Shimoga; ನೀರಿನ ತೊಟ್ಟಿಗೆ ಬಿದ್ದ ಹಸುವಿನ ರಕ್ಷಣೆ
Team Udayavani, Sep 3, 2024, 7:53 PM IST
ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ.
ಹೊಳೆಗಂಗೂರು ಗ್ರಾಮದಲ್ಲಿ ಹೊಸದಾಗಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೂಲಕ ಹೊರಟಿದೆ. ಅಡಕೆ ದೆಬ್ಬೆ ಮೇಲೆ ಕಾಲಿಟ್ಟ ಪರಿಣಾಮ ಏಕಾಏಕಿ ಗುಂಡಿಗೆ ಬಿದ್ದಿದೆ.
ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ತಕ್ಷಣ ಕಾರ್ಯ ಪ್ರವೃತ್ತರಾದ ಸಿಬ್ಬಂದಿ ಹಸುವಿಗೆ ಬೆಲ್ಟ್ ಕಟ್ಟಿ ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಹಸುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆರೋಗ್ಯದಿಂದಿದೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಎಸ್ಎಸ್ಒ ಹುಲಿಯಪ್ಪ, ಸಿಬ್ಬಂದಿ ಅಶೋಕ್ ಕುಮಾರ್, ಶೇಖರ್, ಸುರೇಶ್, ರಾಜ ನಾಯಕ್ ಸೇರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್
Udupi ಶಾಸಕರ ವಿರುದ್ಧ ಕೇಸ್ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ
Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!
Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.