7 ರವರೆಗೂ ಬಿಗೀ ಬೀಗ ತೆಗೆಯೊಲ್ಲ
Team Udayavani, May 30, 2021, 9:38 PM IST
ಶಿವಮೊಗ್ಗ: ಜಿಲ್ಲೆಯಾದ್ಯಂತ ಮೇ 31ರಿಂದ ಜೂನ್ 7ರವರೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಶನಿವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿರಂತರವಾಗಿ ಇಳಿಮುಖವಾಗುತ್ತಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಕಡಿಮೆಯಾಗುತ್ತಿಲ್ಲ. ಲಾಕ್ ಡೌನ್ ಜಾರಿಯಲ್ಲಿದ್ದರೂ, ಜನ ಅನಗತ್ಯವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸೋಮವಾರ 10 ಗಂಟೆಯಿಂದ ಒಂದು ವಾರ ಕಾಲ ಕಟ್ಟು ನಿಟ್ಟಿನಿಂದ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಈ ಅವ ಧಿಯಲ್ಲಿ ಔಷ ಧ ಅಂಗಡಿಗಳು, ಆಯಾ ಪ್ರದೇಶದಲ್ಲಿರುವ ತರಕಾರಿ, ಹಾಲು, ದಿನಸಿ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸಗಟು ದಿನಸಿ ಮಳಿಗೆಗಳು, ಎಪಿಎಂಸಿಯಲ್ಲಿ ಮಾರಾಟಕ್ಕೆ ಅವಕಾಶ ಇಲ್ಲ. ಆದರೆ ಸಗಟು ವ್ಯಾಪಾರಿಗಳು ಚಿಲ್ಲರೆ ಅಂಗಡಿಗಳಿಗೆ ಸರಕುಗಳನ್ನು ನೇರವಾಗಿ ಪೂರೈಕೆ ಮಾಡಬಹುದು. ತಳ್ಳುಗಾಡಿಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ನಿಗದಿಪಡಿಸಲಾಗಿರುವ ಪ್ರದೇಶ ವ್ಯಾಪ್ತಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಚೇರಿಗಳು ಇರುವುದಿಲ್ಲ.
ಕನಿಷ್ಠ ಮಟ್ಟದಲ್ಲಿ ಬ್ಯಾಂಕ್ ಸೇವೆ ಇರಲಿದೆ ಎಂದು ಹೇಳಿದರು. ಹೊಟೇಲ್ನಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿದೆ. ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಆದರೆ ಮದುವೆ ಹಿಂದಿನದಿನ, ಮಾರನೇ ದಿನದ ಸಮಾರಂಭಗಳು, ಗೃಹಪ್ರವೇಶ ಇವುಗಳಿಗೆಲ್ಲ ಅನುಮತಿ ಇಲ್ಲ. ನಿಯಮ ಉಲ್ಲಂಘಿಸಿ ಸಮಾರಂಭಗಳನ್ನು ಆಯೋಜಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈಗಾಗಲೇ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗಿರುವ ಅಗತ್ಯ ಕೈಗಾರಿಕಾ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುವುದು. ಅಗತ್ಯ ಸರ್ಕಾರಿ ಕಾಮಗಾರಿಗಳು ಹಾಗೂ ಮಾನ್ಸೂನ್ ಪೂರ್ವ ಕಾಮಗಾರಿಗಳನ್ನು ಬಿಟ್ಟು ಬೇರೆ ಎಲ್ಲಾ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ಇಲ್ಲ. ಲಾಕ್ಡೌನ್ ಅವ ಧಿಯಲ್ಲಿ ಅನಗತ್ಯವಾಗಿ ರಸ್ತೆಗೆ ಬರುವ ವಾಹನಗಳನ್ನು ಜಪ್ತಿ ಮಾಡುವುದು ಮಾತ್ರವಲ್ಲದೆ, ಸವಾರರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಕಳೆದ 7ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಲಕ್ಷಿಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.