ಕೋವಿಡ್ ಸೋಂಕಿತನ ಅಸಭ್ಯ ವರ್ತನೆ: ಕ್ರಮಕ್ಕೆ ಸೂಚನೆ
Team Udayavani, May 19, 2021, 10:05 PM IST
ಸಾಗರ: ಎರಡು ದಿನಗಳ ಹಿಂದೆ ಜಾಗೃತಿ ಕೆಲಸಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿ ಉಗಿದು, ಅಸಭ್ಯವಾಗಿ ವರ್ತಿಸಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ ಎಚ್. ಹಾಲಪ್ಪ ಹರತಾಳು ಅವರು ಆರೋಪಿ ವಿರುದ್ಧ ತಕ್ಷಣ ದೂರು ದಾಖಲಿಸಬೇಕು ಎಂದು ಪೊೂಲೀಸರಿಗೆ ಸೂಚನೆ ನೀಡಿದ್ದಾರೆ.
ನಗರದ ಲೋಹಿಯಾ ನಗರಕ್ಕೆ ಆಶಾ ಕಾರ್ಯಕರ್ತೆಯರು ಕೋವಿಡ್ ಕಾರ್ಯಪಡೆಯ ಕರ್ತವ್ಯ ನಿರ್ವಹಿಸಲು ತೆರಳಿದಾಗ ವ್ಯಕ್ತಿಯೋರ್ವ ತನಗೆ ಕೋವಿಡ್ ಬಂದಿರುವ ವಿಚಾರ ನಿಮ್ಮಿಂದಾಗಿ ಅಕ್ಕ ಪಕ್ಕದ ಮನೆಯವರಿಗೆ ತಿಳಿದು ನಮ್ಮನ್ನು ಅನುಮಾನದಿಂದ ನೋಡುತ್ತಿದ್ದಾರೆ. ಇದಕ್ಕೆ ನೀವೇ ಕಾರಣ ಎಂದು ಅವಾಚ್ಯವಾಗಿ ನಿಂದಿಸಿ, ಅನುಚಿತವಾಗಿ ವರ್ತಿಸಿದ ಘಟನೆ ನಡೆದಿತ್ತು. ವಿಷಯದ ಮಾಹಿತಿ ಪಡೆದ ಶಾಸಕ ಹಾಲಪ್ಪ ಆಶಾ ಕಾರ್ಯಕರ್ತೆಯರ ಸಭೆ ನಡೆಸಿ, ಕೊರೊನಾ ವಾರಿಯರ್ಸ್ಗಳಾಗಿ ನೀವು ಸೋಂಕಿತರ ಬಗ್ಗೆ ಅರಿವಿಲ್ಲದೆ ನೇರ ಸಂಪರ್ಕದಲ್ಲಿರುತ್ತೀರಿ.
ನಿಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದೀರಿ. ಇಂತಹ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಈ ರೀತಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಮುಂದೆ ಈ ರೀತಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆತ್ಮಸ್ಥೈರ್ಯ ತುಂಬಿದರು. ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ಅವರು ಫೇಸ್ ಶೀಲ್ಡ್ ಮಾಸ್ಕ್ಗಳನ್ನು ವಿತರಿಸಿದರು.
ನಗರಸಭಾಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ. ಮಹೇಶ್, ಸದಸ್ಯರಾದ ಗಣೇಶ್ ಪ್ರಸಾದ್, ಸಂತೋಷ್ ಶೇಟ್, ಮೈತ್ರಿ ಪಾಟೀಲ್, ಸೀಮಾ ಕಿರಣ್ ಸಿಂಗ್, ಆರೋಗ್ಯ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮ.ಸ ನಂಜುಡಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.