ರೈತರಿಂದ ಕರಾಳ ದಿನಾಚರಣೆ
Team Udayavani, May 27, 2021, 10:38 PM IST
ಶಿವಮೊಗ್ಗ: ಕೃಷಿಕಾಯ್ದೆ ವಿರೋಧಿ ಹೋರಾಟಕ್ಕೆ 6 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ರೈತರು ಕಪ್ಪು ಬಾವುಟ ಹಾರಿಸಿ ಕರಾಳ ದಿನಾಚರಣೆ ಆಚರಿಸಿದರು. ಕೇಂದ್ರ ಸರ್ಕಾರ ಜಾರಿಗೆ ತಂದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ನವೆಂಬರ್ 26 ರಿಂದ ಚಳುವಳಿ ನಡೆಯುತ್ತಿದ್ದು, ಇವತ್ತಿಗೆ 6 ತಿಂಗಳು ತುಂಬಿದೆ.
ಕೇಂದ್ರ ಸರ್ಕಾರ ರೈತ ಮುಖಂಡರನ್ನು ಕರೆದು ಮಾತನಾಡಿಸುವ ಸೌಜನ್ಯ ಕೂಡ ತೋರಿಸುತ್ತಿಲ್ಲ ಎಂದು ರೈತರು ದೂರಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದಲ್ಲಿ ಕರಾಳ ದಿನ ಆಚರಿಸಿದರು. ದೇಶಾದ್ಯಂತ ಕೋವಿಡ್ ಇರುವ ಸಂಧರ್ಭದಲ್ಲಿ ರೈತರನ್ನು, ಜನರನ್ನು ಸೇರಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ಮಾಡಲು ಸಾಧ್ಯವಿಲ್ಲದ ಕಾರಣ ರೈತರು ಅವರವರ ಗ್ರಾಮಗಳಲ್ಲಿ, ಮನೆಯ ಮುಂದೆ ಕಪ್ಪು ಬಾವುಟ ಹಾರಿಸುವುದರ ಮುಖಾಂತರ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಎಂ.ಎಸ್.ಪಿ. ಕನಿಷ್ಟ ಬೆಂಬಲ ಬೆಲೆ ಹಿಂದೆ ಇತ್ತು, ಈಗಲೂ ಇದೆ, ಮುಂದೆಯು ಇರುತ್ತದೆ ಎಂದು ಹೇಳುತ್ತದೆ. ಹಾಗಾದರೆ ಕರ್ನಾಟಕದಲ್ಲಿ ಬೆಳೆದಿರುವ ಭತ್ತ, ರಾಗಿ, ಜೋಳ ಇತರೆ ಬೆಳೆಗಳು ಲಾಕ್ಡೌನ್ ನಿಂದ ಕೇಳುವವರೇ ಇಲ್ಲದಂತಾಗಿದೆ. ಅಲ್ಲದೇ ಹಲವು ಬೆಳೆಗಳು ಜಮೀನಿನಲ್ಲೇ ಕೊಳೆತು ನಾಶವಾಗಿದೆ. ಆದರೂ, ಸರ್ಕಾರ ಎಕರೆಗೆ 4000 ರೂ. ಪರಿಹಾರ ಘೋಷಣೆ ಮಾಡಿರುವುದು ರೈತರಿಗೆ ಅವಮಾನ ಮಾಡಿದೆ. ಇದೆ ಕೋವಿಡ್ ಸಂದರ್ಭದಲ್ಲಿ ಆದಾನಿ, ಅಂಬಾನಿಗಳ ಆದಾಯ ಒಂದು ಗಂಟೆಗೆ 20 ಕೋಟಿ ರೂ. ಹೆಚ್ಚಿಗೆ ಆಗಿದೆ.
ಇನ್ನೊಂದು ಕಡೆ 1 ಗಂಟೆಗೆ 20,000 ಜನ ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ದೂರಿದರು. ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಇನ್ನಾದರೂ ಎಚ್ಚೆತ್ತುಕೊಂಡು ಚಳವಳಿ ನಡೆಸುತ್ತಿರುವ ರೈತ ಮುಖಂಡರ ಜೊತೆ ಮಾತುಕತೆ ನಡೆಸಿ ಕಾಯ್ದೆಗಳನ್ನು ವಾಪಾಸ್ಸು ಪಡೆದು ಬೆಂಬಲ ಬೆಲೆ ನೀತಿಯನ್ನು ಶಾಸನ ಬದ್ಧಗೊಳಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಟಿ.ಎಂ. ಚಂದ್ರಪ್ಪ, ಎಂ.ಪರಮಶಿವಯ್ಯ, ಎಚ್.ಎನ್.ರುದ್ರಪ್ಪ, ಎಚ್.ಎನ್. ನಾಗರಾಜಪ್ಪ, ಮಂಜಪ್ಪ, ಲೋಕೇಶ್, ಸುರೇಶ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.