ಕೋವಿಡ್-19 ಕರ್ತವ್ಯ ಲೋಪ: ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಮಾನತು
Team Udayavani, Mar 31, 2020, 3:47 PM IST
ಶಿವಮೊಗ್ಗ: ಕೋವಿಡ್-19 ವೈರಸ್ ನಿಯಂತ್ರಿಸುವ ಸಲುವಾಗಿ ಇಡೀ ದೇಶಾದ್ಯಂತ ವಿವಿಧ ಇಲಾಖೆ ಅಧಿಕಾರಿಗಳು ಶ್ರಮವಹಿಸಿ ದುಡಿಯುತ್ತಿದ್ದು ಶಿರಾಳಕೊಪ್ಪ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹನುಮಂತಪ್ಪ ಕರ್ತವ್ಯ ಲೋಪ ಮಾಡಿದ್ದು, ಹೀಗಾಗಿ ಜಿಲ್ಲಾಧಿಕಾರಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಇರದೇ ತಮ್ಮ ನಿವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ಲೋಪದ ಕುರಿತು ಸಾರ್ವಜನಿಕರು ಮತ್ತು ಪತ್ರಕರ್ತರಿಂದ ಸಾಕಷ್ಟು ದೂರು ಬಂದಿದ್ದು ಕರ್ತವ್ಯ ಲೋಪ ಮಾಡಿರುವ ಹನುಮಂತಪ್ಪ ವೈ ಮಣ್ಣವಡರ್ ಇವರನ್ನು ತಕ್ಷಣವೇ ಜಾರಿ ಬರುವಂತೆ ಅಮಾನತು ಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇವರ ಸ್ಥಾನಕ್ಕೆ ಹೇಮಂತ್ ಡೊಳ್ಳೆ ಅವರನ್ನು ಶಿರಾಳಕೊಪ್ಪ ಪಂಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.