಎಂದು ಆರೋಪಿಸಿದರು.
ಶಾಂತಿ- ಸುವ್ಯವಸ್ಥೆ ಇದೆ ಎಂದು ರಾಜ್ಯ ಸರಕಾರ ಹೇಳುತ್ತಿದೆ. ಆದರೆ ಕೇವಲ ಎರಡು ತಿಂಗಳುಗಳಲ್ಲಿ ರಾಜ್ಯದಲ್ಲಿ 13,495 ವಿವಿಧ ಪ್ರಕರಣಗಳು ನಡೆದಿವೆ. ಅತ್ಯಾಚಾರ, ಕೊಲೆ, ದರೋಡೆ, ಸರ ಕಳವು ಹೀಗೆ ವಿವಿಧ ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಿರುವಾಗ ರಾಜ್ಯದಲ್ಲಿ ಶಾಂತಿ- ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.