![12](https://www.udayavani.com/wp-content/uploads/2024/07/12-5-415x249.jpg)
Shimoga; ಬಂದ್ ಆಗದ ತಳಭಾಗದ ಗೇಟ್: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು
ಅಚ್ಚುಕಟ್ಟು ಪ್ರದೇಶದ ರೈತರ ಆಕ್ರೋಶ
Team Udayavani, Jul 5, 2024, 2:49 PM IST
![Shimoga; ಬಂದ್ ಆಗದ ತಳಭಾಗದ ಗೇಟ್: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು](https://www.udayavani.com/wp-content/uploads/2024/07/bhadra-620x342.jpg)
ಶಿವಮೊಗ್ಗ: ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿದ್ದ ರೈತರು ಕಂಗಾಲಾಗಿದ್ದಾರೆ. ಮಳೆಗಾಲಕ್ಕೂ ಮುನ್ನ ವಾರ್ಷಿಕ ನಿರ್ವಹಣೆ ಮಾಡಿಲ್ಲವೇ ಎಂಬ ಅನುಮಾನ ಕಾಡುತ್ತಿದೆ.
ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ಉತ್ತಮ ನೀರು ಬರುತ್ತಿದೆ. ಆದರೆ ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಮೂರ್ನಾಲ್ಕು ದಿನಗಳಿಂದ ಸಾವಿರಾರು ಕ್ಯೂಸೆಕ್ ನೀರು ಹೊರ ಹೋಗುತ್ತಿದೆ. ಮೂರು ದಿನಗಳಿಂದ 15 ಸಾವಿರ ಕ್ಯೂಸೆಕ್ಸ್ಗೂ ಅಧಿಕ ನೀರು ಬರುತ್ತಿದ್ದು ಬಹಳಷ್ಟು ನೀರು ವ್ಯರ್ಥವಾಗುತ್ತಿದೆ.
ಪ್ರಸ್ತುತ ಜಲಾಶಯದಲ್ಲಿ 129.6 ಅಡಿ ನೀರಿದ್ದು 16171 ಕ್ಯೂಸೆಕ್ಸ್ ಒಳಹರಿವು ಇದೆ. ಕಳೆದ ವರ್ಷ ಇದೆ ದಿನ 137.2 ಅಡಿ ನೀರಿತ್ತು. ಕಳೆದ ವರ್ಷ ಮುಂಗಾರು ವಿಫಲವಾದ ಕಾರಣ ಬೇಸಿಗೆ ಬೆಳೆಗೆ ಪಾಳಿ ಪದ್ಧತಿಯಲ್ಲಿ ನೀರು ಕೊಡಲಾಗಿತ್ತು. ಜೂನ್ನಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಜುಲೈ ಆರಂಭ ಆಶಾದಾಯಕವಾಗಿದ್ದರೂ ಮುಂದೆ ಇದೇ ರೀತಿ ಮಳೆ ಬರುತ್ತದೆ ಎಂಬ ಭರವಸೆ ಇಲ್ಲ. ಇದ್ದ ನೀರನ್ನು ಉಳಿಸಿಕೊಳ್ಳುವ ಸಮಯದಲ್ಲಿ ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಎಡವಟ್ಟು ಮಾಡಿಕೊಂಡಿದೆ.
ಮುಂಗಾರು ಬೆಳೆಗೆ ಭದ್ರಾ ಜಲಾಶಯದಿಂದ ಯಾವಾಗ ನೀರು ಬಿಡಬಹುದು ಎಂಬ ಲೆಕ್ಕ ಹಾಕುತ್ತಿದ್ದ ರೈತರು ಜಲಾಶಯದಿಂದ ನೀರು ಪೋಲಾಗುತ್ತಿರುವುದು ಕಂಡು ಶಾಕ್ ಆಗಿದ್ದಾರೆ.
ಟಾಪ್ ನ್ಯೂಸ್
![12](https://www.udayavani.com/wp-content/uploads/2024/07/12-5-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ](https://www.udayavani.com/wp-content/uploads/2024/07/Baba01-150x105.jpg)
Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ
![12](https://www.udayavani.com/wp-content/uploads/2024/07/12-5-150x90.jpg)
Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್ ಬಾಸ್ ಮನೆಯಲ್ಲಿ ಹೈಡ್ರಾಮಾ
![Ronny](https://www.udayavani.com/wp-content/uploads/2024/07/Ronny-150x83.jpg)
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
![Why did he ignore the BCCI instruction to play Ranji? Ishaan replied](https://www.udayavani.com/wp-content/uploads/2024/07/ishan-150x83.jpg)
IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.