11ರಿಂದ ಅಡಕೆ ವಹಿವಾಟಿಗೆ ಅವಕಾಶ


Team Udayavani, May 6, 2020, 6:28 PM IST

5-May-32

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಅಡಕೆ ಬೆಳೆಗಾರರ ಹಿತ ಮನಗಂಡು ಮೇ 11ರಿಂದ ಅಡಕೆ ವಹಿವಾಟಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ರಾಜ್ಯ ಅಡಕೆ ಟಾಸ್ಕ್ಫೋರ್ಸ್‌ ಕಮಿಟಿಯ ಅಧ್ಯಕ್ಷರೂ ಆದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮ್ಯಾಮ್‌ಕೋಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ಮಾರುಕಟ್ಟೆಯನ್ನು ಈಗಾಗಲೇ ಶಿರಸಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ತರೆಯಲಾಗಿದೆ. ಅದೇ ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಮಾರುಕಟ್ಟೆ ತೆರೆಯಲಾಗುವುದು ಎಂದು ಪ್ರಕಟಿಸಿದರು.

ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಎಸ್‌. ಆರ್‌.ಸತೀಶ್ಚಂದ್ರ ಹಾಗೂ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರಾದ ಯಡಗೆರೆ ಸುಬ್ರಹ್ಮಣ್ಯ, ಆರ್‌.ಎಂ. ರವಿ, ಅಡಕೆ ವರ್ತಕರ ಸಂಘದ ಅಧ್ಯಕ್ಷ ಡಿ.ಎಂ. ಶಂಕರಪ್ಪ, ಅಡಕೆ ಸಹಕಾರ ಮಹಾಮಂಡಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗಿದೆ. ಹೀಗಾಗಿ, ಅಡಕೆ ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಧೈರ್ಯ ಹೇಳಿದರು.

ಕೋವಿಡ್ ವೈರಸ್‌ ಹರಡುವುದನ್ನು ತಡೆಯುವ ಉದ್ದೇಶದಿಂದ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಲಾಗಿದೆ. ಹೀಗಾಗಿ, ಉತ್ತರ ಭಾರತದಲ್ಲಿರುವ ಪಾನ್‌ಮಸಾಲಾ ಕಾರ್ಖಾನೆಗಳು ಸ್ಥಗಿತಗೊಂಡಿವೆ. ಆದ್ದರಿಂದ, ಅಡಕೆ ರಫ್ತು ಸಾಧ್ಯವಾಗಿಲ್ಲ. ಕಾರ್ಮಿಕರೂ ಲಭ್ಯವಿಲ್ಲದ ಕಾರಣದಿಂದಾಗಿ ಅಡಕೆ ವಹಿವಾಟು ಸ್ಥಗಿತಗೊಂಡಿತ್ತು. ಆದರೀಗ, ಉತ್ತರ ಭಾರತದ ಕಾರ್ಖಾನೆಗಳೊಂದಿಗೂ ಮಾತನಾಡಿದ್ದು ಅವುಗಳನ್ನು ಬರುವ ದಿನಗಳಲ್ಲಿ ತೆರೆಯಲಾಗುತ್ತಿದೆ ಎಂದರು.

ಧಾರಣೆ ಕುಸಿಯದು- ಭೀತಿ ಬೇಡ: ಕೋವಿಡ್  ‌-19ನಿಂದಾಗಿ ವಹಿವಾಟೇ ನಿಂತಿದ್ದು, ಅಡಕೆ ಧಾರಣೆ ಕುಸಿಯಬಹುದೆಂಬ ಭೀತಿಯಲ್ಲಿ ರೈತರಿದ್ದಾರೆ. ಆದರೆ, ಯಾರೂ ಭಯ ಪಡುವ ಅಗತ್ಯವಿಲ್ಲ. ಅಡಕೆಯ ಧಾರಣೆ ಕುಸಿಯಲು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಭೀತಿಗೆ ಒಳಗಾಗಿ ರೈತರು ಮಧ್ಯವರ್ತಿಗಳಿಗೆ ಕಡಿಮೆ ದರಕ್ಕೆ ಮಾರಾಟ ಮಾಡಬಾರದು ಎಂದು ಜ್ಞಾನೇಂದ್ರ ಮನವಿ ಮಾಡಿದರು.

ಈ ವೇಳೆ ಅಡಕೆ ಬೆಳೆಗಾರರು, ವರ್ತಕರು ಸಂಯಮದಿಂದ ವರ್ತಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರ ವಿಧಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಮೇ 11ರಿಂದ ಮ್ಯಾಮ್‌ಕೋಸ್‌ ವ್ಯಾಪ್ತಿಯ ಎಲ್ಲ ಶಾಖೆ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಭದ್ರಾವತಿ, ಚನ್ನಗಿರಿ ಸೇರಿ ಎಲ್ಲ ಎಪಿಎಂಸಿಗಳಲ್ಲೂ ವ್ಯಾಪಾರ, ವಹಿವಾಟು ಆರಂಭವಾಗಲಿದೆ ಎಂದರು. ಅಡಕೆ ಮಹಾಮಂಡಳದ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ತುಮ್‌ಕೋಸ್‌ ಅಧ್ಯಕ್ಷ ಆರ್‌.ಎಂ.ರವಿ, ಮ್ಯಾಮ್ಕೋಸ್‌ ಉಪಾಧ್ಯಕ್ಷ ಯಡಗೆರೆ ಸುಬ್ರಹ್ಮಣ್ಯ, ಅಡಕೆ ವರ್ತಕರ ಸಂಘದ ಅಧ್ಯಕ್ಷ ಡಿ.ಎಂ. ಶಂಕರಪ್ಪ, ರಾಘವೇಂದ್ರ,ಕೆ.ಜಿ. ಜಯರಾಂ ಇತರರಿದ್ದರು.

ಮೇ 11ರಿಂದ ಅಡಕೆ ವಹಿವಾಟು ನಡೆಯಲಿದ್ದು ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಈಗಾಗಲೇ ಶಿರಸಿ, ಉತ್ತರ ಕನ್ನಡ, ದಕ್ಷಿಣ  ಕನ್ನಡ, ಉಡುಪಿಯಲ್ಲಿ ವಹಿವಾಟು ಆರಂಭವಾಗಿದೆ. ಕೋಕೋಗೂ ಉತ್ತಮ ಬೆಲೆ ಇದೆ. ಧಾರಣೆ ಕುಸಿಯಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.
ಎಸ್‌.ಆರ್‌. ಸತೀಶ್ಚಂದ್ರ,
ಅಧ್ಯಕ್ಷ, ಕ್ಯಾಂಪ್ಕೊ ಸಂಸ್ಥೆ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.