![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 3, 2024, 2:49 PM IST
ಶಿವಮೊಗ್ಗ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್ ಗೆ ನುಗ್ಗಿದೆ.
ಶಿವಮೊಗ್ಗದಿಂದ ದಾವಣಗೆರೆಯಿಂದ ತೆರಳುತ್ತಿದ್ದ ಕಾರು ಹನಸವಾಡಿ ಬಳಿ ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದು, ಪಕ್ಕದ ಹೊಟೇಲ್ಗೆ ನುಗ್ಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುಳಮ್ಮ ಅವರನ್ನು ಕೂಡಲೆ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಎರಡು ಬೈಕುಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹೊಟೇಲ್ಗೆ ನುಗ್ಗಿದ್ದು ಅದೃಷ್ಟವಶಾತ್ ಯಾರಿಗೂ ಸಮಸ್ಯೆಯಾಗಿಲ್ಲ. ಕಾರಿನಲ್ಲಿದ್ದ ಐವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.