ಪ್ರೇಯಸಿಯನ್ನು ಕೊಲೆ ಮಾಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ!
ಏಳು ವರ್ಷದ ಪ್ರೀತಿ ಕೊಲೆ ಹಾಗೂ ಆತಹತ್ಯೆಯಲ್ಲಿ ಅಂತ್ಯ!
Team Udayavani, Aug 27, 2021, 11:26 AM IST
ಶಿವಮೊಗ್ಗ: ಏಳು ವರ್ಷದ ಪ್ರೀತಿಯೊಂದು ಕೊಲೆ ಹಾಗೂ ಆತಹತ್ಯೆಯಲ್ಲಿ ಅಂತ್ಯವಾಗಿದೆ. ಕಳೆದ ಏಳು ವರ್ಷಗಳಿಂದ ತಾನು ಪ್ರೀತಿ ಮಾಡಿದ್ದ ಹುಡುಗಿಯನ್ನು ಕೊಲೆ ಮಾಡಿದ ಪಾಗಲ್ ಪ್ರೇಮಿಯೊಬ್ಬ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ನಡೆದಿರುವುದು ಶಿವಮೊಗ್ಗ ಜಿಲ್ಲೆಯ ನೇರಲಗಿ ಕಾಡಿನಲ್ಲಿ.
ಮೃತಪಟ್ಟವರನ್ನು ಸಾಗರ ತಾಲೂಕು ಕಾನೂರು ಗ್ರಾಮದ ಕವಿತಾ ಮತ್ತು ಬೆಳ್ಳೂರು ಸಮೀಪದ ಕಗ್ಗಲಿಜಡ್ಡು ಗ್ರಾಮದ ದ್ವಿತೀಯ ಪದವಿ ವಿದ್ಯಾರ್ಥಿ ಶಿವಮೂರ್ತಿ ಎಂದು ಗುರುತಿಸಲಾಗಿದೆ. ಹೊಸನಗರ ತಾಲೂಕು ರಿಪ್ಪನ್ ಪೇಟೆ ಠಾಣೆ ವ್ಯಾಪ್ತಿಯ ಬೆಳ್ಳೂರು ಸಮೀಪದ ನೇರಲಗಿ ಕಾಡಿನಲ್ಲಿ ಈ ಘಟನೆ ನಡೆದಿದೆ.
ಗುರುವಾರ ನೇರಲಗಿ ಕಾಡಿನಲ್ಲಿ ಪ್ರೇಯಸಿ ಕವಿತಾಳ ಕತ್ತನ್ನು ವೇಲಿನಲ್ಲಿ ಬಿಗಿದು ಶಿವಮೂರ್ತಿ ಕೊಲೆ ಮಾಡಿದ್ದ. ಬಳಿಕ ಆತನೂ ಅಲ್ಲಿಯೇ ವಿಷ ಸೇವಿಸಿದ್ದ.
ಘಟನೆ ಹಿನ್ನೆಲೆ: ಶಿವಮೂರ್ತಿ ಮತ್ತು ಕವಿತಾ ಕಳೆದ ಏಳು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಹೈಸ್ಕೂಲ್ ನಿಂದಲೇ ಇವರಿಬ್ಬರೂ ಪರಸ್ಪರ ಪ್ರೀತಿಸಲಾರಂಭಿಸಿದ್ದರು. ಬಳಿಕ ಶಿವಮೂರ್ತಿ ಬಳಿಕ ರಿಪ್ಪನ್ ಪೇಟೆಯಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ್ದ. ಕವಿತಾ ಶಿವಮೊಗ್ಗದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಆಂಬುಲೆನ್ಸ್ ಡ್ರೈವರ್ ಓರ್ವನನ್ನು ಕವಿತಾ ಪ್ರೀತಿಸಲಾರಂಭಿಸಿದ್ದಳು ಎನ್ನಲಾಗಿದೆ.
ಇದನ್ನೂ ಓದಿ:ಮೈಸೂರು ದರೋಡೆ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು: ಪುಣೆಯಲ್ಲಿ ಇಬ್ಬರು ಆರೋಪಿಗಳ ಬಂಧನ
ಇದರಿಂದ ರೊಚ್ಚಿಗೆದ್ದ ಶಿವಮೂರ್ತಿ ಶಿವಮೊಗ್ಗದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತಾಳನ್ನು ತನ್ನೂರಿಗೆ ಕರೆದುಕೊಂಡು ಬಂದಿದ್ದ. ಬಳಿಕ ಮಾತನಾಡಬೇಕು ಎಂದು ಹೇಳಿ ಕವಿತಾಳನ್ನು ನೇರಲಿಗೆ ಕಾಡಿಗೆ ಕರೆದೊಯ್ದಿದ್ದ. ಈ ವೇಳೆ ಕಾಡಿನ ಹೊಸಕೆರೆ ಬಳಿ ಕವಿತಾಳ ಕತ್ತನ್ನು ಆಕೆಯ ವೇಲಿನಿಂದಲೇ ಬಿಗಿದು ಕೊಲೆ ಮಾಡಿದ್ದ ಶಿವಮೂರ್ತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ಕೂಡಲೇ ಶಿವಮೂರ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಮೃತಪಟ್ಟಿದ್ದಾನೆ. ನೇರಲಗಿ ಕಾಡಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.