Shivamogga: ಪಿಡಬ್ಲ್ಯೂಡಿ ಕ್ವಾಟ್ರರ್ಸ್ನಲ್ಲಿ ಸರಣಿ ಮನೆಗಳ್ಳತನ
Team Udayavani, Sep 8, 2024, 8:54 PM IST
ಶಿವಮೊಗ್ಗ: ಹಬ್ಬ ಎಂದು ಊರು, ಕೆಲಸದ ನಿಮಿತ್ತ ಹೊರಹೋಗಿದ್ದ ವೇಳೆ ಕಳ್ಳರು ಸರಕಾರಿ ನೌಕರರ ಮನೆಗಳಿಗೆ ನುಗ್ಗಿ ಸರಣಿ ಕಳ್ಳತನ ನಡೆಸಿರುವ ಘಟನೆ ನಗರದ ಲೋಕೋಪಯೋಗಿ ಇಲಾಖೆ ಕ್ವಾಟ್ರಸ್ನಲ್ಲಿ ನಡೆದಿದೆ.
ಬಸವನಗುಡಿಯ ಬಡಾವಣೆಯಲ್ಲಿನ ಪಿಡ್ಲ್ಯೂಡಿ ಕ್ವಾಟ್ರಸ್ನಲ್ಲಿನ ಐದು ಮನೆಯಲ್ಲಿ ಕಳವು ಪ್ರಕರಣ ನಡೆದಿದ್ದು ಇನ್ನೆರಡು ಮನೆಗಳಲ್ಲಿ ಕಳವು ಯತ್ನ ನಡೆಸಲಾಗಿದೆ.
ಜಿಲ್ಲಾಧಿಕಾರಿ ಪಿಎ ದೀಪಕ್, ನ್ಯಾಯಾಧಿಧೀಶರ ವಾಹನ ಚಾಲಕ ಪ್ರಕಾಶ್, ವಾರ್ತಾ ಇಲಾಖೆ ಅಧಿಕಾರಿ ಭಾಗ್ಯ, ಡಿಸಿ ಕಚೇರಿಯಲ್ಲಿ ಎಸ್ಡಿಎ ಆಗಿದ್ದ ಸಂಧ್ಯಾ, ಕಮರ್ಷಿಯಲ್ ಟ್ಯಾಕ್ಸ್ ಕಚೇರಿ ಸ್ಟೆನೋ ನಂದಿನಿ ಸೇರಿದಂತೆ 5 ಜನರ ಮನೆಯಲ್ಲಿ ಕಳುವಾಗಿದೆ.
ಬೆಳಗಿನ ಜಾವ ಮೂರು ಗಂಟೆಯ ವೇಳೆಗೆ ಘಟನೆ ನಡೆದಿದ್ದು ಎರಡು ಲಕ್ಷಕ್ಕೂ ಹೆಚ್ಚು ನಗದು, 300 ಗ್ರಾಂ. ಚಿನ್ನಾಭರಣ ಕಳ್ಳತನವಾಗಿದೆ. ಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಕಳ್ಳರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.