ಹಿರೇಮನೆ ಗಿರಿಜನ ಆಶ್ರಮ ಶಾಲೆ ಕೋವಿಡ್ ಕೇರ್ ಸೆಂಟರ್: ಕುಮಾರ್ ಬಂಗಾರಪ್ಪ
Team Udayavani, May 26, 2021, 10:42 PM IST
ಸಾಗರ: ಇನ್ನೊಂದು ವಾರದೊಳಗೆ ತಾಳಗುಪ್ಪ ಹೋಬಳಿಯ ಹಿರೇಮನೆ ಗ್ರಾಮದ ಗಿರಿಜನ ಆಶ್ರಮ ಶಾಲೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗುವುದು ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ಅವರು ಮಂಗಳವಾರ ಹಿರೇಮನೆ ಗಿರಿಜನ ಆಶ್ರಮ ಶಾಲೆಗೆ ಭೇಟಿ ನೀಡಿ ಅ ಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿ ಧಿಗಳ ಜೊತೆ ಪೂರ್ವಭಾವಿ ತಯಾರಿ ಕುರಿತು ಚರ್ಚೆ ನಡೆಸಿ, ಸೊರಬ ಪಟ್ಟಣದಲ್ಲಿ 100 ಹಾಸಿಗೆಯ ಹಾಗೂ ಆನವಟ್ಟಿಯಲ್ಲಿ 250 ಹಾಸಿಗೆಯ ಸಿಸಿಸಿ ಈಗ ಕಾರ್ಯಾರಂಭ ಮಾಡಿದೆ. 50 ಬೆಡ್ ಜತೆಗೆ ಆಮ್ಲಜನಕ ಸಹಿತ ಸೇವೆ ಸಿದ್ಧವಾಗಿ ಸೊರಬದಲ್ಲಿ ಈಗಾಗಲೇ 97 ಜನ ದಾಖಲಾಗಿದ್ದಾರೆ.
ತಾಳಗುಪ್ಪ ಹೋಬಳಿಯ ಸೈದೂರು ಮರತ್ತೂರು, ಮಂಜಿನಕಾನು ಹಾಗೂ ತಾಳಗುಪ್ಪ ಪಟ್ಟಣ ಸೇರಿದಂತೆ 309 ಕೊರೊನಾ ಪಾಸಿಟಿವ್ ಕೇಸ್ ಬಂದವರಿದ್ದು, ಅವರೆಲ್ಲ ಸದ್ಯ ಹೋಂ ಐಸೋಲೇಷನ್ನಲ್ಲಿದ್ದಾರೆ. ಅವರಲ್ಲಿ ಕಷ್ಟದ ಸ್ಥಿತಿಯಲ್ಲಿರುವ ಬಾ ಧಿತರಿಗೆ ಹಿರೇಮನೆಯಲ್ಲಿ 50 ಹಾಸಿಗೆ ಕೇರ್ ಸೆಂಟರ್ ವ್ಯವಸ್ಥೆ ಮಾಡಲಾಗುವುದು.
ಉತ್ತಮ ಗುಣಮಟ್ಟದ ಆಹಾರ, ಸ್ವತ್ಛತೆ, ದಿನಪೂರ್ತಿ ವಿದ್ಯುತ್, ಸಿಸಿ ಕ್ಯಾಮೆರಾ ಮೂಲಕ ಕಣ್ಗಾವಲು ಮುಂತಾದ ಅಚ್ಚುಕಟ್ಟಾದ ವ್ಯವಸ್ಥೆ ಮೂಲಕ ಬಾಧಿತರ ಆರೈಕೆ ನಮ್ಮ ಕರ್ತವ್ಯ ಎಂದರು.
ತಲವಾಟ ಗ್ರಾಪಂ ಕೊವಿಡ್ ನಿರ್ವಹಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು ಜನರ ಸಂಕಷ್ಟಕ್ಕೆ ಸ್ಪಂದಿಸಿದೆ. ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಜನಪ್ರತಿನಿಧಿ ಗಳು ಪಿಡಿಓ, ಕಾರ್ಯದರ್ಶಿ ಪ್ರತಿನಿತ್ಯ ಮನೆ ಭೇಟಿ ಮಾಡಿ ಬಾಧಿ ತರ ಉಸ್ತುವಾರಿ ತೆಗೆದುಕೊಂಡಿದ್ದು ಶ್ಲಾಘನೀಯ ಎಂದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಕಲ್ಪನಾ ಸತೀಶ್, ಕನ್ನಪ್ಪ, ಉದಯ ಗೌಡ್ರು, ನಾಗರತ್ನ ಬಾಲಚಂದ್ರ, ಪರಮೇಶ್ವರ್ ಸೇರಿದಂತೆ ಎಲ್ಲಾ ಇಲಾಖೆಯ ಅ ಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.