ಖಾಸಗಿ ವೈದ್ಯರಿಂದ ತಪಾಸಣೆಗೆ ಅನುಮತಿ ನೀಡಲು ಆಗ್ರಹ
Team Udayavani, May 18, 2021, 9:54 PM IST
ಸಾಗರ: ತಾಲೂಕಿನ ತ್ಯಾಗರ್ತಿಯ ಖಾಸಗಿ ಕ್ಲಿನಿಕ್ ಅನ್ನು ಬಂದ್ ಮಾಡುವಂತೆ ಎರಡು ದಿನಗಳ ಹಿಂದೆ ಸಾರ್ವಜನಿಕರು ಹಾಗೂ ಕೆಲವು ಪ್ರಮುಖರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕ್ಲಿನಿಕ್ ಕಾರ್ಯ ಚಟುವಟಿಕೆ ನಿಲ್ಲಿಸಿದೆ.
ಆದರೆ ಸೋಮವಾರ ತ್ಯಾಗರ್ತಿಯಲ್ಲಿ ಕೆಲವು ಮುಖಂಡರ ಮತ್ತೂಂದು ಗುಂಪು ಮತ್ತು ಹಲವು ಸಾರ್ವಜನಿಕರು ಖಾಸಗಿ ಕ್ಲಿನಿಕ್ ವೈದ್ಯರಿಗೆ ಅವಕಾಶ ನೀಡಬೇಕೆಂದು ಪ್ರತಿಪಾದಿಸಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಯಮ ಪಾಲಿಸದೆ ರೋಗಿಗಳನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ ಮಾರಿಕಾಂಬಾ ದೇವಾಲಯದ ಪಕ್ಕದ ರಸ್ತೆಯ ಜನರು ಶನಿವಾರ ಖಾಸಗಿ ಕ್ಲಿನಿಕ್ ಎದುರು ಧರಣಿ ನಡೆಸಿ ಕ್ಲಿನಿಕ್ ನಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಯಾವುದೇ ಮುನ್ನೆಚ್ಚರಿಕೆ ವಹಿಸುತ್ತಿಲ್ಲ ಎಂದು ಆಗ್ರಹಿಸಿದ್ದರಿಂದ ಖಾಸಗಿ ವೈದ್ಯರು ಕ್ಲಿನಿಕ್ನ ಬಾಗಿಲು ಮುಚ್ಚಿದ್ದರು.
ಇವರಿಂದ ಚಿಕಿತ್ಸೆ ಪಡೆದ ಜನರು ಕೋವಿಡ್ ಸಂದರ್ಭದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ಇರುವ ವೈದ್ಯರನ್ನು ಕೆಲವರು ಸ್ವಹಿತಾಸಕ್ತಿಗಾಗಿ ಏಕಾಏಕಿ ಬಂದ್ ಮಾಡಿಸಿದರೆ ಬಡವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ಪಾಂಡುರಂಗ, ಯೋಗೀಶ್ ಹುತ್ತಾದಿಂಬ, ಕೃಷ್ಣಮೂರ್ತಿ, ವೆಂಕಟರಮಣ, ರವಿ, ಪರಶುರಾಮ್ ಮತ್ತಿತರರು ಇದ್ದರು. ಇಲ್ಲಿನ ಖಾಸಗಿ ವೈದ್ಯರಿಗೆ ಬಾಗಿಲು ಮುಚ್ಚಲು ಯಾರೂ ಹೇಳಿಲ್ಲ. ಕೊರೊನಾ ನಿಯಮಾವಳಿ ಪಾಲಿಸಿ ರೋಗಿಗಳ ತಪಾಸಣೆ ನಡೆಸಿ ಎಂದು ಸೂಚಿಸಲಾಗಿದೆ. ನಾಳೆಯಿಂದ ಪರಸ್ಪರ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರೂ ಸ್ಯಾನಿಟೈಸರ್ ಬಳಸಿ ಯಾರಿಗೂ ತೊಂದರೆಯಾಗದಂತೆ ಶುಶ್ರೂಷೆ ಪಡೆದುಕೊಳ್ಳಬಹುದು ಎಂದು ಗ್ರಾಪಂ ಅಧ್ಯಕ್ಷೆ ಗೀತಾ ಪರಶುರಾಮ್ ಮತ್ತು ಪಿಡಿಒ ಮಂಜಾನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.