Sagara ಬೆಂಗಳೂರಿಗೆ ಶರಾವತಿ ನೀರು ಯೋಜನೆ; ಹಾಲಪ್ಪ ತೀವ್ರ ವಿರೋಧ


Team Udayavani, Aug 21, 2024, 5:52 PM IST

Sagara ಬೆಂಗಳೂರಿಗೆ ಶರಾವತಿ ನೀರು ಯೋಜನೆ; ಹಾಲಪ್ಪ ತೀವ್ರ ವಿರೋಧ

ಸಾಗರ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ರಾಜ್ಯ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾದದ್ದು. ಈ ಸಂಬಂಧ ನಡೆಸುವ ಪರಿಸರ ಪರವಾದ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗಕ್ಕೆ ನೀರಿಲ್ಲ. ಇರುವ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ನಿರ್ಧಾರಕ್ಕೆ ಯಾವುದೇ ರೀತಿ ಬೆಂಬಲ ನೀಡುವುದಿಲ್ಲ. ಲಿಂಗನಮಕ್ಕಿ ಆಣೆಕಟ್ಟಿನಿಂದ 40 ಟಿಎಂಸಿ ನೀರನ್ನು ಬೆಂಗಳೂರಿಗೆ ಒಯ್ಯಲು ಈಗಾಗಲೇ ಸರ್ವೇಗೆ 73 ಲಕ್ಷ ರೂ. ಮೀಡಲಿಡಲಾಗಿದೆ. ತಕ್ಷಣ ಸರ್ಕಾರ ತನ್ನ ನಿರ್ಧಾರ ಕೈಬಿಡಬೇಕು ಎಂದು ಹೇಳಿದರು.

2019ರಲ್ಲಿ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಸ್ತಾಪ ಮಾಡಲಾಗಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಡಾ. ಜಿ. ಪರಮೇಶ್ವರ್ ಯೋಜನೆ ಕುರಿತು ಆಸಕ್ತಿ ವಹಿಸಿದ್ದರು. ಈ ಸಂದರ್ಭದಲ್ಲಿ ನಾನು ಶಾಸಕನಾಗಿದ್ದೆ. ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ, ಸಾಗರ ಬಂದ್ ಸಹ ನಡೆಸಲಾಗಿತ್ತು. ವಿವಿಧ ಮಠಾಧೀಶರು, ಪರಿಸರವಾದಿಗಳು, ಸಂಘಟನೆಗಳು ಬೆಂಬಲ ನೀಡಿದ್ದರಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಸಾಧ್ಯವಾಗಿತ್ತು.

ನಂತರ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಯೋಜನೆ ಕೈಬಿಡುವಂತೆ ಮಾಡಿಕೊಂಡ ಮನವಿಗೆ ಅವರು ಸ್ಪಂದಿಸಿದ್ದರು. ಇದೀಗ ಮತ್ತೊಮ್ಮೆ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಚಿಂತನೆ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ಇದಕ್ಕೆ ಆಸ್ಪದ ನೀಡುವುದಿಲ್ಲ. ಈ ಸಂಬಂಧ ಯಾವುದೇ ಸಂಘಟನೆ ಹೋರಾಟ ಕೈಗೆತ್ತಿಕೊಂಡರೂ ಅದಕ್ಕೆ ಪಕ್ಷಾತೀತವಾಗಿ ಬೆಂಬಲ ನೀಡಲಾಗುತ್ತದೆ. ಜೊತೆಗೆ ನಮ್ಮ ಹಂತದಲ್ಲಿ ಸಹ ಹೋರಾಟ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದರು.

ಈಗಾಗಲೇ ಎತ್ತಿನಹೊಳೆ ಯೋಜನೆ ವಿಫಲವಾಗಿದೆ. ಸುಮಾರು 22 ಸಾವಿರ ಕೋಟಿ ರೂ. ಖರ್ಚು ಮಾಡಿ ಒಂದು ಹನಿ ನೀರನ್ನು ಹರಿಸಲು ಆಗಲಿಲ್ಲ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ಸಹ ಇಂತಹದ್ದೆ ಆಗಿದೆ. ಸುಮಾರು 35 ಸಾವಿರ ಕೋಟಿ ರೂ. ಯೋಜನೆಗೆ ತಗಲುತ್ತದೆ. ಸಮುದ್ರಮಟ್ಟದಿಂದ 2800 ಅಡಿ ಎತ್ತರಕ್ಕೆ ನೀರು ಹರಿಸಲು ತಗಲುವ ವಿದ್ಯುತ್, ಶ್ರಮ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಜೊತೆಗೆ ಅಪಾರ ಪ್ರಮಾಣದ ಪರಿಸರ, ಅರಣ್ಯನಾಶವಾಗುತ್ತದೆ. ಪೂರ್ವಾಭಿಮುಖವಾಗಿ ನದಿಯನ್ನು ತಿರುಗಿಸುವುದೇ ಕಾನೂನಿಗೆ ವಿರುದ್ಧವಾದದ್ದು. ಐಎಎಸ್ ಅಧಿಕಾರಿ ಕೆಲವರ ಲಾಬಿಯಿಂದ ಯೋಜನೆ ಮುನ್ನೆಲೆಗೆ ಬಂದಿದೆ. ತುಷಾರ್ ಗಿರಿನಾಥ್ ಶಿವಮೊಗ್ಗ ಜಿಲ್ಲೆಯಲ್ಲಿದ್ದು ಇಲ್ಲಿನ ನೀರನ್ನು ಕುಡಿದವರು. ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯುವ ಯೋಜನೆ ಬಗ್ಗೆ ಚಿಂತನೆ ನಡೆಸಬಾರದು ಎಂದು ಹೇಳಿದರು.

ಬೆಂಗಳೂರಿಗೆ ಕುಡಿಯುವ ನೀರು ಪೂರೈಸಲು ಇತರ ಮೂಲ ಹುಡುಕಿಕೊಳ್ಳಿ. ಹಿಂದೆ ರಕ್ತ ಕೊಡುತ್ತೇವೆ, ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಬಿಡುವುದಿಲ್ಲ ಎಂದು ಹೇಳಿದ ಕೆಲವರು ಈಗ ಧ್ವನಿ ಎತ್ತಬೇಕು. ಕಾರ್ಯಸಾಧುವಲ್ಲದ ಯೋಜನೆ ಅನುಷ್ಠಾನದ ಹಿಂದೆ ಕಮೀಷನ್ ಲಾಬಿ ಇದೆ ಎನ್ನುವ ಚರ್ಚೆ ಸಹ ನಡೆಯುತ್ತಿದೆ. ಬೆಂಗಳೂರಿಗೆ ಶರಾವತಿ ನದಿ ನೀರು ಹರಿಸುವುದು ಮತ್ತು ಮತ್ತೊಂದು ಪರಿಸರ ವಿರೋಧಿ ಯೋಜನೆಯಾಗಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯಾವುದೇ ಕಾರಣಕ್ಕೂ ಅನುಷ್ಟಾನಕ್ಕೆ ಬಿಡುವುದಿಲ್ಲ ಎಂದರು.

ಗೋಷ್ಠಿಯಲ್ಲಿ ಡಾ. ರಾಜನಂದಿನಿ, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶಪ್ರಸಾದ್, ಸತೀಶ್ ಕೆ., ಹರೀಶ್ ಮೂಡಳ್ಳಿ, ಸಂತೋಷ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Anandapura: ಕಳೆದ ರಾತ್ರಿ ಆನಂದಪುರ ಪೊಲೀಸ್ ಠಾಣೆ ಎದುರು ಗ್ರಾಮಸ್ಥರ ಧರಣಿ 

Anandapura: ಕಳೆದ ರಾತ್ರಿ ಆನಂದಪುರ ಪೊಲೀಸ್ ಠಾಣೆ ಎದುರು ಗ್ರಾಮಸ್ಥರ ಧರಣಿ 

Mandya case: ಮೆರವಣಿಗೆ ವೇಳೆ ಪಾಕಿಸ್ತಾನ ಮನಸ್ಥಿತಿಯವವರು ಕಿಡಿ ಹಚ್ಚಿದ್ದಾರೆ: ಈಶ್ವರಪ್ಪ

Mandya case: ಮೆರವಣಿಗೆ ವೇಳೆ ಪಾಕಿಸ್ತಾನ ಮನಸ್ಥಿತಿಯವವರು ಕಿಡಿ ಹಚ್ಚಿದ್ದಾರೆ: ಈಶ್ವರಪ್ಪ

Sagara ಶಾಸಕ ಬೇಳೂರು ಮನವಿಗೆ ತೋಟಗಾರಿಕಾ ಸಚಿವರ ಸ್ಪಂದನೆ

Sagara ಶಾಸಕ ಬೇಳೂರು ಮನವಿಗೆ ತೋಟಗಾರಿಕಾ ಸಚಿವರ ಸ್ಪಂದನೆ

Sagara ಇನ್ನು ಮೂರು ತಿಂಗಳಲ್ಲಿ ತುಮರಿ ಸೇತುವೆ ಲೋಕಾರ್ಪಣೆ; ಬಿವೈಆರ್ ಭರವಸೆ

Sagara ಇನ್ನು ಮೂರು ತಿಂಗಳಲ್ಲಿ ತುಮರಿ ಸೇತುವೆ ಲೋಕಾರ್ಪಣೆ; ಬಿವೈಆರ್ ಭರವಸೆ

Eshwarappa ಏನೂ ಗೊತ್ತಿಲ್ಲದ ಸಿದ್ದು ಪತ್ನಿ ಹೆಸರು ಥಳಕು ಹಾಕಿಕೊಂಡಿದ್ದಕ್ಕೆ ನೋವಾಗಿದೆ

Eshwarappa ಏನೂ ಗೊತ್ತಿಲ್ಲದ ಸಿದ್ದು ಪತ್ನಿ ಹೆಸರು ಥಳಕು ಹಾಕಿಕೊಂಡಿದ್ದಕ್ಕೆ ನೋವಾಗಿದೆ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.