Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
Team Udayavani, Sep 29, 2024, 12:55 PM IST
ಶಿವಮೊಗ್ಗ: ಮಲೆನಾಡಿನಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಮುಂದುವರೆದಿದೆ. ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ಬಾಳೆ ತೋಟ ಹಾಗೂ ಅಡಿಕೆ ತೋಟ ನಾಶವಾಗಿದ್ದು, ರೈತರು ಸಂಕಷ್ಟ ಪಡುವಂತಾಗಿದೆ.
ಶನಿವಾರ ತಡರಾತ್ರಿ ಪುರದಾಳು ಗ್ರಾಮದ ಬೇಳೂರುನಲ್ಲಿ ಮೂರು ಕಾಡಾನೆಗಳು ನಾಗರಾಜ್ ಎಂ.ಡಿ ಹಾಗೂ ಕನ್ನಪ್ಪ ಎಂಬುವವರ ತೋಟದ ಮೇಲೆ ದಾಳಿ ನಡೆಸಿವೆ. ತೋಟಕ್ಕೆ ಲಗ್ಗೆ ಇಟ್ಟ ಆನೆಗಳು ಬೆಳೆ ನಾಶ ಮಾಡಿವೆ.
ಕಾಡಾನೆ ಹಾವಳಿಯನ್ನು ತಪ್ಪಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ದಿನಗಳ ಹಿಂದೆಯಷ್ಟೇ ಇದೇ ರೀತಿ ದಾಳಿ ನಡೆಸಿ ಬೆಳೆ ಹಾನಿಗೆ ಕಾಡಾನೆಗಳು ಕಾರಣವಾಗಿದ್ದವು. ಕೂಡಲೇ ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಪುರುದಾಳು ಗ್ರಾಮಕ್ಕೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಇದೀಗ ಮತ್ತೆ ದಾಂಧಲೆ ಉಂಟು ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.