ಇಂಧನ ಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ
Team Udayavani, Jun 6, 2021, 10:03 PM IST
ಶಿವಮೊಗ್ಗ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕೊರೊನಾ ಎರಡನೇ ಅಲೆಯಿಂದ ದೇಶಾದ್ಯಂತ ಜನ ತತ್ತರಿಸಿದ್ದು ಇಂತಹ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದೆ.
ಅಂತಾರಾಷ್ಟಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಎಕೈÕಸ್ ಸುಂಕವನ್ನು ಹೆಚ್ಚಿಸಿ, ಕೊರೊನಾ ಲಾಕ್ಡೌನ್ ನಿಂದ ತತ್ತರಿಸಿರುವ ದೇಶದ ಸಾಮಾನ್ಯನ ಮೇಲೆ ಹೊರೆ ಹಾಕುತ್ತಿದೆ. ಸಮರ್ಪಕವಾಗಿ ಕೊರೊನಾ ನಿರ್ವಹಿಸದೇ ಅವೈಜ್ಞಾನಿಕ ಲಾಕ್ ಡೌನ್ ಘೋಷಣೆ ಮಾಡಿ ಯಾವುದೇ ವಿಶೇಷ ಪ್ಯಾಕೇಜ್ ಸಹ ನೀಡದೆ ದೇಶದ ಜನರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಎಲ್ಲಾ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನೂರು ರೂಪಾಯಿ ಗಡಿಯನ್ನು ದಾಟಿದೆ. ಸರಕು ಸಾಗಾಣಿಕೆ ಮೇಲೆ ಇದರ ಹೊಡೆತ ಬೀಳುವುದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತದೆ ಎಂದರು. ಈ ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ರಾಷ್ಟಪತಿಗಳು ಮಧ್ಯಪ್ರವೇಶಿಸಿ ಇಂತಹ ಜನವಿರೋಧಿ ನೀತಿಯ ಸರ್ಕಾರವನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್. ಪಿ . ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ಈ.ಟಿ. ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ನ ಎಸ್ ಕುಮಾರೇಶ್, ಪದಾಧಿ ಕಾರಿಗಳಾದ ಎಂ. ರಾಹುಲ್, ಗಗನ್ ಗೌಡ, ಸಚಿನ್ , ರಾಹುಲ್ , ವೆಂಕಟೇಶ್ ಕಲ್ಲೂರ್, ಸಂತೋಷ, ರಾಕೇಶ್, ನವೀನ್, ನಂದನ್ ,ಚೇತನ್, ವಿನಯ್ ದೇವರಾಜ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.