ಆಶ್ರಯ ಮನೆ ಕಾಮಗಾರಿ ಶೀಘ್ರ ಮುಗಿಸಿ-ವಿತರಿಸಿ
Team Udayavani, Jun 10, 2021, 11:01 PM IST
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದ್ದು, ಕೂಡಲೆ ಈ ಕಾಮಗಾರಿ ಮುಗಿಸಿ ಮನೆಗಳನ್ನು ಶೀಘ್ರ ವಿತರಿಸಲು ಆದೇಶಿಸಬೇಕೆಂದು ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಪಾಲಿಕೆ ಕಾಂಗ್ರೆಸ್ ಸದಸ್ಯರನ್ನೊಳಗೊಂಡ ನಿಯೋಗ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಗೋವಿಂದಾಪುರದಲ್ಲಿ ಆಶ್ರಯ ಜಿ+2 ಮಾದರಿಯ ಮನೆಗಳನ್ನು ನಿರ್ಮಿಸುತ್ತಿದ್ದು, ಅದರ ಕಾಮಗಾರಿ ವಿಳಂಬವಾಗುತ್ತಿದೆ. ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ನಿಗಮದಿಂದ ಶಿವಮೊಗ್ಗ ನಗರದಲ್ಲಿ ಸ್ಲಂಗಳನ್ನು ಗುರುತಿಸಿ ಎಸ್ಸಿ, ಎಸ್ಟಿ ವರ್ಗದವರಿಗೆ 49,671ರೂ., ಸಾಮಾನ್ಯ ವರ್ಗದವರಿಗೆ 73,671 ರೂ. ಡಿಡಿ ಮೂಲಕ ಕಟ್ಟಿಸಿಕೊಂಡು ವರ್ಷಗಳೇ ಕಳೆದರೂ ಮನೆ ನಿರ್ಮಿಸಿಕೊಡಲು ವಿಳಂಬ ಮಾಡಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. 2019 ರಲ್ಲಿ ಶಿವಮೊಗ್ಗದಲ್ಲಿ 964 ಮನೆ ಕಟ್ಟಿಕೊಡಲು ಕೊಳಚೆ ನಿರ್ಮೂಲನಾ ಮಂಡಳಿಗೆ ಹಣ ನೀಡಲಾಗಿತ್ತು.
ಟೆಂಡರ್ದಾರರಿಗೆ ಮನೆ ಕಟ್ಟಿಕೊಡಲು ಏಪ್ರಿಲ್ ತಿಂಗಳ ಅವ ಧಿ ಮುಗಿದಿದ್ದು, ಕೇವಲ 342 ಮನೆಗಳನ್ನು ಮಾತ್ರ ಕಟ್ಟಲಾಗಿದೆ. ಉಳಿದ 622 ಮನೆಗಳು ಯಾವುದೇ ರೀತಿಯ ಪ್ರಗತಿ ಕಂಡಿಲ್ಲ. ಫಲಾನುಭವಿಗಳು ಸ್ಲಂಬೋರ್ಡ್ ಅ ಧಿಕಾರಿಗಳನ್ನು ಭೇಟಿ ಮಾಡಿದ್ದರೂ ಪ್ರತಿನಿತ್ಯ ಒಂದಲ್ಲ ಒಂದು ಕಾರಣ ನೀಡುತ್ತಿದ್ದಾರೆ ಎಂದು ದೂರಲಾಗಿದೆ.
ಕಾರ್ಮಿಕರ ಕಾರ್ಡ್ ಇದ್ದವರಿಗೆ 1.62 ಲಕ್ಷ ರೂ. ಸಾಲ ಕೊಡುತ್ತೇವೆಂದು ಹೇಳಿದ್ದರು. ಆದರೆ ಕಾರ್ಡ್ ಇದ್ದರೂ ಈಗ ಬ್ಯಾಂಕ್ನಿಂದ ಸಾಲ ಪಡೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ಬ್ಯಾಂಕ್ನಿಂದ ಸಾಲ ಸಿಗದೆ ಇದ್ದಲ್ಲಿ ಮನೆಗಳು ಅಪೂರ್ಣವಾದಂತೆ. ಬ್ಯಾಂಕ್ ಸಾಲ ಆಗದೆ ಇರುವವರಿಗೆ ಅಸ್ತಿಪಂಜರದಂತಹ ಮನೆ ಕಟ್ಟಿಕೊಡಲಾಗುತ್ತಿದೆ.
ಕೂಡಲೆ ನನೆಗುದಿಗೆ ಬಿದ್ದಿರುವ ಮನೆಗಳನ್ನು ಕಟ್ಟುವ ಕೆಲಸ ಪೂರ್ಣಗೊಳಿಸಬೇಕು ಹಾಗೂ ಆಶ್ರಯ ಮನೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಬಿ.ಎ.ರಮೇಶ್ ಹೆಗ್ಡೆ, ಎಚ್.ಸಿ. ಯೋಗೀಶ್, ಆರ್.ಸಿ. ನಾಯಕ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.