ಕೋವಿಡ್‌ ಲಕ್ಷಣ ಬಂದರೆ ತಪಾಸಣೆಗೊಳಗಾಗಿ


Team Udayavani, May 2, 2021, 7:14 PM IST

25-17

ತೀರ್ಥಹಳ್ಳಿ: ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಸಮರ್ಥವಾಗಿ ಕೋವಿಡ್‌ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಲಕ್ಷಣ ಕಂಡು ಬಂದರೆ ಗುಟ್ಟಾಗಿಡದೆ ಮನೆಯಲ್ಲಿಯೇ ಔಷಧಗಳನ್ನು ತೆಗೆದುಕೊಳ್ಳದೇ ಪರೀಕ್ಷೆಗೊಳಗಾಗಿ ಎಂದು ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷರೂ ಆದ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಾಂಕ್ರಾಮಿಕ ರೋಗ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾನು ಮತ್ತು ತಹಶೀಲ್ದಾರ್‌ ಡಾ| ಶ್ರೀಪಾದ್‌ ಅವರ ನೇತೃತ್ವದ ತಂಡ ಕೊರೊನಾ ನಿಯಂತ್ರಣಕ್ಕೆ ವಿಶೇಷವಾಗಿ ಒಂದು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಜೆಸಿ ಆಸ್ಪತ್ರೆಯಲ್ಲಿ ಐವತ್ತು ಹಾಸಿಗೆಯನ್ನು ಕೊರೊನಾ ಸೋಂಕಿತರಿಗೆ ಮೀಸಲಿಟ್ಟಿದ್ದೇವೆ. ಅನೇಕ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರಿಗೆ ಆಸ್ಪತ್ರೆಯ ಊಟ ಕೊಡದೆ ಉತ್ತಮ ಊಟವನ್ನು ಕೊಟ್ಟು ವಿಶೇಷವಾದ ಆಹಾರದ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಐವತ್ತು ಬೆಡ್‌ಗಳಿಗೆ ಆಮ್ಲಜನಕದ ಸಂಪರ್ಕ ಮಾಡಲಾಗಿದೆ. ಸುಮಾರು ಹದಿನೆಂಟು ಜಂಬೋ ಸಿಲಿಂಡರ್‌ ಗಳಿವೆ. ಹನ್ನೆರಡು ಮಿನಿ ಸಿಲಿಂಡರ್‌ ಗಳಿವೆ. ಸದ್ಯಕ್ಕೆ ಆಮ್ಲಜನಕದ ತೊಂದರೆ ಇಲ್ಲ. ತಾಲೂಕಿನಲ್ಲಿ ವ್ಯಾಪಕ ಕೊರೊನಾ ಸೋಂಕು ಉಲ್ಬಣಿಸುತ್ತಿರುವುದನ್ನು ಗಮನಿಸಿ ದೇವಂಗಿ ಸಮೀಪದ ವಾಟಗಾರಿನ ಮೊರಾರ್ಜಿ ಶಾಲೆಯನ್ನು ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತನೆ ಮಾಡಲಾಗಿದೆ. ಇಲ್ಲಿ 500 ಹಾಸಿಗೆಯ ವ್ಯವಸ್ಥೆ ಈಗಾಗಲೇ ಇದೆ. ಸದ್ಯಕ್ಕೆ ನೂರು ಬೆಡ್‌ಗಳ ಕೆಪಾಸಿಟಿಯ ಕೊವಿಡ್‌ ಸೆಂಟರ್‌ ಅನ್ನು ಮಾಡುತ್ತಿದ್ದೇವೆ ಎಂದರು.

ಪತ್ರಕರ್ತರಾದ ಡಾನ್‌ ರಾಮಣ್ಣ ಮಾತನಾಡಿ, ನಾವು ತಾಲೂಕಿನಲ್ಲಿ ಕೊರೊನಾ ಫಂಡ್‌ ಮಾಡಿ ಇದಕ್ಕೆ ಕೆಲವು ದಾನಿಗಳಿಂದ ಹೆಚ್ಚಿನ ಹಣವನ್ನು ತೆಗೆದುಕೊಂಡು ಆಮ್ಲಜನಕದ ಪ್ಲಾಂಟ್‌ ನ್ನು ತೀರ್ಥಹಳ್ಳಿಯಲ್ಲಿಯೇ ಮಾಡಿದಲ್ಲಿ ಇದರಿಂದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಹಣ ಕಲೆಕ್ಷನ್‌ ಮಾಡಲು ತೀರ್ಥಹಳ್ಳಿಯಲ್ಲಿ ಕೊರತೆಯಿಲ್ಲ. ಒಂದು ಕ್ರಿಕೆಟ್‌ ಟೂರ್ನಮೆಂಟ್‌ ಆದರೆ ಜನ ಅದಕ್ಕೆ ಹತ್ತರಿಂದ ಇಪ್ಪತ್ತು ಸಾವಿರ ಹಣ ನೀಡುತ್ತಾರೆ. ಹಾಗಿದ್ದಲ್ಲಿ ಕೊರೊನಾ ಫಂಡಿಗೆ ಹಣ ಕೊಡದೇ ಇರುವುದಿಲ್ಲ. ಇದಕ್ಕೆ ಒಂದು ವ್ಯವಸ್ಥಿತ ಸಮಿತಿಯನ್ನು ರಚನೆ ಮಾಡಿ ಕಾರ್ಯರೂಪಕ್ಕೆ ತರಬಹುದು. ಈ ಕೋರೊನ ಫಂಡ್‌ಗೆ ನಾನು 10000 ರೂಪಾಯಿಗಳನ್ನು ಇಂದೇ ಕೊಡುತ್ತೇನೆ ಎಂದು ತಿಳಿಸಿದರು.

ಇದಕ್ಕೆ ಶಾಸಕರು ಡಾನ್‌ ರಾಮಣ್ಣರವರಿಗೆ ಅಭಿನಂದನೆ ತಿಳಿಸಿ ತಜ್ಞರಲ್ಲಿ ಮಾಹಿತಿ ಪಡೆದು ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿ ತಕ್ಷಣ ಕಾರ್ಯರೂಪಕ್ಕೆ ತರೋಣ ಎಂದು ತಿಳಿಸಿದರು. ತಹಶೀಲ್ದಾರ್‌ ಡಾ| ಶ್ರೀಪಾದ್‌, ಡಾ| ಅನಿಕೇತನ್‌ ಇದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.