ಅವಧಿ ಮುಗಿದ ಲೈಸೆನ್ಸ್ ನೀಡಿದ ಶಿವಮೊಗ್ಗ ಪಾಲಿಕೆಗೆ ಗ್ರಾಹಕರ ವೇದಿಕೆ ಚಾಟಿ


Team Udayavani, Oct 15, 2020, 1:34 PM IST

ಅವಧಿ ಮುಗಿದ ಲೈಸೆನ್ಸ್ ನೀಡಿದ ಶಿವಮೊಗ್ಗ ಪಾಲಿಕೆಗೆ ಗ್ರಾಹಕರ ವೇದಿಕೆ ಚಾಟಿ

ಶಿವಮೊಗ್ಗ: ಸಕಾಲದಲ್ಲಿ ಉದ್ಯಮ ಪರವಾನಗಿ ನೀಡದೆ ವಿಳಂಬ ಮಾಡಿದ್ದಕ್ಕೆ ಮಹಾನಗರ ಪಾಲಿಕೆ ಆಯುಕ್ತರಿಗೆ ಗ್ರಾಹಕರ ವೇದಿಕೆಯು ದಂಡ ವಿಧಿಸಿ ತೀರ್ಪು ನೀಡಿದೆ.

ವುಡ್ ಇಂಡಸ್ಟಿಗೋಸ್ಕರ ಎಸ್.ಎನ್. ಫಜಲುದ್ದೀನ್ ಎಂಬುವವರು 2018ರ ಜನವರಿ 11ರಂದು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕಡತ ಕಳೆದಿರುವುದಾಗಿ ಹೇಳಿದ್ದಕ್ಕೆ 2018ರ ಮೇ 25ರಂದು ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಪರವಾನಗಿಗಾಗಿ 5 ಸಾವಿರ ರೂ. ಚಲನ್ ಕೂಡ ಪಾವತಿಸಿದ್ದಾರೆ.

ಸಕಾಲ ಕಾಯಿದೆಯಡಿ ಫೆ.21ರೊಳಗೆ ಉದ್ಯಮ ಪರವಾನಗಿಯನ್ನು ನೀಡಬೇಕಿತ್ತು. ಆದರೆ, 2019ರ ಏಪ್ರಿಲ್ 3ರಂದು ಲೈಸೆನ್ಸ್ ನೀಡಿದ್ದು, ಅದರ ಅವಧಿ 2018ರ ಏಪ್ರಿಲ್ 1 ರಿಂದ 2019ರ ಮಾರ್ಚ್ 31ವರೆಗೆ ಇತ್ತು. ಅವಧಿ ಪೂರ್ಣಗೊಂಡ ಬಳಿಕ ಲೈಸೆನ್ಸ್ ನೀಡಿದ್ದು ಅದರಿಂದ ಫಜಲುದ್ದೀನ್ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಹಲವು ಸಲ ವಿಚಾರಿಸಿದ್ದು, ಮುಕ್ತಾಯಗೊಂಡ ಪರವಾನಗಿ ನೀಡಿರುವುದು ಸರಿಯಲ್ಲ; ಚಾಲ್ತಿ ಅವಧಿಯದ್ದು ನೀಡುವಂತೆ ಕೋರಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ತಮಗಾದ ಸೇವಾ ನ್ಯೂನ್ಯತೆಯಿಂದಾಗಿ ಅವರು ಗ್ರಾಹಕರ ಸಂರಕ್ಷಣಾ ಕಾಯಿದೆ 1986 ಕಲಂ 12 ಅಡಿಯಲ್ಲಿ ದೂರು ನೀಡಿದ್ದರು.

ಇದನ್ನೂ ಓದಿ:ಮತ್ತೆ ಕುಸಿದ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಸೇತುವೆ: ಶಿವಮೊಗ್ಗ- ಉಡುಪಿ ಸಂಚಾರ ಸ್ಥಗಿತ

ವಿಚಾರಣೆ ನಡೆಸಿದ ವೇದಿಕೆಯು ಪಾಲಿಕೆ ಆಯುಕ್ತರಿಗೆ ನೋಟೀಸ್ ಚಾರಿ ಮಾಡಿತ್ತು. ವಿಚಾರಣೆ ವೇಳೆ, `ಪರವಾನಗಿ ನೀಡಲು ಕೆಎಂಸಿ ಅನ್ವಯ ಅನೇಕ ವಿಧಾನಗಳನ್ನು ಅನುಸರಿಸಬೇಕಾಗಿರುವುದರಿಂದ ವಿಳಂಬವಾಗಿರುವುದಾಗಿ’ ಸಬೂಬು ನೀಡಿದ್ದಾರೆ. ಆದರೆ, ಅವಧಿ ಮುಕ್ತಾಯಗೊಂಡ ಲೈಸೆನ್ಸ್ ನೀಡಿದ್ದು ಸರಿಯಲ್ಲ. ಇದರಿಂದ ಸೇವಾ ನ್ಯೂನ್ಯತೆ ಆಗಿದೆ ಎಂದು ಪರಿಗಣಿಸಿ, ದೂರುದಾರರಿಗೆ 5,100 ರೂಪಾಯಿಯನ್ನು ದೂರು ದಾಖಲಾದ ದಿನಾಂಕದಿಂದ ಶೇ.9ರ ಬಡ್ಡಿ ಸಮೇತ ಮರುಪಾವತಿ ಮಾಡಬೇಕು. ಜತೆಗೆ, ಮಾನಸಿಕ ಒತ್ತಡ, ಸೇವಾನ್ಯೂನ್ಯತೆ ಪರಿಹಾರ ಹಾಗೂ ತಕರಾರು ವೆಚ್ಚಕ್ಕಾಗಿ 20 ಸಾವಿರ ರೂ.ಗಳನ್ನು ಕೊಡುವಂತೆ ವೇದಿಕೆಯ ಅಧ್ಯಕ್ಷರಾದ ಸಿ.ಎಂ. ಚಂಚಲ, ಸದಸ್ಯೆ ಸವಿತಾ ಬಿ. ಪಟ್ಟಣಶೆಟ್ಟಿ ಅವರ ಪೀಠ ಸೂಚನೆ ನೀಡಿದೆ. ತಪ್ಪಿದ್ದಲ್ಲಿ ಶೇ.10ರಷ್ಟು ಹೆಚ್ಚಿನ ಬಡ್ಡಿಯನ್ನು ನೀಡುವಂತೆ ತಿಳಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.